ಹೋಮ್ ಕ್ವಾರೆಂಟೈನ್ ನಲ್ಲಿರುವವರು ಮನೆಯಿಂದ ಹೊರಗೆ ಬಂದ್ರೆ ಹೀಗೆ ಮಾಡಿ ; ಉಡುಪಿ ಡಿ.ಸಿ. ಸಲಹೆ
ಈ ವಿಷಯಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ…
Team Udayavani, Mar 26, 2020, 2:16 PM IST
ಉಡುಪಿ: ಕೋವಿಡ್ 19 ವೈರಸ್ ಹರಡುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಾಕ್ ಡೌನ್ ಸಹಿತ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಜಿಲ್ಲಾಡಳಿತವೂ ಸಹ ಆಯಾಯ ಜಿಲ್ಲೆಯಲ್ಲಿರುವ ಹೋಮ್ ಕ್ವಾರೆಂಟೈನ್ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ.
ಉಡುಪಿ ಜಿಲ್ಲೆಯಲ್ಲಿ ಇತ್ತೀಚಿಗೆ ಒಂದು ಸಾವಿರಕ್ಕೂ ಹೆಚ್ಚು ಜನ ವಿದೇಶಗಳಿಂದ ಆಗಮಿಸಿದ್ದಾರೆ. ಮತ್ತು ಅವರೆಲ್ಲರನ್ನು ಗುರುತಿಸಿ ಈಗಾಗಲೇ ಹೋಮ್ ಕ್ವಾರೆಂಟೈನ್ ನಲ್ಲಿ ಇಡಲಾಗಿದೆ. ಇಂತವರು ತಮ್ಮ ಮನೆಗಳಿಂದ ಹೊರಗೆ ಬರದಂತೆ ಗಮನಿಸುವಲ್ಲಿ ಇದೀಗ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ. ಹೋಮ್ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿಗಳ ಮನೆಯ ಆಸುಪಾಸಿನಲ್ಲಿರುವವರು ಈ ವ್ಯಕ್ತಿಗಳು ಒಂದುವೇಳೆ ಮನೆಯಿಂದ ಹೊರ ಬಂದಲ್ಲಿ ಆ ಕುರಿತಾಗಿ ತಕ್ಷಣವೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಗದೀಶ್ ಅವರು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳೀಯಾಡಳಿತ ಸಂಪೂರ್ಣವಾಗಿ ಈ ಕುರಿತಾಗಿ ನಿಗಾ ವಹಿಸುವ ಕೆಲಸದಲ್ಲಿ ನಿರತವಾಗಿದೆ. ಇವರೆಲ್ಲರ ಜೊತೆ ಸಾರ್ವಜನಿಕರು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹಾಗೆಯೇ, ಹೋಮ್ ಕ್ವಾರೆಂಟೈನ್ ಆಗಿರುವ ವ್ಯಕ್ತಿಗಳಿಗೆ ಜಿಲ್ಲಾಧಿಕಾರಿ ಕಛೇರಿಯಿಂದಲೇ ಫೋನ್ ಕರೆ ಮಾಡಿ ವಿಚಾರಿಸುವ ಕೆಲಸವೂ ನಡೆಯುತ್ತಿದೆ. ಹಾಗೆಯೇ ಹೋಮ್ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿಗಳು ತಮ್ಮ ಮನೆಗಳಿಂದ ಯಾವುದೇ ಕಾರಣಕ್ಕೆ ಹೊರಗೆ ಬರಬಾರದು ಹಾಗೆ ಹೊರಗೆ ಬಂದ ಮಾಹಿತಿ ಸಿಕ್ಕಿದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ