ಕಾರ್ಕಳ: ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಹಣ ದೋಚಿ ಪರಾರಿಯಾದ ಖದೀಮರು..!
Team Udayavani, Jun 4, 2022, 5:24 PM IST
ಕಾರ್ಕಳ: ಹಾರ್ಡ್ವೇರ್ ಅಂಗಡಿಯ ಕೆಲಸಗಾರನ ಗಮನ ಬೇರೆಡೆ ಸೆಳೆದು ಹೊರಗೆ ಕಳುಹಿಸಿ ಅಂಗಡಿಯ ಡ್ರಾವರ್ ಒಡೆದು ಸುಮಾರು 1.45 ಲಕ್ಷ ರೂ. ಅನ್ನು ಕಳ್ಳರು ಕದ್ದೊಯ್ದ ಘಟನೆ ಜೂ. 2ರಂದು ಕಾರ್ಕಳ ಕಸಬಾ ವ್ಯಾಪ್ತಿಯಲ್ಲಿ ನಡೆದಿದೆ.
ಡಾ| ಟಿಎಂಎ ಪೈ ಆಸ್ಪತ್ರೆಯ ಮುಂಭಾಗದ ಮಂಜುಶ್ರೀ ಕಟ್ಟಡದಲ್ಲಿ ಧ್ವನಿ ಎಂಟರ್ಪ್ರೈಸಸ್ ಎಂಬ ಹಾರ್ಡ್ವೇರ್ ಅನ್ನು ಕೆ. ದೀಪಕ್ ಭಟ್ ಅವರು ನಡೆಸುತ್ತಿದ್ದು, ಅಂಗಡಿಯಲ್ಲಿ ಕೆಲಸದವರನ್ನು ಬಿಟ್ಟು ಅವರು ಮಂಗಳೂರಿಗೆ ಹೋಗಿದ್ದರು.
ಇಬ್ಬರು ವ್ಯಕ್ತಿಗಳು ಅಂಗಡಿಗೆ ಬಂದು 4 ಚೀಲ ಸಿಮೆಂಟ್ ಬೇಕಾಗಿದ್ದು ಅಂಗಡಿಯ ಪಕ್ಕದಲ್ಲಿರುವ ಇಂಚರ ಎಂಬ ಮನೆಗೆ ಹಾಕುವಂತೆ ತಿಳಿಸಿದ್ದರು. ಅದರಂತೆ ಸಿಮೆಂಟ್ ಚೀಲವನ್ನು ಮನೆಗೆ ಹಾಕಿ ಬಂದಾಗ ಅಂಗಡಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಇರಲಿಲ್ಲ.
ಅಂಗಡಿಯದ್ದ ಕೆಲಸದವರಾದ ಅಶೋಕ ಅವರು ಮಾಲಕರಿಗೆ ಕರೆ ಮಾಡಿ ಬರುವಂತೆ ತಿಳಿಸಿದ್ದು, ಅಶೋಕರವರು ಮಂಗಳೂರಿನಿಂದ ಅಂಗಡಿಗೆ ಬಂದು ವಿಚಾರಿಸಿದಾಗ ಅಂಗಡಿಯ ಡ್ರಾವರ್ ಒಡೆದ ಹಣ ಲಪಟಾಯಿಸಿರುವುದು ಗಮನಕ್ಕೆ ಬಂದಿದೆ.
ಕಳ್ಳತನ ಮಾಡುವ ಉದ್ದೇಶದಿಂದ ಅಶೋಕ ಅವರನ್ನು ಅಂಗಡಿಯಿಂದ ಹೊರಗೆ ಕಳುಹಿಸಿ, ಡ್ರಾವರ್ಒಡೆದು ಕಳ್ಳರು ಅದರೊಳಗಿದ್ದ ನಗದು 1.45 ಲಕ್ಷ ರೂ ಅನ್ನು ಕಳವು ಮಾಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ