Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ


Team Udayavani, Apr 23, 2024, 12:25 AM IST

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಘನತೆ ಕಾಪಾಡುತ್ತಿಲ್ಲ. ದೇಶ ರಕ್ಷಿಸುವ ಪ್ರಧಾನಿ ಬೇಕೇ ಹೊರತು ಕ್ರಿಕೆಟ್‌ ಕಾಮೆಂಟ್ರಿಯನ್‌ ಅಥವಾ ಇವೆಂಟ್‌ ಮ್ಯಾನೇಜರ್‌ ಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಏಕಚಕ್ರಾಧಿಪತಿಯಂತೆ ವರ್ತಿಸು ತ್ತಿದ್ದಾರೆ. ಹೀಗೆ ಮೆರೆದವರಲ್ಲಿ ಯಾರೂ ದೀರ್ಘ‌ಕಾಲ ಅಧಿಕಾರದಲ್ಲಿ ಇರಲಿಲ್ಲ. ಎನ್‌ಡಿಎ, ಬಿಜೆಪಿ ಎಲ್ಲ ಬಿಟ್ಟು ಬರೀ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಅಟಲ್‌ ಬಿಹಾರ ವಾಜಪೇಯಿ, ಅಡ್ವಾಣಿಯವರು ನೇಷನ್‌ ಫ‌ಸ್ಟ್‌, ಪಾರ್ಟಿ ನೆಕ್ಸ್ಟ್ ಆ್ಯಂಡ್‌ ಸೆಲ್ಫ್ ಲಾಸ್ಟ್‌ ಎನ್ನುತ್ತಿದ್ದರು. ಈಗ ಮೋದಿಯವರು ಅದನ್ನೆಲ್ಲ ಬದಲು ಮಾಡಿದ್ದಾರೆ. ಹಾಗಾಗಿ ಈ ಬಾರಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಹೇಳಿದರು.

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಮೋದಿಯವರು ಮುಂದಾಗಿದ್ದಾರೆ. ಲೋಕಸಭೆ ಚುನಾವಣೆ ನಡೆಸಲು ಮೂರು ತಿಂಗಳು ಬೇಕು. ಗ್ರಾ.ಪಂ., ತಾ.ಪಂ., ಜಿ.ಪಂ. ವಿಧಾನಸಭೆ, ಲೋಕಸಭೆ ಎಲ್ಲ ಒಟ್ಟಿಗೆ ನಡೆಸಲು ಒಂದು ವರ್ಷ ಬೇಕಾಗಬಹುದು. ಇದಕ್ಕಾಗಿ ಸಂವಿಧಾನ ತಿದ್ದುಪಡಿ, ಆಡಳಿತಾತ್ಮಕ ತಿದ್ದುಪಡಿ ತರಬೇಕು. ಇವೆಲ್ಲ ಸುಲಭದಲ್ಲಿ ಅನುಷ್ಠಾನವಾಗುವಂಥದ್ದಲ್ಲ ಎಂದರು.

ಈಗ ಕೇಂದ್ರದಲ್ಲಿ ನಡೆಯುತ್ತಿರುವ ಸರಕಾರದ ಬಗ್ಗೆ ಜನರಲ್ಲಿ ಹತಾಶೆ ಮೂಡಿದೆ. ಲಾವ ರಸದಂತೆ ಒಂದು ಶಕ್ತಿ ದೇಶಾದ್ಯಂತ ಗುಪ್ತವಾಗಿ ಸಂಚರಿಸುತ್ತಿದ್ದು, ಚುನಾವಣೆಯಲ್ಲಿ ಜ್ವಾಲಾಮುಖೀಯಂತೆ ಸ್ಫೋಟ ವಾಗಲಿದೆ. ಬಿಜೆಪಿ ಒಂದೊಂದು ಚುನಾವಣೆಗೂ ಒಂದೊಂದು ವಿಷಯ ತರುತ್ತದೆ. 2019ರಲ್ಲಿ ಸರ್ಜಿಲ್‌ ಸ್ಟ್ರೈಕ್‌ ಎಂದಿದ್ದರು. ಈಗ 3ನೇ ಅತಿದೊಡ್ಡ ಆರ್ಥಿಕತೆ ಎನ್ನುತ್ತಿದ್ದಾರೆ. ಆದರೆ, ಆರ್ಥಿಕವಾಗಿ ಚೀನಾ ತುಂಬಾ ಮುಂದಿದೆ ಎಂದು ವಿವರಿಸಿದರು.

ಸಮಸ್ಯೆ ಬಗೆಹರಿಸಿಲ್ಲ
ಅಡಿಕೆ ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ಅಡಿಕೆ ಬೆಲೆ ಕುಸಿತ ನಿಯಂತ್ರಣದಲ್ಲೂ ವಿಫ‌ಲವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರ ಬಂದ ಕೂಡಲೇ ಅಡಿಕೆಗೆ ಸಂಬಂಧಿಸಿದಂತೆ ಭೂತಾನ್‌ ಹಾಗೂ ಬರ್ಮಾದ ಜತೆ ಮಾಡಿಕೊಂಡ ಒಪ್ಪಂದವನ್ನು ರದ್ದು ಪಡಿಸಲಿದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌, ನಟ ಶಿವರಾಜ ಕುಮಾರ್‌, ಪ್ರಮುಖರಾದ ಪ್ರಸಾದ್‌ ಕಾಂಚನ್‌, ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.