ಕಿರುತೆರೆಯ ಬಾಗಿಲನೂ ತಟ್ಟಿದ ಕೊರೊನಾ


Team Udayavani, Mar 24, 2020, 12:32 AM IST

ಕಿರುತೆರೆಯ ಬಾಗಿಲನೂ ತಟ್ಟಿದ ಕೊರೊನಾ

ಮಣಿಪಾಲ: ಚಿತ್ರಪ್ರದರ್ಶನಕ್ಕೆ ಮಾತ್ರ ತಟ್ಟಿದ್ದ ಕೋವಿಡ್-19 ಈಗ ಕಿರುತೆರೆ ಉದ್ಯಮಕ್ಕೂ ಏಟು ಕೊಟ್ಟಿದೆ. ಮಾರ್ಚ್‌ 3ನೇ ವಾರದಿಂದ ಚಿತ್ರೀಕರಣ ಸಂಪೂರ್ಣ ನಿಲ್ಲಿಸಲಾಗಿದೆ. ಪ್ರಸಾರಣ ಕೇಂದ್ರದಿಂದಲೇ ಅಧಿಕೃತ ಮಾಹಿತಿ ಬಂದಿರುವ ಕಾರಣ ಮಾರ್ಚ್‌ 21ಕ್ಕೆ ಚಿತ್ರೀಕರಣ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ವಾಹಿನಿಗಳ ನಿದೇರ್ಶಕರಿಗೆ ಆತಂಕ ಆರಂಭವಾಗಿದೆ.

ಕೊರೊನಾ ಆಘಾತ ದಿನೇ ದಿನೇ ಹೆಚ್ಚುತ್ತಿದೆ. ಆರಂಭದಲ್ಲೇ ಇಷ್ಟು ಪರಿಣಾಮ ಹೊಂದಿದ್ದು, ಕಡೆಯ ಹಂತದಲ್ಲಿ ಇದು ಮತ್ತಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರಿಗೂ ತೊಂದರೆಯಾಗದಂತೆ ಶೂಟಿಂಗ್‌ ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ.

ಮಾ. 31ರ ವರೆಗೆ ಸಮಸ್ಯೆ ಇಲ್ಲ
ಈಗಾಗಲೇ ಚಿತ್ರೀಕರಣ ಸ್ಥಗಿತಗೊಂಡು ಎರಡು ದಿನಗಳು ಕಳೆದಿದ್ದು, ಇದರಿಂದ ಮುಂಬರುವ ಸಂಚಿಕೆಗಳ ಪ್ರಸಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಆಂದರೆ ಮಾರ್ಚ್‌ 31ರ ವರೆಗೆ ಪ್ರಸಾರ ಮಾಡುವಷ್ಟು ಸಂಚಿಕೆಗಳನ್ನು ಕನ್ನಡದ ಎಲ್ಲಾ ಖಾಸಗಿ ಟಿವಿ ಮಾಧ್ಯಮಗಳು ಹೊಂದಿದೆ. ಕಿರುತೆರೆಯಲ್ಲಿ ಧಾರಾವಾಹಿಗಳಿಗೆ ಸಾಮಾನ್ಯವಾಗಿ 15ರಿಂದ 20 ದಿನಗಳಿಗೆ ಸಾಕಾಗುವಷ್ಟು ಸ್ಟೋರಿ ಬ್ಯಾಂಕಿಂಗ್‌ ಮಾಡಿಕೊಳ್ಳಲಾಗಿರುತ್ತದೆ. ರಿಯಾಲಿಟಿ ಶೋಗಳಿಗೆ ಮಾತ್ರ ಸಮಸ್ಯೆಯಾಗಬಹುದು.

ಪರ್ಯಾಯ ದಾರಿ
ಈ ಹಿಂದೆ ಹಲವಾರು ಧಾರಾವಾಹಿ ತಂಡಗಳು ಶೀರ್ಷಿಕೆ ಹಾಡು ಪ್ರಸಾರದಿಂದ ದೂರ ಉಳಿದಿದ್ದರು. ಆದರೆ ಸಂಚಿಕೆಗಳನ್ನು ಮುಂದಿನ ದಿನಗಳಿಗೆ ಉಳಿಸಿಕೊಳ್ಳಲು ಇದೀಗ ನಾಲ್ಕರಿಂದ ಐದು ನಿಮಿಷದವರಿಗೆ ಶೀರ್ಷಿಕೆ ಹಾಡನ್ನು ಪ್ರಸಾರ ಮಾಡಲಾಗುತ್ತಿದೆ. ರೀ ಕೆಪ್‌ ಸಮಯವನ್ನು 15 ಸೆಕೆಂಡ್‌ಗಳ ಕಾಲ ಹೆಚ್ಚಿಸಲಾಗಿದೆ. ಇದರೊಂದಿಗೆ ಈ ಹಿಂದೆ 20 ನಿಮಿಷಗಳು ಪ್ರಸಾರವಾಗುತ್ತಿದ್ದ ಧಾರವಾಹಿಯನ್ನು ಇದೀಗ 18 ನಿಮಿಷಕ್ಕೆ ಇಳಿಸಲಾಗುತ್ತಿದೆ.ಇದರಿಂದ ಸುಮಾರು 2 ಸಂಚಿಕೆಗಳಷ್ಟು ವೀಡಿಯೋ ಉಳಿತಾಯವಾಗಲಿದೆ.

ಯಾಕೆ ಈ ಕ್ರಮ
ರಿಯಾಲಿಟಿ ಶೋಗಳ ಚಿತ್ರೀಕರಣದಲ್ಲಿ ನೂರಕ್ಕಿಂತ ಹೆಚ್ಚು ಮಂದಿ ಸೇರಿರುತ್ತಾರೆ. ಇದು ಕೊರೊನಾ ತಡೆಯಲು ನೀಡಲಾದ ಸೂಚನೆಗಳಿಗೆ ವಿರುದ್ಧವಾಗಿದ್ದು, ಹಾಗಾಗಿ ಚಿತ್ರೀಕರಣವನ್ನು ನಿಲ್ಲಿಸಲೇಬೇಕಾಗಿದೆ. ಶೂಟಿಂಗ್‌ ನಿಲ್ಲಿಸಿರುವುದರಿಂದ ಸದ್ಯಕ್ಕೆ ಧಾರಾವಾಹಿಗಳು ಸೇರಿದಂತೆ ರಿಯಾಲಿಟಿ ಶೋಗಳ ಪ್ರಸಾರಕ್ಕೆ ತೊಂದರೆಯಾಗುವುದಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹಳೇ ಎಪಿಸೋಡ್‌ಗಳನ್ನು ಮತ್ತೆ ಪ್ರಸಾರ ಮಾಡಬೇಕಾಗುತ್ತದೆ ಎಂಬುದು ಚಾನೆಲ್‌ ಮುಖ್ಯಸ್ಥರ ಮಾತು.

ರೇಟಿಂಗ್‌ ಕುಸಿತದ ಆತಂಕ
ಕೋವಿಡ್-19 ಸುದ್ದಿಗಳ ಮೊರೆ ಹೋಗುತ್ತಿರುವ ಜನರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿ ವಾಹಿನಿ ವೀಕ್ಷಣೆಯಲ್ಲಿ ನಿರತರಾಗುತ್ತಿದ್ದಾರೆ. ಈ ಬೆಳವಣಿಗೆಯಿಂದಾಗಿ ಧಾರವಾಹಿಗಳಿಗೆ ಹೊಡೆತ ಬೀಳಲಿದ್ದು ರೇಟಿಂಗ್‌ ಅಂಕಗಳ ಮೇಲೆ ಪರಿಣಾಮ ಬೀರಲಿದೆ. ಮುಂಬರುವ ದಿನಗಳಲ್ಲಿ ರೇಟಿಂಗ್‌ ಬರದೇ ಇರುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಪರಿಣತರು.

31ರ ಅನಂತರ ಕಷ್ಟ
ಸದ್ಯ ಇರುವ ಚಿತ್ರೀಕರಣ ಮಾರ್ಚ್‌ 31ರ ವರೆಗೆ ಮಾತ್ರ ಹೊಂದಾಣಿಕರಯಾಗಲಿದ್ದು, ಬಳಿಕದ ದಿನಗಲ್ಲಿ ಕಷ್ಟವಾಗಲಿದೆ. ಅದೂ ಅಲ್ಲದೇ ಒಮ್ಮೆ ಚಿತ್ರೀಕರಣಗೊಂಡ ವಿಡಿಯೋ ಸಂಕಲನವಾಗಿ ಧಾರವಾಹಿ ಪ್ರಸಾರಕಾರ ಕೈ ಸೇರಲು 3ರಿಂದ 4 ದಿನಗಳು ಬೇಕಾಗುವುದರಿಂದ ಮಾರ್ಚ್‌ 31ರ ಒಳಗೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದಿನ ಸಂಚಿಕೆಗಳ ಪ್ರಸಾರಕ್ಕೆ ಕಷ್ಟ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.