ಮಲ್ಪೆ: ಬೋಟಿನಿಂದ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವು
Team Udayavani, Oct 7, 2022, 11:48 PM IST
ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನ 2ನೇ ಟಿ – ಜೆಟ್ಟಿಯ ಬಳಿ ಬೋಟಿನಿಂದ ಮೀನುಗಾರ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಅ.7ರಂದು ಸಂಭವಿಸಿದೆ.
ಹೆಜಮಾಡಿಯ ಮೀನುಗಾರ ರಮೇಶ್ ಕೋಟ್ಯಾನ್ (75) ಅವರು ಮೃತರು. ಅವರು ಗುರು ರಾಘವೇಂದ್ರ ಬೋಟಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು. ಮುಂಜಾನೆ 4 ಗಂಟೆಗೆ ಹೆಜಮಾಡಿಯ ಮನೆಯಿಂದ ಮಲ್ಪೆಗೆ ಹೊರಟಿದ್ದು, ಸುಮಾರು 5.30ರ ವೇಳೆಗೆ ಮೀನುಗಾರಿಕೆಗೆ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಬೆಳಗ್ಗೆ 7. 30ಕ್ಕೆ ಅವರ ಮೃತದೇಹ ಬಂದರಿನ ದಕ್ಕೆಯ ನೀರಿನಲ್ಲಿ ಪತ್ತೆಯಾಗಿದ್ದು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ್ದಾರೆ. ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ