ಮಣಿಪಾಲ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಜ್ಜುಗುಜ್ಜಾದ ಕಾರು
ಪೆರಂಪಳ್ಳಿ ರಸ್ತೆಯಲ್ಲಿ ತಡರಾತ್ರಿ ಅಪಘಾತ:ಪರಿಸರದಲ್ಲಿ ವಿದ್ಯುತ್ ಕಡಿತ
Team Udayavani, Oct 18, 2022, 1:00 AM IST
ಮಣಿಪಾಲ: ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಪೆರಂಪಳ್ಳಿ ಸುಂದರಿ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಲಿಯಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಪರಿಸರದಾದ್ಯಂತ ರಾತ್ರಿಪೂರ್ತಿ ವಿದ್ಯುತ್ ಇರಲಿಲ್ಲ.
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ 2-3 ಪಲ್ಟಿಯಾಗಿ, ಮತ್ತೊಂದು ಕಂಬಕ್ಕೆ ಢಿಕ್ಕಿಯಾಗಿ ನಿಂತಿತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾರಿನಲ್ಲಿ ಇತರ 2-3 ಮಂದಿ ಇದ್ದರೆನ್ನಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರು ಮಾತ್ರ ನಜ್ಜುಗುಜ್ಜಾಗಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.
ಅಪಘಾತ ವಲಯ
ಅಪಘಾತ ಸಂಭವಿಸಿದ ಪ್ರದೇಶ ತಿರುವಿನಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ವಾರಕ್ಕೆ ಒಂದೆರಡು ಅಪಘಾತಗಳು ಇಲ್ಲಿ ಸರ್ವೇ ಸಾಮಾನ್ಯ. ಈ ತಿರುವನ್ನು ಸರಿ ಮಾಡಬೇಕೆಂದು ಆಗ್ರಹಿಸಿದರೂ ಇದುವರೆಗೆ ಸರಿ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿದ್ಯುತ್ ಕಡಿತ
ವಿದ್ಯುತ್ ಕಂಬ ತುಂಡಾದ ಕೂಡಲೇ ವಿದ್ಯುತ್ ಕಡಿತವಾಗಿದ್ದು, ಅನಂತರ ಇಲ್ಲಿನ ಪುತ್ತೂರು ಫೀಡರ್ನಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಯಿತು. ಅಂಬಾಗಿಲು, ಹನುಮಂತನಗರ, ರಾಜೀವ ನಗರ, ಪೆರಂಪಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.
ಕಂಬ ಬದಲಿಸಬೇಕಿರುವುದರಿಂದ ವಿದ್ಯುತ್ ಸರಬರಾಜು ಪುನರಾರಂಭ ಬೆಳಗ್ಗೆಯಷ್ಟೇ ಸಾಧ್ಯವಾಗಬಹುದು ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ