Karkala ಇಕ್ಕಟ್ಟು ರಸ್ತೆಯಲ್ಲಿ ನಿಧಾನಗತಿ ಕಾಮಗಾರಿಯಿಂದ ಬಿಕ್ಕಟ್ಟು !

ಘಾಟಿ ಹೆದ್ದಾರಿಯಲ್ಲಿ ಕೇಬಲ್‌ ಅಳವಡಿಕೆ ಕಾಮಗಾರಿ

Team Udayavani, Sep 10, 2023, 12:36 AM IST

Karkala ಇಕ್ಕಟ್ಟು ರಸ್ತೆಯಲ್ಲಿ ನಿಧಾನಗತಿ ಕಾಮಗಾರಿಯಿಂದ ಬಿಕ್ಕಟ್ಟು !

ಕಾರ್ಕಳ: ಮಾಳ ಘಾಟಿ ರಸ್ತೆಯಲ್ಲಿ ಕೇಬಲ್‌ ಅಳವಡಿಕೆ ಕಾಮಗಾರಿ ಏಳೆಂಟು ತಿಂಗಳಿನಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದು, ಮೊದಲೇ ಇಕ್ಕಟ್ಟಾಗಿರುವ ರಸ್ತೆಯಲ್ಲಿ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕರಾವಳಿಯಿಂದ ಚಿಕ್ಕಮಗಳೂರು, ಕಳಸ, ಶೃಂಗೇರಿ ಮೊದಲಾದ ಭಾಗಗಳನ್ನು ತಲುಪುವ ಘಾಟಿ ರಸ್ತೆಯಲ್ಲಿ ಮಾಳದಿಂದ ಆರಂಭಗೊಂಡು ಎಸ್‌.ಕೆ. ಬಾರ್ಡರ್‌ ತನಕ ಹೆದ್ದಾರಿ ಬದಿಯಲ್ಲಿ ಕೇಬಲ್‌ ಅಳವಡಿಕೆ ಪ್ರಗತಿಯಲ್ಲಿದೆ. ಮೊದಲೇ ಅಗಲ ಕಿರಿದಾದ ತಿರುವು-ಮುರುವುಗಳ ಹೆದ್ದಾರಿ ಇದಾಗಿದ್ದು ವಾಹನಗಳ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ ಹಾಗೂ ಅಪಘಾತಗಳಿಗೂ ಎಡೆಮಾಡಿ ಕೊಡುತ್ತಿದೆ.

ಕೇಬಲ್‌ ಅಳವಡಿಸಲೆಂದು ಹೆದ್ದಾರಿ ಬದಿ ಅಲ್ಲಲ್ಲಿ ಅಗೆದಿಟ್ಟಿರುವುದರಿಂದ ವಾಹನ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಾಮಗಾರಿಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಹೊತ್ತಿರುವ ವಾಹನಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸುವುದರಿಂದಲೂ ಸಂಚಾರಕ್ಕೆ ಅನನುಕೂಲವಾಗುತ್ತಿದೆ.

ಚಾಲನೆಗೆ ಹರಸಾಹಸ
ಘಟ್ಟ ಇಳಿದು ಬರುವ ವಾಹನಗಳು ವೇಗವಾಗಿ ಬರುತ್ತಿದ್ದು, ದೊಡ್ಡ ವಾಹನಗಳು ಎದುರಾದಾಗ ಬದಿಗೆ ಸರಿಯಲು ಸಾಧ್ಯವಾಗುತ್ತಿಲ್ಲ. ಮೊದಲೇ ಅಗಲ ಕಿರಿದಾದ ರಸ್ತೆ; ಅದರ‌ಲ್ಲಿ ಎರಡು ವಾಹನಗಳು ಸಾಗುವುದೇ ಕಷ್ಟಕರ ಎಂಬ ಸ್ಥಿತಿ ಇರುವಾಗ ರಸ್ತೆ ಬದಿ ಅಲ್ಲಲ್ಲಿ ಹೊಂಡಗಳನ್ನು ನಿರ್ಮಿಸಿರುವುದು ಅಪಾಯ ತಂದೊಡ್ಡುತ್ತಿದೆ.

ಹೆಚ್ಚು ಪ್ರವಾಸಿಗರ ವಾಹನ ಓಡಾಟ
ಹೊರ ಜಿಲ್ಲೆಗಳ ವಾಹನಗಳ ಚಾಲಕರಿಗೆ ರಸ್ತೆಯ ಪರಿಚಯವಿಲ್ಲದೆ ಇರುವುದು ಕೂಡ ಅಪಘಾತ ಹೆಚ್ಚಾಗಲು ಕಾರಣವಾಗುತ್ತಿದೆ. ಕಾಮಗಾರಿ ನಡೆಯುತ್ತಿರುವ ಬಗ್ಗೆ ಅರಿವಿಲ್ಲದೆ ಸಮಸ್ಯೆಗಳಿಗೆ ಸಿಲುಕುತ್ತಿದ್ದಾರೆ.

ವಾರಾಂತ್ಯದಲ್ಲಿ ಕಾರ್ಕಳ, ಮೂಡುಬಿದಿರೆ, ಮಂಗಳೂರು, ಉಡುಪಿ ಭಾಗಗಳಿಗೆ ಬರುವ ಪ್ರವಾಸಿಗರು ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಬಳಿಕ ಮಲೆನಾಡು ಭಾಗದ ಶೃಂಗೇರಿ, ಹೊರನಾಡು, ಕಳಸ ಮೊದಲಾದೆಡೆಗೆ ತೆರಳಲು ಇದೇ ರಸ್ತೆಯನ್ನು ಬಳಸುತ್ತಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯ ವಾಹನಗಳೇ ಹೆಚ್ಚಾಗಿ ಈ ರಸ್ತೆಯಲ್ಲಿ ಓಡಾಡುತ್ತವೆ. ಲಾರಿ, ಟಿಪ್ಪರ್‌ಗಳು ಭಾರದ ವಸ್ತುಗಳನ್ನು ತುಂಬಿಕೊಂಡು ಸಾಗುತ್ತವೆ. ಕೆಲವು ಕಡೆ ಎರಡು ವಾಹನಗಳು ಎದುರುಬದುರಾದಾಗ ಅನಿವಾರ್ಯವಾಗಿ ಒಂದು ವಾಹನ ಹಿಮ್ಮುಖವಾಗಿ ಚಲಿಸಿ ದಾರಿ ಬಿಟ್ಟುಕೊಡಬೇಕಾಗುತ್ತದೆ. ಓವರ್‌ ಟೇಕ್‌ ಮಾಡಲು ಹೋಗಿ ಕೇಬಲ್‌ ಗುಂಡಿಗೆ ಬಿದ್ದ ಹಲವು ಘಟನೆಗಳು ಇಲ್ಲಿ ಸಂಭವಿಸಿವೆ.

ಮಳೆಗಾಲದಲ್ಲಿ ಯಾಕೆ ಕಾಮಗಾರಿ?
ಘಾಟಿ ರಸ್ತೆಯಲ್ಲಿ ಕೇಬಲ್‌ ಅಳವಡಿಕೆ ಕಾಮಗಾರಿ ಆರಂಭಗೊಂಡು ಸುಮಾರು 8ರಿಂದ 9 ತಿಂಗಳುಗಳು ಕಳೆದಿವೆ. ಮಳೆಗಾಲ ಈ ಹೆದ್ದಾರಿಯಲ್ಲಿ ಬರೆಕುಸಿತ, ಮರ ರಸ್ತೆಗೆ ಬೀಳುವುದೆಲ್ಲ ನಡೆಯುತ್ತಿರುತ್ತದೆ. ಇದರ ನಡುವೆ ಮಳೆಗಾಲದ ಅವಧಿಯಲ್ಲೆ ಕೇಬಲ್‌ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಅರಣ್ಯ ಇಲಾಖೆಯವರು ಗಮನಕ್ಕೆ ತಾರದೆ ಕೇಬಲ್‌ ಅಳವಡಿಕೆಗೆ ಅನುಮತಿ ನೀಡಿದ್ದ ಪರಿಣಾಮ ಸಮಸ್ಯೆ ಆಗಿದೆ. ಆದರೂ ನಾವು ಜಂಗಲ್‌ ಕಟ್ಟಿಂಗ್‌ ಎಲ್ಲ ಮಾಡಿಸಿದ್ದೇವೆ. ಅಪಾಯ ಇರುವಲ್ಲಿ ಬ್ಯಾರಿಕೇಡ್‌ ಇರಿಸಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇವೆ. ಆದರೆ ಇನ್ನೊಮ್ಮೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಸಂಚಾರದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ.
– ಶಶಿಧರ್‌, ಸಹಾಯಕ ಎಂಜಿನಿಯರ್‌, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ, ಶೃಂಗೇರಿ

ರಸ್ತೆಯೂ ಕಿರಿದು.ಇದರ ನಡುವೆ ಕೇಬಲ್‌ ಕಾಮಗಾರಿಯಿಂದಾಗಿ ವಾಹನ ಸಂಚಾರ ಸಾಧ್ಯವಾಗುವುದಿಲ್ಲ. ತುಸು ಎಚ್ಚರ ತಪ್ಪಿದರೂ ಅಪಘಾತ ನಿಶ್ಚಿತ. ಕೇಬಲ್‌ ಅಳವಡಿಕೆ ಕಾಮಗಾರಿಗೆ ಕನಿಷ್ಠ ಮಳೆಗಾಲ ಮುಗಿಯುವ ವರೆಗಾದರೂ ತಡೆ ನೀಡಬೇಕಿತ್ತು.
– ಪರಶುರಾಮ,
ಖಾಸಗಿ ವಾಹನ ಚಾಲಕ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.