ಲಸಿಕೆ ಬಗ್ಗೆ ಅಪಪ್ರಚಾರ ದುರ್ದೈವ: ಸಿ.ಟಿ. ರವಿ
Team Udayavani, Jan 13, 2021, 2:21 AM IST
ಉಡುಪಿ: ಕೋವಿಡ್ ಲಸಿಕೆಯ ಬಗ್ಗೆಯೂ ಕೆಲವು ಪಕ್ಷಗಳು ಅಪಪ್ರಚಾರ ಮಾಡುತ್ತಿರುವುದು ದುರ್ದೈವದ ಸಂಗತಿ. ಜನರ ಆರೋಗ್ಯದ ದೃಷ್ಟಿಗಿಂತ ನಮ್ಮ ದೇಶದಲ್ಲಿ ತಯಾರಾದ ಔಷಧದ ಬಗ್ಗೆ ಅಪ ಪ್ರಚಾರ ಮಾಡುವುದೇ ಷಡ್ಯಂತ್ರವಾಗಿದೆ ಎಂದು ಬಿಜೆಪಿ ರಾ. ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಧಾನಿ ಈ ಬಗ್ಗೆ ಸ್ಪಷ್ಟಪಡಿಸಿ¨ªಾರೆ. ಸಂಪೂರ್ಣ ಮುನ್ನೆಚ್ಚರಿಕೆಗಳೊಂದಿಗೆ ಲಸಿಕೆ ಕೊಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.
ನಮ್ಮ ದೇಶದಲ್ಲಿ ಲಸಿಕೆ ತಯಾರಾದರೆ ಕೆಲವರಿಗೆ ನಂಬಿಕೆಯೇ ಇಲ್ಲ. ನಮ್ಮ ವಿಜ್ಞಾನಿಗಳ ಮೇಲೆಯೂ ವಿಶ್ವಾಸವಿಲ್ಲ. ಆದರೆ ಅದು ಇಟಲಿಯಿಂದ ಬರುವುದಾಗಿ ದ್ದರೆ ಬರುವ ಮೊದಲೇ ಬಹಳ ಒಳ್ಳೆಯದು ಎನ್ನುವ ಸರ್ಟಿಫಿಕೇಟ್ ಕೊಡುತ್ತಿದ್ದರು ಎಂದು ರವಿ ಕಾಂಗ್ರೆಸ್ನ ಹೆಸರನ್ನು ಹೇಳದೆ ಕುಟುಕಿದರು.
2 ದಿನದೊಳಗೆ ಲಸಿಕೆ ;
ಮಂಗಳೂರು: ಮೊದಲ ಹಂತದ ಲಸಿಕೆ ಮಂಗಳವಾರ ಬೆಂಗಳೂರು ತಲುಪಿದ್ದು, ಇಂದು ಅಥವಾ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಕೇಂದ್ರಕ್ಕೆ ರವಾನೆಯಾಗುವ ನಿರೀಕ್ಷೆ ಇದೆ. ಜ. 16ರಂದು ಜಿಲ್ಲೆಯ
6 ಕೇಂದ್ರಗಳಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಂಗಳೂರಿನಿಂದಲೇ ಲಸಿಕೆ ರವಾನೆ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ