ಅಕ್ಷರದ ಜತೆ ಸಾಂಸ್ಕೃತಿಕ ಶಿಕ್ಷಣ: ಲಿಂಗದೇವರು ಕರೆ


Team Udayavani, Feb 10, 2019, 12:30 AM IST

0802gk7.jpg

ಉಡುಪಿ: ಅಕ್ಷರದ ಜತೆ ಸಾಂಸ್ಕೃತಿಕ ಶ್ರೀಮಂತಿಕೆ ಮೂಡಿಸುವ ಕೆಲಸ ನಡೆಯಬೇಕಾಗಿದೆ ಎಂದು ಚಲನಚಿತ್ರ ನಿರ್ದೇಶಕ ಬಿ.ಎಸ್‌.ಲಿಂಗದೇವರು ಹೇಳಿದ್ದಾರೆ.

ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಶುಕ್ರವಾರ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ಕ್ಲ್ಯಾಪ್‌ಬೋರ್ಡ್‌ ಆ್ಯಂಡ್‌ ಬಿಯಾಂಡ್‌ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪರೀಕ್ಷೆ ಅವಲಂಬಿತ ಶಿಕ್ಷಣ ಕ್ರಮ ಬದಲಾಗಬೇಕಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಅಕಾಡೆಮಿ ಕಾರ್ಯದರ್ಶಿ ಡಾ|ಎಚ್.ಶಾಂತಾರಾಮ್‌ ಹೇಳಿದರು.

ಬಹುಮಾನ ವಿತರಣೆ
ಪತ್ರಿಕೋದ್ಯಮ ವಿಭಾಗವು ಬಿಳಿಕಲ್ಲು ಪ್ರಕಾಶನ ಹಾಗೂ ಫೋಕಸ್‌ ಸ್ಟುಡಿಯೋ ಸಹಯೋಗದಲ್ಲಿ ಹಮ್ಮಿಕೊಂಡ ಎ. ಈಶ್ವರಯ್ಯ ಸ್ಮರಣಾರ್ಥ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ‘ನೆಲದ ನೆಲೆ – ಗ್ರಾಮೀಣ ಸೊಬಗಿನ ನೈಜ ಚಿತ್ರಣ’ ಇದರ ಪ್ರಥಮ ಬಹುಮಾನ ಪಡೆದ ಕೊಪ್ಪಳದ ಭರತ್‌ ಕಂದಕೂರ್‌, ದ್ವಿತೀಯ ಬಹುಮಾನದ ಸುರತ್ಕಲ್‌ನ ಕಾರ್ತಿಕ್‌ ಎಂ.ಡಿ., ತೃತೀಯ ಬಹುಮಾನದ ಮಂಗಳೂರಿನ ದೀಕ್ಷಿತ್‌ ಆರ್‌. ಪೈ ಅವರಿಗೆ ಬಹುಮಾನ ವಿತರಿಸಲಾಯಿತು. ಆಯ್ದ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು.

ಬಹುಮಾನ ವಿತರಿಸಿದ ಹಿರಿಯ ಛಾಯಾಚಿತ್ರ ಕಲಾವಿದ ಗುರುದತ್‌ ಕಾಮತ್‌ ಅವರು, ಎ. ಈಶ್ವರಯ್ಯನವರು ಅವಿಭಜಿತ ದ.ಕ. ಜಿಲ್ಲೆಯ ಮೊದಲ ಫೋಟೋಗ್ರಫಿ ಗುರು. ಅಲ್ಲಿಯವರೆಗೆ ಯಾರೂ ಇದರ ಗುಟ್ಟನ್ನು ಹೇಳಿಕೊಡುತ್ತಿರಲಿಲ್ಲ ಎಂದರು. ಛಾಯಾಚಿತ್ರಗ್ರಾಹಕ ಫೋಕಸ್‌ ರಾಘು ಶುಭ ಕೋರಿದರು.

ಹಣಕ್ಕಾಗಿ ಸಿನೆಮಾ ತಯಾರಿಸಬಾರದು
ನಟ, ನಿರ್ದೇಶಕ ರಾಜ್‌ ಬಿ. ಶೆಟ್ಟಿಯವರು ಮಾತನಾಡಿ, ಹಣಕ್ಕಾಗಿ ಸಿನೆಮಾ ತಯಾರಿಸಬಾರದು. ಒಳ್ಳೆಯ ಸಂದೇಶ ಕೊಡುವ ಸಿನೆಮಾ ಕೊಡುವ ಗುರಿ ಇರಬೇಕು. ಸಣ್ಣಪುಟ್ಟ ಘಟನೆಗಳನ್ನು ಆಧರಿಸಿಯೂ ಸಿನೆಮಾವನ್ನು ಹೊರತರಬಹುದು ಎಂದರು.

ಪ್ರಾಂಶುಪಾಲ ಡಾ|ಎಂ.ಜಿ.ವಿಜಯ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಚಿತ್‌ ಕೋಟ್ಯಾನ್‌ ಸ್ವಾಗತಿಸಿಮುಖ್ಯಸ್ಥ ಮಂಜುನಾಥ ಕಾಮತ್‌ ವಂದಿಸಿದರು. ವಿದ್ಯಾರ್ಥಿಗಳಾದ ನಿತೀಶ್‌ ನಿರ್ವಹಿಸಿ ಗೌತಮ್‌ ಪರಿಚಯಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.