ಹೂಡೆ ಬೀಚ್: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ
Team Udayavani, Sep 26, 2022, 11:10 PM IST
ಮಲ್ಪೆ: ಹೂಡೆ ಬೀಚ್ನಲ್ಲಿ ರವಿವಾರ ಸಂಜೆ ನೀರಿಗೆ ಇಳಿದಿದ್ದ ಮಣಿಪಾಲದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದು, ಅವರಲ್ಲಿ ಇಬ್ಬರ ಮೃತದೇಹ ಸ್ವಲ್ವ ಸಮಯದಲ್ಲೆ ಪತ್ತೆಯಾಗಿದ್ದು, ನಾಪತ್ತೆಯಾಗಿದ್ದ ಮತ್ತೋರ್ವ ಹೈದರಾಬಾದ್ನ ಶ್ರೀಕರ (19)ನ ಮೃತದೇಹ ಸೋಮವಾರ ಬೆಳಗ್ಗೆ ಆದೇ ಜಾಗದಲ್ಲಿ ಪತ್ತೆಯಾಗಿದೆ.
ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಸಮುದ್ರ ತೀರದಲ್ಲಿ ತೇಲುತ್ತಿದ್ದ ಮೃತದೇಹವನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ದಡಕ್ಕೆ ತಂದಿದ್ದಾರೆ. ರವಿವಾರ ರಾತ್ರಿ 10 ಗಂಟೆಯ ವರೆಗೆ ಕರಾವಳಿ ಕಾವಲು ಪಡೆ, ಸ್ಥಳೀಯರ ಜತೆ ಈಶ್ವರ ಅವರು ಹುಡುಕಾಟ ನಡೆಸಿದ್ದರು.
ವಾರಾಂತ್ಯ ರಜೆಯ ಹಿನ್ನೆಲೆಯಲ್ಲಿ ಎಂಐಟಿಯ 15 ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಹೂಡೆ ಬೀಚ್ಗೆ ವಿಹಾರಕ್ಕೆಂದು ತೆರಳಿದ್ದರು.
ಸಮುದ್ರದಲ್ಲಿ ಈಜಾಡುತ್ತಿರುವ ವೇಳೆ ಮೂವರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಬೆಂಗಳೂರಿನ ಷಣ್ಮುಖ ಮತ್ತು ನಿಶಾಂತ್ ರವಿವಾರ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದರು. ಮೂವರು ಸಹಪಾಠಿಗಳ ಸಾವಿನಿಂದಾಗಿ ಮಣಿಪಾಲ ಕಾಲೇಜಿನಲ್ಲಿ ಸೂತಕದ ಛಾಯೆ ಆವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ