ಕಾಪು ಪ್ರಖಂಡ ಬಜರಂಗ ದಳ ಸಂಚಾಲಕನ ಹತ್ಯೆಗೆ ಯತ್ನ? ಸಂಘಟನೆಯಿಂದ ಕಾಪು ಪೊಲೀಸ್ ಠಾಣೆಗೆ ದೂರು
Team Udayavani, Aug 1, 2022, 7:03 AM IST
ಕಾಪು: ಕಾಪು ಪ್ರಖಂಡ ಬಜರಂಗ ದಳ ಸಂಚಾಲಕ ಹೇರೂರು ಕಲ್ಲುಗುಡ್ಡೆ ನಿವಾಸಿ ಸುಧೀರ್ ಸೋನು ಅವರ ಮನೆಗೆ ಆಗಮಿಸಿದ ಅಪರಿಚಿತ ಯುವಕರಿಬ್ಬರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರವಿವಾರ ಬೆಳಗ್ಗೆ 11 ಗಂಟೆಯ ವೇಳೆಗೆ ಸುಧೀರ್ ಸೋನು ಅವರ ಮನೆಗೆ ಆಗಮಿಸಿದ ಮುಸ್ಲಿಂ ಯುವಕರಿಬ್ಬರು ನಿಮ್ಮ ಬಳಿ ಮಾತನಾಡಲಿಕ್ಕಿದೆ. ನಿಮ್ಮನ್ನು ಆಸಿಫ್ ಅವರು ಕಾರಿನಲ್ಲಿ ಕಾಯುತ್ತಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ಅನುಮಾನಗೊಂಡ ಸುಧೀರ್ ಮನೆಯಿಂದ ಹೊರಗೆ ಬರಲು ನಿರಾಕರಿಸಿದ್ದರು. ಅಪರಿಚಿತ ಯುವಕರ ಚಲನವಲನಗಳಿಂದ ಅನುಮಾನಗೊಂಡ ಸುಧೀರ್ ಅವರ ಪತ್ನಿ ಕೂಡ ಪತಿಯನ್ನು ಮನೆಯಿಂದ ಹೊರಗೆ ಹೋಗದಂತೆ ತಡೆದಿದ್ದರು. ಅಪರಿಚಿತರ ಬಳಿ ಆಯುಧಗಳು ಇರುವುದನ್ನು ಗಮನಿಸಿದ್ದು, ಈ ಬಗ್ಗೆ ಸುಧೀರ್ ಅವರು ಸಂಘಟನೆಯ ಪ್ರಮುಖರಲ್ಲಿ ಚರ್ಚಿಸಿ ಕಾಪು ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ವಿಚಾರಣೆ, ಮುಚ್ಚಳಿಕೆ
ದೂರು ಸ್ವೀಕರಿಸಿದ ಪೊಲೀಸರು ಕಾರ್ಯಪ್ರವೃತ್ತರಾಗಿ ಕಾರಿನಲ್ಲಿ ಬಂದಿದ್ದ ಆಸಿಫ್ ನನ್ನು ಪೊಲೀಸ್ ಠಾಣೆಗೆ ಕರೆಯಿಸಿ ಕಾಪು ವೃತ್ತ ನಿರೀಕ್ಷಕ ಪೂವಯ್ಯ, ಕಾಪು ಮತ್ತು ಶಿರ್ವ ಠಾಣಾಧಿಕಾರಿಗಳ ಸಮ್ಮುಖದಲ್ಲಿ ಸುದೀರ್ಘ ವಿಚಾರಣೆ ನಡೆಸಿ, ಮುಚ್ಚಳಿಕೆ ಬರೆಯಿಸಿ ಪ್ರಕರಣವನ್ನು ಶಿರ್ವ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.
ಸಾಲ ಕೇಳಲು ಹೋಗಿದ್ದ !
ಆಸಿಫ್ ಅವರು ಸಾಲ ಕೇಳುವ ಸಲುವಾಗಿ ಸುಧೀರ್ ಅವರ ಮನೆ ಹತ್ತಿರ ಹೋಗಿರುವುದಾಗಿ ತಿಳಿಸಿದ್ದು, ಇದರಲ್ಲಿ ಬೇರೆ ಯಾವುದೇ ಉದ್ದೇಶಗಳಿಲ್ಲವೆಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ಕಾಪು ಪೊಲೀಸ್ ಠಾಣಾಧಿಕಾರಿ ಶ್ರೀಶೈಲ ಮುರಗೋಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ