ಕೋವಿಡ್ 19 ನಿಯಮ ಉಲ್ಲಂಘನೆ : ತೆಳ್ಳಾರ್ ಜಾಮೀಯ ಮಸೀದಿ ಬಳಿ ಪೊಲೀಸರ ನಿಯೋಜನೆ
Team Udayavani, May 14, 2021, 3:39 PM IST
ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಳ್ಳಾರ್ ಜಾಮೀಯ ಮಸೀದಿಯಲ್ಲಿ ಸರಕಾರದ ಕೋವಿಡ್ ನಿಯಮ ಉಲ್ಲಂಘಿಸಿ ಕೆಲವು ಮುಸ್ಲಿಂ ಸಮುದಾಯದವರು ಬೆಳಗ್ಗೆ ನಮಾಜ್ ಪ್ರಾರ್ಥನೆ ಸಲ್ಲಿಸಿರುವ ಘಟನೆ ರಂಜಾನ್ ದಿನ ಶುಕ್ರವಾರ(ಮೇ. 14)ದಂದು ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ : ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ : ಸಿ ಟಿ ರವಿ
ಈ ಕುರಿತು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ದೊರಕಿದ್ದು ಮಾಹಿತಿ ಆಧಾರದ ಮೇಲೆ ಮಸೀದಿ ಬಳಿ ಪೊಲೀಸ್ ಬಿಗು ಬಂದೊಬಸ್ತ್ ಒದಗಿಸಲಾಗಿದೆ. ಸುಮಾರು 25 ರಷ್ಟು ಮಂದಿ ಮಸೀದಿಯಲ್ಲಿ ನಮಾಜ್ ನೆರವೇರಿಸಿದ್ದರೆಂದು ಹೇಳಲಾಗುತ್ತಿದ್ದು, ಪೊಲೀಸರು ಆಗಮಿಸುತಿದ್ದಂತೆ ಮಸೀದಿ ಬಳಿಯಿಂದ ಕೆಲವರು ಪರಾರಿಯಾಗಿದ್ದಾರೆ ಎಂದು ಸ್ಥಳಿಯ ಮೂಲಗಳು ಮಾಹಿತಿ ನೀಡಿವೆ.
ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸರ ನಿಯೋಜನೆಯಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಉಡುಪಿ: ವಿಪರೀತ ಕಡಲ್ಕೊರೆತ; ಅಪಾಯದ ಅಂಚಿನಲ್ಲಿ ಮೀನುಗಾರರ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…