ಲಸಿಕೆ ಪಡೆಯಲು ಒಪ್ಪದ ಕುಟುಂಬದ 7 ಮಂದಿ: ಮನೆಗೆ ಬಂದು ಮನವೊಲಿಸಿದ ಉಡುಪಿ ಜಿಲ್ಲಾಧಿಕಾರಿ! 


Team Udayavani, Nov 21, 2021, 7:05 AM IST

ಲಸಿಕೆ ಪಡೆಯಲು ಒಪ್ಪದ ಕುಟುಂಬದ 7 ಮಂದಿ: ಮನೆಗೆ ಬಂದು ಮನವೊಲಿಸಿದ ಉಡುಪಿ ಜಿಲ್ಲಾಧಿಕಾರಿ! 

ಕೋಟ: ಬ್ರಹ್ಮಾವರ ತಾಲೂಕು ಸಾೖಬ್ರಕಟ್ಟೆಯ ಕಾಜ್ರಲ್ಲಿ ಕಾಲನಿಯ ಹೆರಿಯ ಪಾಣ ಅವರ ಕುಟುಂಬದ 7 ಮಂದಿ ಸದಸ್ಯರು ಅಪನಂಬಿಕೆಯಿಂದಾಗಿ ಕೋವಿಡ್‌ ನಿರೋಧಕ ಲಸಿಕೆ ಪಡೆಯಲು ನಿರಾಕರಿಸಿದ್ದು, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಶನಿವಾರ ಅವರ ಮನೆಗೆ ಭೇಟಿ ನೀಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅವರು ಕೋವಿಡ್‌ ಲಸಿಕೆಯಿಂದ ಜೀವಕ್ಕೆ ಅಪಾಯವಾಗಲಿದೆ ಎಂದು ಭಯಪಟ್ಟಿದ್ದರು ಹಾಗೂ ಕೋವಿಡ್‌ನ‌ ಆರಂಭದಲ್ಲಿ ಕುಟುಂಬದ ಸದಸ್ಯನೋರ್ವ ಮೃತಪಟ್ಟಾಗ ಆಡಳಿತ ವ್ಯವಸ್ಥೆ, ಊರಿನವರು ತಾತ್ಸಾರ ಮಾಡಿದ್ದಾರೆ ಎನ್ನುವ ನೋವನ್ನು ಹೊಂದಿದ್ದರು. ಆದ್ದರಿಂದ ಆಶಾ ಕಾರ್ಯಕರ್ತೆಯರು, ವೈದ್ಯೆಯರು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಯಾರೇ ಮನವೊಲಿಸಿದರೂ ಲಸಿಕೆ ಪಡೆದಿರಲಿಲ್ಲ. ಶನಿವಾರ ಸಾೖಬ್ರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದಾಗ ವಿಷಯ ತಿಳಿದು ಕುಟುಂಬವನ್ನು ಭೇಟಿ ಮಾಡಿದರು.

ಮನೆಯವರ ಸಮಸ್ಯೆ ಹಾಗೂ ನೋವುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ನಿಮ್ಮ ನೋವಿನಲ್ಲಿ ಅರ್ಥವಿದೆ. ನಿಮಗೆ ಯಾವುದೇ ಸಮಸ್ಯೆಯಾದರೆ ಜಿಲ್ಲಾಡಳಿತ ರಕ್ಷಣೆ ನೀಡಲಿದೆ. ಕಷ್ಟವನ್ನು ಹಂತ-ಹಂತವಾಗಿ ಪರಿಹರಿಸಲಿದ್ದೇವೆ. ದಯವಿಟ್ಟು ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದರು. ಒಪ್ಪಿದ ಸೂಚಿಸಿದ ಕುಟುಂಬ ಸದಸ್ಯರು ಒಬ್ಬೊಬ್ಬರಾಗಿ ಲಸಿಕೆ ಪಡೆಯುವುದಾಗಿ ಭರವಸೆ ನೀಡಿದರು.

ಪಡಿತರಕ್ಕೆ ವ್ಯವಸ್ಥೆ

ವ್ಯವಸ್ಥೆಯಿಂದ ನೊಂದಿರುವ ತಾವು ಮೂರು ತಿಂಗಳಿಂದ ಪಡಿತರ ಸಾಮಗ್ರಿ ಪಡೆಯುತ್ತಿಲ್ಲ ಎಂದು ಮನೆಯವರು ಈ ಸಂದರ್ಭ ತಿಳಿಸಿದ್ದು, ತತ್‌ಕ್ಷಣ ಪಡಿತರಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.

ಬ್ರಹ್ಮಾವರ ತಹಶೀಲ್ದಾರ್‌ ರಾಜಶೇಖರ ಮೂರ್ತಿ, ಕೋಟ ಆರ್‌ಐ ರಾಜು, ಲಕ್ಷ್ಮೀನಾರಾಯಣ ಭಟ್‌, ವಿ.ಎ. ಶರತ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ಪ್ರದೀಪ್‌ ಬಲ್ಲಾಳ್‌ ಹಾಗೂ ವೈದ್ಯಾಧಿಕಾರಿ ಡಾ| ಜಯಶೀಲ ಆಚಾರ್‌, ಆಶಾ/ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.