ಕೋವಿಡ್‌-19 ಐಸಿಯು ರೋಗಿ ಪ್ರಮಾಣ ಶೂನ್ಯ ಸಾಧನೆ; ಕಾರ್ಕಳ ತಾ| ಆಸ್ಪತ್ರೆ ರಾಜ್ಯಕ್ಕೆ ಮಾದರಿ

ಕಾರ್ಕಳ ತಾ| ಆಸ್ಪತ್ರೆ ರಾಜ್ಯಕ್ಕೆ ಮಾದರಿ

Team Udayavani, Nov 14, 2020, 5:30 AM IST

Karkala

ಕಾರ್ಕಳ: ಕೋವಿಡ್‌-19 ಸೋಂಕು ರೋಗವನ್ನು ಸೋಲಿಸುವ ಹೋರಾಟದಲ್ಲಿ ಕಾರ್ಕಳ ತಾಲೂಕು ದಾಪುಗಾಲಿಟ್ಟಿದೆ. ಶೂನ್ಯ ರೋಗಿ ಮೂಲಕ ರಾಜ್ಯದಲ್ಲೆ ಮಾದರಿ ತಾಲೂಕು ಆಗಿ ಹೊರಹೊಮ್ಮಿದೆ. ತಾಲೂಕಿನ ಕೋವಿಡ್‌-19 ಐಸಿಯು ಸೆಂಟರ್‌ನಲ್ಲಿದ್ದ ಇಬ್ಬರು ರೋಗಿ ಗಳು ಬುಧವಾರ ಗುಣಮುಖರಾಗಿ ಬಿಡುಗಡೆಯಾಗುವ ಮೂಲಕ ಕೋವಿಡ್‌-19 ಐಸಿಯು ಸೆಂಟರ್‌ ಶೂನ್ಯ ರೋಗಿಗಳನ್ನು ಹೊಂದಿದ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಗುರುವಾರ ಐಸಿಯುಗೆ ಯಾವುದೇ ರೋಗಿ ದಾಖಲಾಗಿಲ್ಲ.

990 ಮಂದಿಗೆ ಚಿಕಿತ್ಸೆ
ಮೇ 25ರಂದು ಕೋವಿಡ್‌ ಆಸ್ಪತ್ರೆಯನ್ನು ತಾ| ನಲ್ಲಿ ತೆರೆಯಲಾಗಿತ್ತು. ಇಷ್ಟರವರೆಗೆ 990 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ ಐಸಿಯುಗೆ ದಾಖಲಾದ 137 ಮಂದಿ ಪೂರ್ಣ ಪ್ರಮಾಣದಲ್ಲಿ ಗುಣಮುಖರಾಗಿದ್ದಾರೆ. ನ.11ರಂದು ಐಸಿಯುನಲ್ಲಿದ್ದ ಇಬ್ಬರು ರೋಗಿಗಳು ಬಿಡುಗಡೆಗೊಂಡಿದ್ದು, ಓರ್ವ ರೋಗಿಯನ್ನು ಸಾಮಾನ್ಯ ವಾರ್ಡ್‌ಗೆ ವರ್ಗಾಯಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ.

ತಾಲೂಕಿನ ವೈದ್ಯ-ಸಿಬಂದಿ ಕರ್ತವ್ಯ ಪ್ರಜ್ಞೆ, ಸೇವಾ ಬದ್ಧತೆ, ಜನರಲ್ಲಿ ರೋಗ ನಿರೋಧಕ ಶಕ್ತಿ ಹಾಗೂ ಚಿಕಿತ್ಸೆಗೆ ಸಿಗು
ತ್ತಿರುವ ಸ್ಪಂದನೆಯಂಥ ಕಾರಣಗಳಿಂದಾಗಿ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಕಾರ್ಕಳ ಈಗ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ರೋಗದ ಕುರಿತು ಜಾಗೃತಿ, ತ್ವರಿತ- ಹೆಚ್ಚು ಸಂಖ್ಯೆಯ ಪರೀಕ್ಷೆ, ಸೋಂಕಿತರು ಪತ್ತೆಯಾಗುತ್ತಲೇ ತುರ್ತುಚಿಕಿತ್ಸೆ ನೀಡುವ ಕ್ರಮಗಳಿಂದಾಗಿ ತಾ|ನಲ್ಲಿ ಸೋಂಕು ವ್ಯಾಪಕ ಹರಡುವಿಕೆ ತಡೆಯುವಲ್ಲಿ ಸಹಕಾರಿಯಾಗಿದೆ.

ಸೋಂಕು ವ್ಯಾಪಕವಾಗಿ ಹಬ್ಬಿದ
ಸಂದರ್ಭ ಒತ್ತಡಗಳ ಮಧ್ಯೆಯೂ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ತಾಲೂಕಿಗೆ 2,000 ಮಂದಿ ಹೊರರಾಜ್ಯ ಹಾಗೂ 35 ಸಾವಿರ ಮಂದಿ ಅನ್ಯ ಜಿಲ್ಲೆಗಳಿಂದ ಬಂದವರಿಗೆ 36 ಕ್ವಾರಂಟೈನ್‌ ಕೇಂದ್ರಗಳನ್ನು ತೆರೆದು ಗಂಟಲ ದ್ರವ ಪರೀಕ್ಷೆ ನಡೆಸಿ, ಸೋಂಕು ನಿಯಂತ್ರಿಸುವ ಮೂಲಕ ಪುಟ್ಟ ಹಳ್ಳಿ ಗಮನ ಸೆಳೆದಿತ್ತು. ಸೋಂಕಿತರು ಪತ್ತೆಯಾಗುತ್ತಲೇ ತುರ್ತು ಚಿಕಿತ್ಸೆ ನೀಡುವ ಜತೆಗೆ ಪ್ರಥಮ-ದ್ವಿತೀಯ ಸಂಪರ್ಕಿತರನ್ನು ಗುರುತಿಸಿ, ಪರೀಕ್ಷಿಸಿ, ಚಿಕಿತ್ಸೆ ನೀಡುವ ಕೆಲಸ ವ್ಯವಸ್ಥಿತವಾಗಿ ನಡೆದಿತ್ತು.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಗಳು, ಸರಕಾರದ ಮಾರ್ಗಸೂಚಿ ಜತೆಗೆ ಶಾಸಕರ ಮುತುವರ್ಜಿ, ಜನಪ್ರತಿನಿಧಿಗಳ ಸಹಕಾರದಿಂದ ಸೋಂಕು ವೇಗವಾಗಿ ನಿಯಂತ್ರಣಕ್ಕೆ ಬರುವಲ್ಲಿ ಯಶಸ್ವಿಯಾಗಿದೆ.

ಆಸ್ಪತ್ರೆಗೆ ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿತ್ತು, ವೈದ್ಯರು, ಸಿಬಂದಿ ಸಹಿತ ವಾರಿಯರ್ಸ್‌ ತಂಡ ಉತ್ತಮವಾಗಿ ಕಾರ್ಯವೆಸಗಿದ್ದರು. ಕ್ಷೇತ್ರದ ಸಂಘ ಸಂಸ್ಥೆ, ಜನತೆ ಸಹಕರಿಸಿದ ಪರಿಣಾಮ ಐಸಿಯು ರೋಗಿಗಳ ಸಂಖ್ಯೆ ಶೂನ್ಯ ಹಂತಕ್ಕೆ ತಲುಪಲು ಕಾರಣವಾಗಿದೆ.
-ವಿ. ಸುನೀಲ್‌ ಕುಮಾರ್‌, ಶಾಸಕರು

ವೈದ್ಯರು ಮತ್ತು ಎಲ್ಲ ಸಿಬಂದಿಗಳ ಸಾಮೂಹಿಕ ಕಾರ್ಯ ನಿರ್ವಹಣೆಯಿಂದ ತಾಲೂಕಿನಲ್ಲಿ ಕೋವಿಡ್‌ ನಿರ್ವಹಣೆ ಉತ್ತಮವಾಗಿ ಆಗಿದೆ. ಐಸಿಯುನಲ್ಲಿ ರೋಗಿಗಳ ಸಂಖ್ಯೆ ಶೂನ್ಯಕ್ಕೆ ತಲುಪಿದೆ ಎನ್ನುವ ಸಮಾಧಾನಕರ ಅಂಶದ ನಡುವೆ ಇನ್ನೂ ಹೆಚ್ಚಿನ ಮುಂಜಾಗ್ರತೆ ಅಗತ್ಯವಿದೆ.
-ಜಿ. ಜಗದೀಶ್‌ ಜಿಲ್ಲಾಧಿಕಾರಿ, ಉಡುಪಿ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.