ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
Team Udayavani, Sep 18, 2022, 12:00 AM IST
ಉಡುಪಿ: ಝೊಮ್ಯಾಟೋ ಫುಡ್ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಸೆನ್ ಅಪರಾಧ ಠಾಣಾ ಪೊಲೀಸರು ಶನಿವಾರ ಇಂದ್ರಾಳಿಯಿಂದ ಮಂಚಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿ ಆರೋಪಿಗಳಿಂದ ಸುಮಾರು 1 ಕೆ.ಜಿ. 277 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ರವಿ ಶಂಕರ್, ಅಂಜಲ್ ಬೈಜು ಹಾಗೂ ದೇವಿಪ್ರಸಾದ್ ಬಂಧಿತ ಆರೋಪಿಗಳು. ರವಿಶಂಕರ್ ಕೇರಳದ ಪಾಲಕ್ಕಾಡ್ನಿಂದ ಗಾಂಜಾವನ್ನು ರೈಲಿನ ಮೂಲಕ ಉಡುಪಿಗೆ ಸಾಗಿಸಿ ಉಡುಪಿಯಲ್ಲಿ ವಿತರಿಸುತ್ತಿದ್ದ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈತ ಮಣಿಪಾಲ ಸಮೀಪದ ಮಂಚಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಸ್ನೇಹಿತರೊಂದಿಗೆ ಉಳಿದುಕೊಂಡಿದ್ದನು. ಇಂದ್ರಾಳಿಯಿಂದ ಮಂಚಿಗೆ ಹೋಗುವ ರಸ್ತೆಯಲ್ಲಿ ಮೂವರು ಆರೋಪಿಗಳು ಝೊಮ್ಯಾಟೋ ಫುಡ್ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿ ಹಾಗೂ ಪೆಡ್ಲರ್ಗಳಿಗೆ ಕಾಯುತ್ತಿದ್ದರು. ಖಚಿತ ಮಾಹಿತಿಯಂತೆ ಪೋಲಿಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 2 ಬೈಕ್ , ಝೊಮ್ಯಾಟೋ ಫುಡ್ ಡೆಲಿವರಿ ಬ್ಯಾಗ್, 4 ಮೊಬೈಲ್ ಫೋನ್ ಮತ್ತು ಮೂವತ್ತು ಸಾವಿರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,37,000 ರೂ. ಎಂದು ಅಂದಾಜಿ ಸಲಾಗಿದೆ. ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್