ಅವಧಿ ಪೂರ್ವದಲ್ಲಿಯೇ ಈ ಋತುವಿನ ಮಾರುಕಟ್ಟೆ ಓಟ ನಿಲ್ಲಿಸಲಿರುವ ಮಟ್ಟುಗುಳ್ಳ


Team Udayavani, May 28, 2021, 7:27 AM IST

ಅವಧಿ ಪೂರ್ವದಲ್ಲಿಯೇ ಈ ಋತುವಿನ ಮಾರುಕಟ್ಟೆ ಓಟ ನಿಲ್ಲಿಸಲಿರುವ ಮಟ್ಟುಗುಳ್ಳ

ಕಟಪಾಡಿ (ಉಡುಪಿ): ಜಿಐ ಮಾನ್ಯತೆಯೊಂದಿಗೆ ಪೇಟೆಂಟ್ ಪಡೆದಿರುವ ಮಟ್ಟುಗುಳ್ಳದ ಬೆಳೆಯು ತೌಖ್ತೇ ಚಂಡಮಾರುತದ ಪರಿಣಾಮ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಅವಧಿ ಪೂರ್ವದಲ್ಲಿಯೇ ಈ ಋತುವಿನ ಮಾರುಕಟ್ಟೆಯ ಓಟವನ್ನು ನಿಲ್ಲಿಸಲಿದೆ.

ಚಂಡಮಾರುತದ ಪರಿಣಾಮ ಮಟ್ಟುಗುಳ್ಳ ಬೆಳೆಯುವ ಪ್ರದೇಶದಲ್ಲಿ ಉಪ್ಪು ನೀರು ಎಲ್ಲೆಂದರಲ್ಲಿ ಹರಿದು ಮತ್ತು ಹೆಚ್ಚಿನ ಪ್ರದೇಶವು ನೀರಿನಿಂದ ತೇವಯುಕ್ತಗೊಂಡು ಇನ್ನೇನು ಸುಮಾರು 10 ದಿನಕ್ಕಾಗುವಷ್ಟು ಫಸಲು ಮಾತ್ರ ಲಭಿಸಲಿದ್ದು, ಅವಧಿ ಪೂರ್ವದಲ್ಲಿಯೇ ಬೆಳೆಯು ಮುಕ್ತಾಯಗೊಳ್ಳಲಿದೆ ಎಂದು ಬೆಳೆಗಾರರು ತಮ್ಮ ಸಂಕಷ್ಟವನ್ನು ತೆರೆದಿಟ್ಟಿದ್ದಾರೆ.

ಋತುವಿಡೀ ಪ್ರಕೃತಿ ಮುನಿಸು: ಈ ಬಾರಿ ಮಟ್ಟುಗುಳ್ಳ ಬೆಳೆಯ ಋತುವಿಡೀ ಪ್ರಕೃತಿಯ ಮುನಿಸಿಗೊಳಗಾಗಿ ಇಳುವರಿ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದು, ಮತ್ತೆ ಸಸಿ ನಾಟಿ ಮಾಡಿ ಮಟ್ಟುಗುಳ್ಳವನ್ನು ಬೆಳೆದಿದ್ದು, ಇನ್ನೇನು ಫಸಲು ಕೈ ಸೇರಬೇಕೆನ್ನುವ ಹೊತ್ತಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ದುಸ್ಥಿತಿ ಮಟ್ಟುಗುಳ್ಳ ಬೆಳೆಗಾರರದ್ದಾಗಿದೆ.

ಬೇಡಿಕೆ ಹೆಚ್ಚಳ -ಗುಳ್ಳ ಇಲ್ಲ : ಕೋವಿಡ್ ಲಾಕ್ಡೌನ್ ಈ ಸಂದರ್ಭದಲ್ಲಿ  ಬೇಡಿಕೆಯು ಹೆಚ್ಚಿದ್ದು, ಆದರೆ ಹೆಚ್ಚಿನ ಪ್ರಮಾಣದ ಮಟ್ಟುಗುಳ್ಳ ಇಲ್ಲವಾಗಿದೆ. ಅಕಾಲಿಕ ಮಳೆಯಿಂದಾಗಿ ಬೆಳೆಗಾರರು ನಷ್ಟ ಹೊಂದುವಂತಾಗಿತ್ತು. ಬಳಿಕ ಹೆಚ್ಚು ಪ್ರಮಾಣದ ಮಳೆಯಿಂದ ಬೆಳೆ ನಷ್ಟ, ಬಳಿಕ ಉಬ್ಬರದ ಪರಿಣಾಮ ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆಹಾನಿ, ಇದೀಗ ತೌಖ್ತೇ ಚಂಡಮಾರುತದ ದುಷ್ಪರಿಣಾಮ ಬೆಳೆ ಹಾನಿ ಸೇರಿದಂತೆ ಈ ಬಾರಿ ಮಟ್ಟುಗುಳ್ಳ ಬೆಳೆಯು ಈ ಋತು ಸಂಪೂರ್ಣವಾಗಿ ಬೆಳೆಗಾರರು ಸಂಕಷ್ಟಕ್ಕೆ ಬಿದ್ದಿದ್ದರು.

ಜಿಲ್ಲಾಧಿಕಾರಿ ಬಂದರೂ ಪರಿಹಾರ ಪ್ಯಾಕೇಜ್ ಮರೀಚಿಕೆ : ಮಟ್ಟುಗುಳ್ಳ ಬೆಳೆ ಬೆಳೆದು ಫಸಲು ಕೈ ಸೇರುವ ಪ್ರತೀ ಹಂತದಲ್ಲೂ ಪ್ರಕೃತಿ ವಿಕೋಪದಿಂದ ಮಟ್ಟುಗುಳ್ಳ ಬೆಳೆಗಾರರು ನಷ್ಟವನ್ನು ಅನುಭವಿಸಿದ್ದನ್ನು ಶಾಸಕರು, ಜಿಲ್ಲಾಕಾರಿ, ತೋಟಗಾರಿಕಾ ಸಹಿತ ಇತರೇ ಅಕಾರಿಗಳು ಸ್ಥಳಕ್ಕಾಗಮಿಸಿ ಬೆಳೆ ನಷ್ಟವನ್ನು ವೀಕ್ಷಿಸಿ ಸರಕಾರದ ಮಟ್ಟದಲ್ಲಿ ವಿಶೇಷ ಪ್ಯಾಕೇಜ್ ಒದಗಿಸುವ ಭರವಸೆಯ ಆಶಾಭಾವನೆಯು ಮರೀಚಿಕೆಯಾಗುಳಿದಿದೆ ಎಂದು ತಮ್ಮ ಸಂಕಷ್ಟವನ್ನು ನೆನಪಿಸಿಕೊಂಡರು.

ಇದನ್ನೂ ಓದಿ:ಬದಲಾಗಬೇಕಾಗಿದೆ ದೇಶದ ಆರೋಗ್ಯ ವ್ಯವಸ್ಥೆ

ಮಟ್ಟುಗುಳ್ಳ ಬೆಳೆಗಾರರು ಗದ್ದೆಯ ಹುಣಿಯ ಎತ್ತರಕ್ಕೆ ಆವರಿಸಿದ್ದ ನೆರೆ ನೀರಿನ ದುಷ್ಪರಿಣಾಮವಾಗಿ  ಅಳವಡಿಸಲಾದ ಮಲ್ಚಿಂಗ್ ಶೀಟ್, ಗೊಬ್ಬರ ಸಹಿತ ಮರು ನಾಟಿ ನಡೆಸಿಯೇ ಮಟ್ಟುಗುಳ್ಳ ಮತ್ತೆ ಬೆಳೆಯ ಬೇಕಾದ ದುಸ್ಥಿತಿಯನ್ನು ಎದುರಿಸುವಂತಾಗಿತ್ತು.

ಜಿಐ ಮಾನ್ಯತೆ : ಇಲ್ಲಿನ ಕೃಷಿಕರು ಭತ್ತದ ಬೆಳೆಯನ್ನು ಬೆಳೆಯುವ ಗದ್ದೆಯಲ್ಲಿ ಪ್ರತೀವರ್ಷ ಗುಳ್ಳ ಕೃಷಿ ಮಾಡುತ್ತಾರೆ. ಅನೇಕರು ಜೂನ್, ಜುಲೈ ತಿಂಗಳಲ್ಲಿ ಬೆಳೆಯಲಾಗುವ ಕಾರ್ತಿ ಭತ್ತದ ಬೆಳೆಯನ್ನು ಮೊಟಕುಗೊಳಿಸಿ ಗುಳ್ಳ ಕೃಷಿಗಾಗಿ ಗದ್ದೆ ಹಡಿಲುಬಿಟ್ಟು ಗುಳ್ಳದ ಬಿತ್ತನೆ ನಡೆಸುತ್ತಾರೆ. ಮೂರು ತಿಂಗಳ ಕಾಲಾವಕಾಶದಲ್ಲಿ ಸಸಿ ಬಲಿತು ಸಮೃದ್ಧ ಗುಳ್ಳದ ಬೆಳೆಯಾಗುತ್ತದೆ. ಇದೀಗ ಜಿಐ ಮಾನ್ಯತೆಯೊಂದಿಗೆ ಪೇಟೆಂಟ್ ಪಡೆದು ಲಾಂಛನ( ಸ್ಟಿಕ್ಕರ್)ದೊಂದಿಗೆ ಮುಂಬಯಿ, ಬೆಂಗಳೂರು ಸೇರಿದಂತೆ ದೇಶವಿದೇಶಗಳಲ್ಲಿ ಮಟ್ಟುಗುಳ್ಳ ಪ್ರಿಯರಿದ್ದು, ಅಲ್ಲಿಗೂ ಕಾಲಕಾಲಕ್ಕೆ ಮಟ್ಟುಗುಳ್ಳ ಸರಬರಾಜು ಮಾಡಲಾಗುತ್ತದೆ.

ಪ್ರಕೃತಿ ವಿಕೋಪದಿಂದಾಗಿ ಮಟ್ಟುಗುಳ್ಳ ಬೆಳೆಯು ಬಾಧಿತವಾಗಿದೆ. ನೆರೆ, ಚಂಡಮಾರುತ, ಉಪ್ಪು ನೀರಿನ ಬಾಧೆಯಿಂದ ದಿಕ್ಕು ತಪ್ಪಿದ ಮಟ್ಟುಗುಳ್ಳದ ಬೆಳೆಯಿಂದ ಬೆಳೆಗಾರರು, ಸಂಘವೂ ಬೆಳೆ ನಷ್ಟವನ್ನು ಅನುಭವಿಸುವಂತಾಗಿದೆ ಎನ್ನುತ್ತಾರೆ ಮಟ್ಟುಗುಳ್ಳ ಬೆಳೆಗಾರರ ಸಂಘ ಅಧ್ಯಕ್ಷ ಸುನಿಲ್ ಡಿ. ಬಂಗೇರ.

ಈ ಬಗ್ಗೆ ಮಾತನಾಡುವ ಮಟ್ಟುಗುಳ್ಳ ಬೆಳೆಗಾರರ ಸಂಘದ ಪ್ರಬಂಧಕ ಲಕ್ಷ್ಮಣ ಮಟ್ಟು, ಅವಧಿ ಪೂರ್ವದಲ್ಲಿ ಮಟ್ಟುಗುಳ್ಳ ಮುಗಿದಿದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದ್ದರೂ ಫಸಲು ಇಲ್ಲ. ಕನಿಷ್ಠ 1 ತಿಂಗಳ ಫಸಲು ಮತ್ತು ಬೆಳೆಯು ನಷ್ಟವಾಗಿದೆ ಎನ್ನುತ್ತಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.