ಹಸು ಜಗತ್ತಿನ ತಾಯಿ: ವಿಶ್ವಪ್ರಸನ್ನ ಶ್ರೀ


Team Udayavani, Mar 16, 2018, 2:25 PM IST

1503bvr1.jpg

ಬ್ರಹ್ಮಾವರ : ವಿವಿಧ ಉತ್ಪನ್ನಗಳ ಮೂಲಕ ಬದುಕಿನುದ್ದಕ್ಕೂ ನಮ್ಮನ್ನು ಪೋಷಿಸುವ ಗೋವು ತಾಯಿಗೆ ಸಮಾನವಾದುದು. ಅಂತಹ ಹಸುಗಳನ್ನು ಪಾಲಿಸುವವರು ಪಿತೃ ಸಮಾನ ಎಂದು ಉಡುಪಿ ಶ್ರೀ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಗುರುವಾರ ಬ್ರಹ್ಮಾವರ ಸಿಟಿ ಸೆಂಟರ್‌ನಲ್ಲಿ ಪತಂಜಲಿಯವರ ದುರ್ಗಾಮೃತ ಪಶು ಆಹಾರವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ಗೋವು ಆರೋಗ್ಯವಂತವಾಗಿದ್ದಲ್ಲಿ ನಮ್ಮ ಆರೋಗ್ಯ ಉಳಿಯುತ್ತದೆ. ಇದಕ್ಕೆ ಪತಂಜಲಿ ಅವರ ದುರ್ಗಾಮೃತ ಪೂರಕವಾಗಲಿ ಎಂದವರು ಆಶಿಸಿದರು. ಹಸುವಿಗೆ ಎರಡು ಹಿಡಿ ಆಹಾರ ಗೋವು ಸಾಕದವರೂ ಪ್ರತಿನಿತ್ಯ ಮನೆ ಮುಂದೆ ಬರುವ ಗೋವುಗಳಿಗೆ ಎರಡು ಮುಷ್ಟಿ ಪಶು ಆಹಾರ ನೀಡುವು ದರಿಂದ ಪುಣ್ಯ ಲಭಿಸುತ್ತದೆ ಎಂದು ವಿಶ್ವಪ್ರಸನ್ನ ಶ್ರೀ ಹೇಳಿದರು.

ರಾಸಾಯನಿಕ ಮುಕ್ತ ಆಹಾರ 1845ರ ವರೆಗೆ ಪ್ರಪಂಚದಲ್ಲಿ ರಾಸಾಯನಿಕ ಎಂಬುದೇ ಇರಲಿಲ್ಲ. ಎರಡನೇ  ಹಾಯುದ್ಧದ ಅನಂತರ ಶಸ್ತ್ರಾಸ್ತ್ರ ತಯಾರಿ ಕಾರ್ಖಾನೆಗಳು ಖಾಲಿಯಾಗಿ ರಾಸಾಯನಿಕಗಳ ತಯಾರಿ ಪ್ರಾರಂಭಿಸಿದವು. ಭಾರತ ಅದಕ್ಕೆ ಮಾರುಕಟ್ಟೆಯಾಯಿತು. ಆದರೆ ತಂತ್ರಾದನಂತರವೂ ರಾಸಾಯನಿಕ ಬಳಸುವ ವ್ಯವಸಾಯ ಪದ್ಧತಿ ಬದಲಾಗದೆ ಈಗ ದುಷ್ಪರಿಣಾಮ ಎದುರಿಸುತ್ತಿದ್ದೇವೆ ಎಂದು ಅಧ್ಯಕ್ಷತೆ ವಹಿಸಿದ್ದ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ಅವರು ಹೇಳಿದರು.

ನಮ್ಮ ಜೀವನ ಶೈಲಿ ರೋಗಗಳಿಗೆ ಮೂಲವಾಗುತ್ತಿದೆ. ಆದ್ದರಿಂದ ಪ್ರಾಚೀನ ವ್ಯವಸಾಯ ಪದ್ಧತಿ, ಪರಿಸರ ಜನರ ನಡುವಿನ ಸಂಬಂಧ ಉಳಿಸೋಣ ಎಂದರು.

ಕರು- ಮಗು!
ಹಿಂದೆ ಹಸು ಕರು ಹಾಕಿದಾಗ ಮನೆಯ ಮಗುವನ್ನು ಕರೆದು ಇದು ನಿನ್ನ ಕರು ಎನ್ನುತ್ತಿದ್ದರು. ಇದರಿಂದಾಗಿ ಮಕ್ಕಳಿಗೆ ಕರುವಿನೊಂದಿಗೆ ಆತ್ಮೀಯ ಸಂಬಂಧ ಉಂಟಾಗಿ ಮುದ್ದಾಡಿ ಬೆಳೆಸುತ್ತಿದ್ದರು. ಇಂದಿನ ಮಕ್ಕಳಿಗೆ ಹಾಲು ಎಲ್ಲಿಂದ ದೊರೆಯುತ್ತದೆ ಎನ್ನುವುದೇ ತಿಳಿದಿಲ್ಲ. ಮೊದಲು ಸಮಸ್ಯೆಯನ್ನು ನಾವು ಅರಿತು ಮಕ್ಕಳಲ್ಲಿ ಶುದ್ಧ ಬೌದ್ಧಿಕ ಚಿಂತನೆಯನ್ನು ಉಳಿಸಬೇಕು ಎಂದು ಸಂಧ್ಯಾ ಎಸ್‌. ಪೈ ಅವರು ಹೇಳಿದರು.

ಸಂಕ್ರಮಣ ಕಾಲ
ಹೈನುಗಾರಿಕೆ ಸಂಕ್ರಮಣ ಕಾಲದಲ್ಲಿದೆ. ಪ್ರೀತಿ, ಮಮತೆ ಮರೆಯಾಗಿ ಎಲ್ಲವೂ ಲಾಭ -ನಷ್ಟಗಳ ಲೆಕ್ಕಾಚಾರದಲ್ಲಿರುವ ಈ ಕಾಲಘಟ್ಟದಲ್ಲಿ ಹಸುಗಳನ್ನು ಬಂಧನದಲ್ಲಿಟ್ಟು ಸಾಕುವ ವಾಣಿಜ್ಯ ಹೈನುಗಾರಿಕೆಯಿಂದ ಹಲವು ಸಮಸ್ಯೆಗಳು ತಲೆದೋರಿವೆ ಎಂದು ಮಂಗಳೂರಿನ ಪ್ರಮುಖ ಪಶು ವೈದ್ಯ ಡಾ| ಪಿ. ಮನೋಹರ ಉಪಾಧ್ಯ ಹೇಳಿದರು.

ಪತಂಜಲಿ ಗ್ರಾಮೋದ್ಯೋಗದ ಸಿಇಒ ಸುರೇಶ್‌ಚಂದ್ರ ಮಲಿಕ್‌ ಅವರು ಯೋಗ ಋಷಿ ರಾಮದೇವ್‌ ಜೀ ಹಾಗೂ ಆಚಾರ್ಯ ಬಾಲಕೃಷ್ಣ ಜೀ ಅವರ ಆಶೀರ್ವಾದದೊಂದಿಗೆ ಕಾರ್ಯಾಚರಿಸುತ್ತಿರುವ ಹರಿದ್ವಾರದ ಪತಂಜಲಿ ಗ್ರಾಮೋದ್ಯೋಗ (ನ್ಯಾಸ)ದ ವೈಶಿಷ್ಟ್ಯಗಳನ್ನು ತಿಳಿಸಿದರು. ಬಿವಿಟಿ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಎಂ. ಉಡುಪ ಉಪಸ್ಥಿತರಿದ್ದರು. ವಲಯ ಪ್ರಬಂಧಕ ಆನಂದ್‌ ಸೊನೊನೆ ಸ್ವಾಗತಿಸಿ, ವಾಸದೇವ ಕಾರಂತ ವಂದಿಸಿದರು. ಆರೂರು ತಿಮ್ಮಪ್ಪ ಶೆಟ್ಟಿ ನಿರ್ವಹಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.