ಹಸು, ಹಸಿರು ಉಸಿರಾದಾಗ ಬಾಳು ಹಸನು: ಪೇಜಾವರ ಶ್ರೀ


Team Udayavani, Jun 29, 2017, 3:35 AM IST

28-KRK-10.jpg

ಉಡುಪಿ: ಜೀವನಕ್ಕೆ ಉಪಯುಕ್ತವಾದ ಅಂಶಗಳನ್ನೇ ನೀಡುತ್ತಿರುವ ಹಸು ಮತ್ತು ಹಸಿರು ನಮ್ಮೆಲ್ಲರ ಉಸಿರಾದಾಗ ಬಾಳು ಹಸನಾಗುವುದು ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಸಮರ್ಥ ಭಾರತ ಸಂಘಟನೆಯ ಮುಖಾಂತರ ರಾಜ್ಯದಾದ್ಯಂತ 1 ಕೋಟಿ ಗಿಡ ನೆಡುವ ಬೃಹತ್‌ ಅಭಿಯಾನಕ್ಕೆ ಮಂಗಳವಾರ ರಾಜಾಂಗಣದಲ್ಲಿ ಚಾಲನೆ ಇತ್ತು ಸಾಂಕೇತಿಕವಾಗಿ ಸಸಿಗಳನ್ನು ವಿತರಿಸಿ ಶ್ರೀಗಳು ಆಶೀರ್ವಚಿಸಿದರು.
ಜನೋಪಕಾರಿಯಾಗಿರುವುದನ್ನು ಮರೆಯದೆ ಅದನ್ನು ಪೋಷಿಸಿ ಬೆಳೆಸಬೇಕು. ಗೋವಿನ ಹಾಲಿನಿಂದ ಹಿಡಿದು ಎಲ್ಲವೂ ನಮ್ಮ ಆರೋಗ್ಯಕರ ಜೀವನಕ್ಕೆ ಪೂರಕ. ಅದೇ ರೀತಿ ಗಿಡ, ಮರಗಳು ಆಮ್ಲಜನಕದಿಂದ ಹಿಡಿದು ಬದುಕು ಸಾಗಿಸಲು ಬೇಕಾದುದನ್ನು ಕೊಡುತ್ತವೆ. ಹೀಗಿರುವಾಗ ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಬೇಕು ಎಂದು ಶ್ರೀಗಳು ತಿಳಿಸಿದರು.

ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಆರೆಸ್ಸೆಸ್‌ನ ದಕ್ಷಿಣ ಪ್ರಾಂತ ಸಹಸಂಪರ್ಕ ಪ್ರಮುಖ್‌ ಪ್ರಕಾಶ್‌ ಪಿ.ಎಸ್‌. ಶುಭಾಶಂಸನೆಗೈದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಅದಾನಿ ಯುಪಿಸಿಎಲ್‌ನ ಕಿಶೋರ್‌ ಆಳ್ವ, ವಿಹಿಂಪದ ಪ್ರೊ| ಎಂ.ಬಿ. ಪುರಾಣಿಕ್‌, ಟಿ. ಶಂಭು ಶೆಟ್ಟಿ, ಜಗದೀಶ್‌ ಅಲ್ಸೆ, ಪ್ರಕಾಶ್‌ ಕ್ರಮಧಾರಿ ಉಪಸ್ಥಿತರಿದ್ದರು. ತಾರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಆ. 15ರ ವರೆಗೆ ಅಭಿಯಾನ 
ಬೈಕಾಡಿ ಸುಪ್ರಸಾದ್‌ ಶೆಟ್ಟಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದು, ಪರಿಸರ ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಕೈಗೊಂಡಿರುವ ಈ ಮಹಾ ಅಭಿಯಾನ ಯಶಸ್ಸಿಗೆ ಎಲ್ಲರೂ ಸಹಕರಿಸುತ್ತಿದ್ದಾರೆ. ಆ. 15ರ ವರೆಗೆ ಅಭಿಯಾನ ನಡೆಯಲಿದೆ. ಶಾಲೆ, ಕಾಲೇಜು, ಆಸ್ಪತ್ರೆ, ಗ್ರಾ.ಪಂ., ದೇವಸ್ಥಾನ, ಭಜನ ಮಂಡಳಿ, ಯುವಕ/ಯುವತಿ ಮಂಡಲಗಳು, ವಿವಿಧ ಒಕ್ಕೂಟ ಮೊದಲಾದ ಸಂಸ್ಥೆಯವರನ್ನು ಸಂಪರ್ಕಿಸಲಾಗಿದ್ದು, ಅವರವರಿಗೆ ಉಪಲಭ್ಯವಿರುವ ಜಾಗದಲ್ಲಿ ಸಾಧ್ಯವಾದಷ್ಟರ ಮಟ್ಟಿಗೆ ಗಿಡ ನೆಡಲು ಮನವಿ ಮಾಡಲಾಗಿದೆ. ಯುಪಿಸಿಎಲ್‌ ಕೂಡ ಹಲವು ಲಕ್ಷ ಗಿಡ ನೆಡುವ ಭರವಸೆಯನ್ನು ಸಮರ್ಥ ಭಾರತಕ್ಕೆ ನೀಡಿದೆ ಎಂದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.