“ಕೋವಿಡ್‌ ತಡೆಗೆ ಗ್ರಾ.ಪಂ. ಕಾರ್ಯಪಡೆಗಳು ಸದಾ ಸನ್ನದ್ಧ’


Team Udayavani, May 21, 2021, 5:20 AM IST

“ಕೋವಿಡ್‌ ತಡೆಗೆ ಗ್ರಾ.ಪಂ. ಕಾರ್ಯಪಡೆಗಳು ಸದಾ ಸನ್ನದ್ಧ’

ಉಡುಪಿ: ಜಿಲ್ಲೆಯಲ್ಲಿ ಸರಕಾರದ ನಿರ್ದೇಶನದಂತೆ ಕೋವಿಡ್‌ -19ರ ಪ್ರಕರಣಗಳನ್ನು ತಡೆಗಟ್ಟುವುದು, ಪರೀಕ್ಷೆ, ಕ್ವಾರಂಟೈನ್‌, ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ವಿತ ರ ಣೆ ಯ ನ್ನು ಪರಿಣಾಮ ಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಗ್ರಾ.ಪಂ.ವಾರು ಕೋವಿಡ್‌ ಕಾರ್ಯಪಡೆಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ತಿಳಿಸಿದ್ದಾರೆ.

ಪ್ರಸ್ತುತ ಹೋಮ್‌ ಐಸೊಲೇಶನ್‌ನಲ್ಲಿರುವ ವ್ಯಕ್ತಿಗಳ ಮನೆಗಳನ್ನು ಭೇಟಿ ಮಾಡಿ, ಹೋಮ್‌ ಐಸೊಲೇಶನ್‌ ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ, ಪ್ರತ್ಯೇಕ ಕೊಠಡಿ, ಪ್ರತ್ಯೇಕ ಶೌಚಾಲಯ ಹೊಂದಿರುವ ಬಗ್ಗೆ, ಆರೋಗ್ಯದ ಏರುಪೇರುಗಳ ಬಗ್ಗೆ, ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ವೈದ್ಯಾಧಿಕಾರಿಗಳ ಮೂಲಕ ಔಷಧೋಪಚಾರ ನೀಡುವ, ತಾಲೂಕು ಕೋವಿಡ್‌ ಕೇರ್‌ ಸೆಂಟರ್‌ಗೆ ಅಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ವೈದ್ಯರ ಸಲಹೆ ಪಾಲಿಸಿ :

ಈ ಕ್ರಮಗಳನ್ನು ಹಾಗೂ ಕೋವಿಡ್‌ ನಿಯಂತ್ರಣ ವನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ಪ್ರತ್ಯೇಕ ಕೊಠಡಿಯನ್ನು ಹೊಂದಿಲ್ಲದಿರುವ ಹಾಗೂ ಪ್ರತ್ಯೇಕ ಶೌಚಾಲಯ ಹೊಂದದೇ ಇರುವ ವ್ಯಕ್ತಿಗಳನ್ನು ಕಾರ್ಯಪಡೆಯ ಸಹಕಾರದಲ್ಲಿ ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಗೊಳ್ಳಲು ಕೋರಲಾಗಿದೆ. ಸೋಂಕಿತರು ಚಿಕಿತ್ಸಾ ಶಿಷ್ಟಾಚಾರದಂತೆ ನಿಗದಿತ ದಿನಗಳವರೆಗೆ ಈ ಕೇಂದ್ರಗಳಲ್ಲಿದ್ದು, ಸೋಂಕಿನಿಂದ ಗುಣಮುಖರಾದ ಅನಂತರ ವೈದ್ಯರ ಸಲಹೆಯಂತೆ ಪುನಃ ತಮ್ಮ ಮನೆಗಳಿಗೆ ತೆರಳಬಹುದಾಗಿದೆ.

ಕರಪತ್ರ ಮುದ್ರಣ :

ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಕಾರ್ಯ ನಿರ್ವ ಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಗಳು, ವೈದ್ಯಾಧಿಕಾರಿಗಳು, ಗ್ರಾ.ಪಂ. ಕಾರ್ಯಪಡೆಗಳಿಗೆ ಸೂಚಿಸಲಾಗಿದೆ. ಹೋಂ ಐಸೊಲೇಶನ್‌ನಲ್ಲಿ ಮುಂದು ವರಿಯುವ ವ್ಯಕ್ತಿಗಳು ಪಾಲಿಸಬೇಕಾದ ಕ್ರಮಗಳ ಬಗ್ಗೆ ಗ್ರಾ.ಪಂ.ವಾರು ಕರಪತ್ರಗಳನ್ನು ಮುದ್ರಿಸಲಾಗುತ್ತಿದ್ದು, ಹೋಂ ಐಸೊಲೇಶನ್‌ನಲ್ಲಿರುವ ವ್ಯಕ್ತಿಗಳಿಗೆ ಔಷಧೋ ಪಚಾರದ ಕಿಟ್‌ನೊಂದಿಗೆ ವಿತರಿಸಲಾಗುತ್ತಿದೆ.

ಸೇವೆಯ ಸದುಪಯೋಗವಾಗಲಿ :

ಜಿಲ್ಲೆಯಲ್ಲಿ ಹೋಮ್‌ ಐಸೊಲೇಶನ್‌ನಲ್ಲಿರುವ ವರಿಗಾಗಿ ಟೆಲಿ-ಸಮಾಲೋಚನೆಯ ಮೂಲಕ ಉಚಿತ ಸಲಹೆ ನೀಡಲು ಸ್ವಯಂಪ್ರೇರಿತರಾಗಿ ಭಾರತೀಯ ವೈದ್ಯಕೀಯ ಸಂಘ ಮತ್ತು ಇತರ ಕ್ಷೇತ್ರಗಳ ತಜ್ಞರು ಸಮ್ಮತಿಸಿ ಮುಂದೆ ಬಂದಿದ್ದಾರೆ. ಅವರ ದೂರವಾಣಿ ಸಂಖ್ಯೆಗಳನ್ನು ಪ್ರಚುರಪಡಿಸಲಾಗಿದೆ. ಸಾರ್ವಜನಿಕರು ತಜ್ಞರಿಂದ ನೀಡಲಾಗುವ ಸೇವೆಯ ಸದುಪಯೋಗ ವನ್ನು ಪಡೆಯಲು ಕೋರಲಾಗಿದೆ.

ಉಚಿತ ಸಲಹೆ :

ಟೆಲಿ-ಸಮಾಲೋಚನೆಯ ಮೂಲಕ ಉಚಿತ ಸಲಹೆ ನೀಡಲು ಸ್ವಯಂಪ್ರೇರಿತರಾಗಿ ತಜ್ಞ ವೈದ್ಯರು ಸಿದ್ಧರಾಗಿದ್ದಲ್ಲಿ ಜಿಲ್ಲಾ ಎನ್‌ಜಿಒ ಸಮನ್ವಯ ಕೇಂದ್ರ ದೂರವಾಣಿ ಸಂಖ್ಯೆ 0820 2574936ಯನ್ನು ಸಂಪರ್ಕಿಸಲು ಕೋರಿದೆ.

ಸೇವೆಯಲ್ಲಿ ತೊಡಗಿಸಿಕೊಂಡವರು ಕೋವಿಡ್‌ ಕಾರ್ಯಪಡೆಗಳಿಗೆ ಸಹಕಾರ ನೀಡಲು ವಿವಿಧ ಸಂಘ ಸಂಸ್ಥೆಗಳು, ಎನ್‌ಜಿಒಗಳಿಗೆ ಕೋರಲಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು, ಎನ್‌ಜಿಒಗಳು ದಿನಸಿ, ಆಹಾರ, ಅಗತ್ಯ ಉಪಕರಣಗಳನ್ನು ಒದಗಿಸುವ ಮೂಲಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೋವಿಡ್‌ ಕಾರ್ಯಪಡೆ :

ಜಿಲ್ಲಾ ಮಟ್ಟದಲ್ಲಿ ಜಿ.ಪಂ.ಕಚೇರಿಯಲ್ಲಿ ಕೋವಿಡ್‌ ಕಾರ್ಯಪಡೆ ಹಾಗೂ ಎನ್‌ಜಿಒ ಸಮನ್ವಯ ಕೇಂದ್ರ ವನ್ನು ಸ್ಥಾಪಿಸಲಾಗಿದ್ದು, ಸಂಘ ಸಂಸ್ಥೆಗಳ ಸಹಭಾಗಿತ್ವದ ಬಗ್ಗೆ ದೂರವಾಣಿ ಸಂ: 08202574936ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಕೋವಿಡ್‌ ಕಾರ್ಯಪಡೆಗಳ, ಸಹಾಯವಾಣಿಗಳ ಸೌಲಭ್ಯಗಳನ್ನು ಬಳಸಿಕೊಂಡು ಕೋವಿಡ್‌ ಸಾಂಕ್ರಾ ಮಿಕ ರೋಗವು ಹರಡದಂತೆ ಸಾರ್ವಜನಿಕರು ಸಹಕರಿಸುವಂತೆ ಅವರು ತಿಳಿಸಿದ್ದಾರೆ.

ಸಹಾಯವಾಣಿ ಸಂಪರ್ಕಿಸಿ :

ಪ್ರತಿಯೊಂದು ಗ್ರಾ.ಪಂ.ನಲ್ಲಿ ಸಹಾಯ ವಾಣಿಯನ್ನು ಸ್ಥಾಪಿಸಲಾಗಿದ್ದು, ಕಾರ್ಯ ಪಡೆಗಳ ಮೂಲಕ ಬೇಕಾದ ಸಹಾಯಕ್ಕಾಗಿ ಆಯಾ ಗ್ರಾ.ಪಂ. ಸಹಾಯವಾಣಿಗೆ ಕರೆ ಮಾಡಬಹುದಾಗಿದ್ದು, ಜಿಲ್ಲಾ ಮಟ್ಟದಲ್ಲಿ ಸಮನ್ವಯಕ್ಕಾಗಿ, ಹೆಚ್ಚಿನ ಮಾಹಿತಿ ಹಾಗೂ ಸಹಾಯಕ್ಕಾಗಿ ಜಿ.ಪಂ. ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ( ಸಹಾಯವಾಣಿ ಸಂಖ್ಯೆ : 0820 2574937)

ಕಾರ್ಯಪಡೆ ಸಂಪರ್ಕ ಸಂಖ್ಯೆ ;

ಹೋಂ ಐಸೊಲೇಶನ್‌ನಲ್ಲಿರುವವರು ಮನೆಯಲ್ಲಿ ಪ್ರತ್ಯೇಕವಾಗಿರಲು ಅಗತ್ಯ ವ್ಯವಸ್ಥೆಗಳಿಲ್ಲದಿದ್ದಲ್ಲಿ ತಾಲೂಕು ಕೋವಿಡ್‌ಕೇರ್‌ ಸೆಂಟರ್‌ಗೆ ಸ್ಥಳಾಂತರಗೊಳ್ಳಲು, ಸ್ಥಳೀಯ ಗ್ರಾ.ಪಂ.ಕಾರ್ಯಪಡೆಯನ್ನು ಆಥವಾ ಈ ಕೆಳಗೆ ಕಾಣಿಸಿದ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಬೈಂದೂರು, ಕುಂದಾಪುರ ತಾಲೂಕು ವ್ಯಾಪ್ತಿ: 7795543611, ಉಡುಪಿ, ಬ್ರಹ್ಮಾವರ, ಕಾಪು ತಾಲೂಕು ವ್ಯಾಪ್ತಿ: 7204789104, ಕಾರ್ಕಳ, ಹೆಬ್ರಿ ತಾಲೂಕು ವ್ಯಾಪ್ತಿ ಸಂಖ್ಯೆ : 9141001239.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.