ಕುಂದಾಪುರ: ಲಾಡ್ಜ್ನಲ್ಲಿ ಜೋಡಿ ಆತ್ಮಹತ್ಯೆ


Team Udayavani, Oct 1, 2018, 10:30 AM IST

kundapura.jpg

ಕುಂದಾಪುರ: ಶಾಸ್ತ್ರೀ ಸರ್ಕಲ್‌ ಸಮೀಪದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಶೃಂಗೇರಿ ಮೂಲದ 43 ವರ್ಷದ ವ್ಯಕ್ತಿ ಹಾಗೂ 30ರ ಹರೆಯದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಗ್ಗೆ ಸುಮಾರು 11.30ರ ಸುಮಾರಿಗೆ ಬೆಳಕಿಗೆ ಬಂದಿದೆ.

ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮದ ಸಿಂಧುವಳ್ಳಿಯ ಗುರುಮೂರ್ತಿ (43) ಹಾಗೂ ಅದೇ ಗ್ರಾಮದ ನೇತ್ರಳ್ಳಿ ನಿವಾಸಿ ರಮೇಶ್‌ ಮೊಗವೀರ ಅವರ ಪತ್ನಿ ಶಾರದಾ (30) ಆತ್ಮಹತ್ಯೆ ಮಾಡಿಕೊಂಡವರು.

ಬೆಳಗ್ಗೆ 11 ಗಂಟೆಯಾದರೂ ಬಾಗಿಲು ತೆರೆಯದ ಕಾರಣ ಲಾಡ್ಜ್ ಸಿಬಂದಿ ಬಾಗಿಲು ಬಡಿದರು. ಆದರೂ ಪ್ರತಿಕ್ರಿಯೆ ಬಾರದ್ದರಿಂದ ಸಂಶಯಗೊಂಡು ಕಿಟಕಿ ಮೂಲಕ ಇಣುಕಿ ನೋಡಿದಾಗ ಗುರುಮೂರ್ತಿ ಹಾಸಿಗೆಯ ಮೇಲೆ ಹಾಗೂ ಶಾರದಾ ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಇಬ್ಬರ ಮನೆಯವರೂ ಶೃಂಗೇರಿಯಿಂದ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯ ಬಾಗಿಲು ಒಡೆಯಲಾಯಿತು.

ಗುರುಮೂರ್ತಿ ಮನೆಗೆ ಶಾರದಾ ಹಾಗೂ ಅವರ ಪತಿ ರಮೇಶ್‌ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಈ ವೇಳೆ ಶಾರದಾ ಹಾಗೂ ಗುರುಮೂರ್ತಿ ಮಧ್ಯೆ ಆತ್ಮೀಯತೆ ಬೆಳೆಯಿತು ಎನ್ನಲಾಗಿದೆ. ಅವರಿಬ್ಬರ ಸಂಬಂಧ ಊರಿನವರಿಗೆ ಗೊತ್ತಾಗುತ್ತದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಗುರುಮೂರ್ತಿ ಬೆಂಗಳೂರಿನಲ್ಲಿರುವುದಾಗಿ ಸಂಬಂಧಿಕರಿಗೆ ಫೋನ್‌ ಮೂಲಕ ತಿಳಿಸಿದ್ದಾರೆ. ಶಾರದಾ ಅವರು ಸೆ. 23ರಂದು ಪುತ್ರಿಯೊಂದಿಗೆ ಗಂಡನ ಮನೆಯಿಂದ ತಾಯಿ ಮನೆಗೆ ಬಂದಿದ್ದು, ಸೆ. 24ರಂದು ಪುತ್ರಿಯ ಟಿಸಿ ತರಲು ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ, ಅಲ್ಲಿಂದ ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಇಬ್ಬರೂ ಕೂಡ ಸೆ. 24ರಂದು ಊರಿಂದ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಶಾಸ್ತ್ರೀ ಸರ್ಕಲ್‌ ಸಮೀಪದ ಹೊಟೇಲ್‌ಸೆ. 26ರಂದು ಬಂದ ಅವರು ದಂಪತಿಯೆಂದು ಮಾಹಿತಿ ನೀಡಿ ಕೊಠಡಿ ಪಡೆದಿದ್ದರು. ಸೆ. 29ರಂದು ರಾತ್ರಿ 10 ಗಂಟೆಯ ಬಳಿಕ ರವಿವಾರ ಬೆಳಗ್ಗಿನ ನಡುವೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಎಡಿಶನಲ್‌ ಎಸ್ಪಿ ಕುಮಾರ ಚಂದ್ರ ಭೇಟಿ ನೀಡಿದರು. ಎಸ್‌ಐ ಹರೀಶ್‌ ಆರ್‌. ನಾಯ್ಕ, ಪೊಲೀಸ್‌ ಸಿಬಂದಿ ಚೇತನ್‌ ಮತ್ತಿತರರು ಭೇಟಿ ನೀಡಿ, ಮೃತದೇಹವನ್ನು ಹೊರತೆಗೆಯಲು ಸಹಕರಿಸಿದರು. ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಎರಡೂ ಕಡೆಯವರಿಗೂ ಮೃತದೇಹ ವನ್ನು ಹಸ್ತಾಂತರಿಸಲಾಯಿತು.

ಇಬ್ಬರೂ ವಿವಾಹಿತರು
ಇಬ್ಬರೂ ವಿವಾಹಿತರಾಗಿದ್ದು, ಮಕ್ಕಳನ್ನು ಹೊಂದಿದ್ದಾರೆ. ಗುರುಮೂರ್ತಿ ಕೃಷಿಕರಾಗಿದ್ದು 8 ವರ್ಷದ ಹೆಣ್ಣು ಮಗುವಿದ್ದರೆ, ಗೃಹಿಣಿಯಾಗಿರುವ ಶಾರದಾ ಅವರಿಗೆ ರಮೇಶ್‌ ಅವರೊಂದಿಗೆ 10 ವರ್ಷದ ಹಿಂದೆ ವಿವಾಹವಾಗಿದ್ದು, 8 ವರ್ಷದ ಹೆಣ್ಣು ಮಗುವಿದೆ.

ಪತಿ ವಿರುದ್ಧ ದೂರು
ಕೊಠಡಿಯಲ್ಲಿ ಶಾರದಾ ಬರೆದಿಟ್ಟಿದ್ದ ಡೆತ್‌ನೋಟ್‌ ಲಭಿಸಿದ್ದು, “ನನ್ನ ಸಾವಿಗೆ ಗಂಡನ ಕಿರುಕುಳವೇ ಕಾರಣ’ ಎಂಬ ಉಲ್ಲೇಖವಿದೆ. ಅದರಂತೆ ಆಕೆಯ ಸಹೋದರ ರಮೇಶ್‌ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಪತಿ ರಮೇಶ್‌ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.