ಅಪಘಾತ: ಸಾವಿಗೆ ಕಾರಣನಾದ ಚಾಲಕನಿಗೆ ಶಿಕ್ಷೆ
Team Udayavani, Jun 25, 2022, 12:28 AM IST
ಉಡುಪಿ: ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆಯಾಗಿದೆ.
2014ರಲ್ಲಿ ಲಾರಿ ಚಾಲಕ ಕುಂದಾಪುರದ ಖಾಲಿದ್ (65) ಲಾರಿಯನ್ನು ಕೋಡಿಬೇಂಗ್ರೆ ಕಡೆಯಿಂದ ಹೂಡೆ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಪಡುತೋನ್ಸೆ ಗ್ರಾಮದ ಹೂಡೆ-ಕೋಡಿಬೇಂಗ್ರೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಜಯಂತ್ ಕುಂದರ್, ಅವರ ಪತ್ನಿ ಭಾರತಿ ಹಾಗೂ ಗ್ರೀಷ್ಮಾ ಅವರಿಗೆ ಢಿಕ್ಕಿ ಹೊಡೆದಿದ್ದ.
ಈ ವೇಳೆ ಭಾರತಿ ಅವರ ಮೇಲೆ ಲಾರಿ ಹರಿದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಜಯಕುಂದರ್ ಮತ್ತು ಅವರ ಮಗಳು ಗ್ರೀಷ್ಮಾ ಅವರಿಗೆ ಸಾಮಾನ್ಯ ಗಾಯವಾಗಿತ್ತು.
ಇದರ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿಗೆ ಖಾಲಿದ್ಗೆ 2 ವರ್ಷ ಮತ್ತು 6 ತಿಂಗಳು ಕಾರಾಗೃಹ ವಾಸದ ಶಿಕ್ಷೆ ಮತ್ತು 9,500 ರೂ.ದಂಡವನ್ನು ವಿಧಿಸಿ ಜೂ. 24ರಂದು ಆದೇಶಿಸಿದ್ದಾರೆ.
ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ.21 : ಕಟಪಾಡಿಯಲ್ಲಿ ಯುವವಾಹಿನಿ ಡೆನ್ನಾನ ಡೆನ್ನಾನ ಸಾಂಸ್ಕೃತಿಕ ಸ್ಪರ್ಧೆ
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಶಿರ್ವ: ಮನೆಗೆ ನುಗ್ಗಿ ಹಲ್ಲೆ, ಹಾನಿ;ಮೂವರ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ
ಉಡುಪಿ: ಸಾರ್ವಕರ್ ಫ್ಲೆಕ್ಸ್: ಬಿಜೆಪಿ ಯುವ ಮೋರ್ಚದಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ