ಹೈನುಗಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರಂಭಗೊಂಡ ಸಂಸ್ಥೆ

ಕರ್ಕುಂಜೆ ಹಾಲು ಉತ್ಪಾದಕರ ಸಹಕಾರ ಸಂಘ

Team Udayavani, Feb 25, 2020, 5:55 AM IST

2302KDPP2

ಗ್ರಾಮೀಣ ಭಾಗದಲ್ಲಿ ಕೃಷಿಕರಿಗೆ ಹೈನುಗಾರಿಕೆ ಒಂದು ಉತ್ತಮ ಉಪಕಸುಬು. ಇದರ ಮೂಲಕ ಸ್ಥಳೀಯ ಆರ್ಥಿಕಾಭಿವೃದ್ಧಿಯ ಅವಕಾಶವನ್ನು ಮನಗಂಡು ಸ್ಥಾಪನೆಯಾಗಿದ್ದೇ ಕರ್ಕುಂಜೆ ಹಾಲು ಉತ್ಪಾದಕರ ಸಂಘ. ಸಂಘ ಸ್ಥಾಪಿಸಿದ ಹಿರಿಯರ ಉದ್ದೇಶ ಸಂಘದ ಅಭಿವೃದ್ಧಿ ಮೂಲಕ ಈಗ ನನಸಾಗಿದೆ.

ತಲ್ಲೂರು: ಕೃಷಿಯೊಂದಿಗೆ ಜಾನುವಾರುಗಳನ್ನು ಹೆಚ್ಚಾಗಿ ಸಾಕುತ್ತಿದ್ದ ನೇರಳಕಟ್ಟೆ, ಗುಲ್ವಾಡಿ, ಮಾವಿನಕಟ್ಟೆ ಭಾಗದ ಕೃಷಿಕರಿಗೆ ಹೈನುಗಾರಿಕೆಯ ಬಗ್ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕರ್ಕುಂಜೆ ಹಾಲು ಉತ್ಪಾದಕರ ಸಂಘ ಸ್ಥಾಪನೆಯಾಯಿತು.

1985 ರಲ್ಲಿ ನೇರಳಕಟ್ಟೆ ಸಮೀಪದ ಬಾವಿಕಟ್ಟೆ ಬಳಿಯ ಬಾಡಿಗೆ ಕಟ್ಟಡವೊಂದರಲ್ಲಿ ಈ ಸಂಘ ಆರಂಭಗೊಂಡಿತು. 1987 ರ ಜು. 28 ರಂದು ಅಧಿಕೃತವಾಗಿ ನೋಂದಣಿಗೊಂಡಿತ್ತು. ಡಾ| ಸದಾಶಿವ ಶೆಟ್ಟಿಯವರು ಇದರ ಸ್ಥಾಪಕಾಧ್ಯಕ್ಷರಾಗಿದ್ದು, ಅವರೊಂದಿಗೆ ಅನೇಕ ಹೈನುಗಾರರೂ ಸಂಘ ಸ್ಥಾಪನೆಗೆ ಮುತುವರ್ಜಿವಹಿಸಿದ್ದರು.
ಆರಂಭದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಹೈನುಗಾರರಿಂದ ಮಾತ್ರ ಆರಂಭಗೊಂಡ ಈ ಸಂಸ್ಥೆಯು ಈಗ ಸದಸ್ಯರ ಸಂಖ್ಯೆ 100 ಕ್ಕೂ ಹೆಚ್ಚಿದೆ. ಈ ಭಾಗದ ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಈ ಸಂಘದ ಪಾತ್ರ ಮಹತ್ತರವಾಗಿದೆ. ಈ ಹಾಲಿನ ಡೈರಿಗೆ ಹಾಲು ಹಾಕಿ ತಮ್ಮ ಸಂಸಾರದ ಹೊಣೆಯನ್ನು ನಿರ್ವಹಿಸುವವರು ಅನೇಕ ಮಂದಿ ಇದ್ದಾರೆ.

ಆರಂಭಗೊಂಡ ಉದ್ದೇಶ
ಅವಿಭಜಿತ ದ.ಕ. ಜಿಲ್ಲೆಯ ಗ್ರಾಮೀಣ ಭಾಗದ ರೈತರಿಗೆ ಆರ್ಥಿಕವಾಗಿ ಚೈತನ್ಯ ತುಂಬಲು ಆರಂಭವಾದ ಸಂಸ್ಥೆ ಕೆನರಾ ಮಿಲ್ಕ್ ಯೂನಿಯನ್‌ (ಕೆಮುಲ್‌). 1985 ರಲ್ಲಿ ಕೆ.ಕೆ. ಪೈ ಅಧ್ಯಕ್ಷತೆಯಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂಟದೊಂದಿಗೆ ಕೆಮುಲ್‌ ವಿಲೀನಗೊಂಡಿತು. ಅದೇ ವರ್ಷ ನೇರಳಕಟ್ಟೆಯಲ್ಲಿ ಕರ್ಕುಂಜೆ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಆರಂಭಗೊಂಡಿರುವುದು ವಿಶೇಷ. 80-90 ರ ದಶಕದಲ್ಲಿ ಈ ಭಾಗದ ಹೈನುಗಾರರಿಗೆ ಉತ್ತೇಜನ ನೀಡಲು ಸಂಘ ನೀಡುವ ನಿಟ್ಟಿನಲ್ಲಿ ಶುರುವಾಯಿತು.

ಹೊಸ ಕಟ್ಟಡ
2011ರಲ್ಲಿ ನೇರಳಕಟ್ಟೆಯ ನಿಸರ್ಗ ಬಸ್‌ ನಿಲ್ದಾಣ ಸಮೀಪದ ಹೊಸ ಕಟ್ಟಡಕ್ಕೆ ಈ ಹಾಲು ಉತ್ಪಾದಕರ ಸಂಗ ಸ್ಥಳಾಂತರಗೊಂಡಿತು. ಆ ವರ್ಷದ ಏಪ್ರಿಲ್‌ನಲ್ಲಿ ಕ್ಷಿರಾಬ್ಧಿ ಎನ್ನುವ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ.

ಪ್ರಸ್ತುತ ಸ್ಥಿತಿಗತಿ
ಈಗ ಇಲ್ಲಿ ಒಟ್ಟು 133 ಸದಸ್ಯರಿದ್ದು, ಅದರಲ್ಲಿ 55 ಮಂದಿ ಹೈನುಗಾರರು ಖಾಯಂ ಆಗಿ ಹಾಲು ಹಾಕುತ್ತಿದ್ದಾರೆ. ದಿನಕ್ಕೆ 380 ರಿಂದ 400 ಲೀ. ಹಾಲು ಸಂಗ್ರಹವಾಗುತ್ತಿದೆ.

ಗರಿಷ್ಠ ಸಾಧಕರು
2018 -19 ನೇ ಸಾಲಿನಲ್ಲಿ 1,62,191 ಲೀಟರ್‌ ಹಾಲು ಸಂಗ್ರಹವಾಗಿದೆ. ಈ ಸಂಘದಲ್ಲಿ ಈ ವರ್ಷದಲ್ಲಿ ಹಾಲು ಹಾಕಿದ ಗರಿಷ್ಠ ಸಾಧಕರ ಪಟ್ಟಿಯಲ್ಲಿ ಶೀನ ಪೂಜಾರಿಯವರಿಗೆ ಅಗ್ರಸ್ಥಾನ. ಅವರು ದಿನಕ್ಕೆ 48 ಲೀಟರ್‌ ಹಾಲು ಸಂಘಕ್ಕೆ ಹಾಕುತ್ತಿದ್ದಾರೆ.

ಗ್ರಾಮೀಣ ಭಾಗದ ಹೈನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರ್ಕುಂಜೆ ಹಾಲು ಉತ್ಪಾದಕರ ಸಹಕಾರ ಸಂಘ ಆರಂಭಗೊಂಡಿತು. ಈಗಲೂ ಈ ಭಾಗದ ಕೃಷಿಕರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಸಂಘದ ವತಿಯಿಂದ ಈ ಭಾಗದಲ್ಲಿ ಹೈನುಗಾರರನ್ನು ಹೆಚ್ಚಿಸುವ ಗುರಿಯಿದೆ.
-ಕೆ. ಪದ್ಮನಾಭ ಅಡಿಗ, ಅಧ್ಯಕ್ಷರು

ಅಧ್ಯಕ್ಷರು:
ಡಾ| ಪ್ರಕಾಶ್‌ ಶೆಟ್ಟಿ, ಹೆಮ್ಮಕ್ಕಿ ವಿಠಲ ಶೆಟ್ಟಿ, ಸುಂದರ್‌ ಶೆಟ್ಟಿ ಅಂಪಾರು, ವಿಠಲ ಶೆಟ್ಟಿ ಕರ್ಕುಂಜೆ, ಕೆ. ಪದ್ಮನಾಭ ಅಡಿಗ (ಹಾಲಿ)
ಕಾರ್ಯದರ್ಶಿಗಳು: ಮೊಹಮ್ಮದ್‌ ನಜೀರ್‌ ಸಾಹೇಬ್‌, ಶೇಷಗಿರಿ ನಾಯಕ್‌ (ಹಾಲಿ)

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.