ಗುಲ್ವಾಡಿ ಅಬ್ಬಿಗುಡ್ಡೆಗೆ ಸಿಪಿಎಂ ನಿಯೋಗ ಭೇಟಿ
Team Udayavani, May 27, 2019, 10:14 AM IST
ಕುಂದಾಪುರ: ಗುಲ್ವಾಡಿ ಗ್ರಾಮದ ಅಬ್ಬಿಗುಡ್ಡೆ ಜನರಿಗೆ ನೀರಿಗೆ ಬರ ಬಂದಿದೆ ಎಂದು ಉದಯವಾಣಿ ಪತ್ರಿಕೆ ಜೀವ ಜಲ ಕ್ಷಾಮ ಸರಣಿಯ ವರದಿಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ನಿಯೋಗವು ಅಬ್ಬಿಗುಡ್ಡಿ ಪ್ರದೇಶದ ಕೆಲವು ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.
2018ರಲ್ಲಿ ಸಿಪಿಐ(ಎಂ) ಬೈಂದೂರು ವಲಯ ಸಮಿತಿ ನೇತೃತ್ವದಲ್ಲಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ ಮನವಿ ನೀಡಿ ಒತ್ತಾಯಿಸಲಾಗಿತ್ತು. ಆ ವೇಳೆಯಲ್ಲಿ ಮನವಿ ಸ್ವೀಕರಿಸಿ ಶೀಘ್ರ ಪರಿಹಾರ ಮಾಡುವುದಾಗಿ ಪ್ರತಿಭಟನಕಾರರಿಗೆ ಭರವಸೆ ನೀಡಲಾಗಿತ್ತು. ಆದರೂ ಕಾಳಜಿ ವಹಿಸದಿರುವುದು ಖಂಡನೀಯವಾಗಿದೆ. ಗ್ರಾಮ ಪಂಚಾಯತ್ ಈಗ ಪ್ರತಿ ಮನೆಗೂ 200 ಲೀ. ನೀರು ಟ್ಯಾಂಕರ್ ಮೂಲಕ ಒದಗಿಸುತ್ತಿದೆ ಎಂಬ ಮಾಹಿತಿ ಸ್ಥಳೀಯರು ನೀಡುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ ಸ್ಥಳೀಯ ಪಂಚಾಯತ್ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತರು ಆಡಳಿತ ಮಾಡುತ್ತಿದ್ದು ಈ ಪಕ್ಷಗಳೇ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ಗಳಲ್ಲಿ ಅಧಿಕಾರ ನಡೆಸುತ್ತಿದ್ದರೂ ಗ್ರಾಮದ ಜನರು ಮಾತ್ರ ಅನುದಾನದ ಕೊರತೆಯಿಂದ ಕುಡಿಯುವ ನೀರಿಗೂ ಪರದಾಡುವಂತಾಗಿರುವುದನ್ನು ಸಿಪಿಐ(ಎಂ) ಪಕ್ಷ ಖಂಡಿಸುತ್ತದೆ.
ಕುಡಿಯುವ ನೀರಿನ ಸರಬರಾಜು ಕಾಮಗಾರಿಗೆ ಶೀಘ್ರಅನುದಾನ ನೀಡಿ ಅರ್ಧಕ್ಕೆ ನಿಂತ ಕಾಮಗಾರಿ ಕೂಡಲೇ ಆರಂಭಿಸಬೇಕು, ನೀರಿನ ಶಾಶ್ವತ ಪರಿಹಾರ ಮಾಡಬೇಕೆಂದು ಪಕ್ಷವು ಆಗ್ರಹಿಸುತ್ತದೆ. ಪಕ್ಷದ ನಿಯೋಗದಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸ್ಥಳೀಯ ಶಾಖಾ ಕಾರ್ಯದರ್ಶಿ ಅಣ್ಣಪ್ಪ ಅಬ್ಬಿಗುಡ್ಡೆ ಉಪಸ್ಥಿತರಿದ್ದರು.
ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ಅಬ್ಬಿಗುಡ್ಡೆ, ಉದಯನಗರ, ಮಾವಿನಕಟ್ಟೆ ಸಮಸ್ಯೆ ಕುರಿತು ಉದಯವಾಣಿ ಮೇ 4ರಂದು ವರದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್