ಅಸಾನಿ ಚಂಡಮಾರುತ: ವಿವಿಧೆಡೆ ಉತ್ತಮ ಮಳೆ


Team Udayavani, May 12, 2022, 10:34 AM IST

hurricane

ಕುಂದಾಪುರ: ನಗರದಲ್ಲಿ ಬುಧವಾರ ದಿನವಿಡೀ ಸುರಿದ ಭಾರೀ ಮಳೆ ಯಿಂದಾಗಿ ಹಲವೆಡೆ ಕೃತಕ ನೆರೆ ಉಂಟಾಗಿತ್ತು. ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಯಿತು.

ಎಲ್ಲೆಲ್ಲಿ

ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ -ಬಸ್ರೂರು- ಮೂರುಕೈ ಬಳಿಯ ಸರ್ವಿಸ್‌ ರಸ್ತೆ ತೋಡಿನಂತಾಗಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರ ಬಸ್ರೂರು ಮೂರು ಕೈ ಅಂಡರ್‌ಪಾಸ್‌, ಸಬ್‌ಸ್ಟೇಶನ್‌ ಬಳಿ, ಕೆಎಸ್‌ಆರ್‌ ಟಿಸಿ ಡಿಪೊ ಬಳಿ, ಟಿಟಿ ರಸ್ತೆ ಕಡೆಗೆ ಸಂಚರಿಸುವ ಅಂಡರ್‌ಪಾಸ್‌, ವಿನಾಯಕ -ಕೋಡಿ ಜಂಕ್ಷನ್‌, ಸಹನಾ ಹಾಲ್‌ವರೆಗೆ ಮಳೆ ನೀರು ರಸ್ತೆಯಲ್ಲಿಯೇ ನಿಂತು ಕೆರೆಯಂತಾಗಿತ್ತು. ಕೃತಕ ನೆರೆ ಸೃಷ್ಟಿಯಾಗಿ ರಿಕ್ಷಾ ಚಾಲಕರು, ಸ್ಥಳೀಯ ಅಂಗಡಿ ಮಾಲಕರು, ವಾಹನ ಚಾಲಕರು ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟ

ನಿರಂತರವಾಗಿ ಸುರಿದ ಮಳೆಯಿಂದಾಗಿ ಸರ್ವಿಸ್‌ ರಸ್ತೆಯಲ್ಲಿ ನೀರು ಹರಿದು ಸರಾಗವಾಗಿ ಚರಂಡಿ ಸೇರಲು ಸಾಧ್ಯವಾಗದೇ ಬೆಳಗ್ಗೆಯಿಂದಲೇ ಸರ್ವಿಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಬಸ್‌, ಇತರೆ ವಾಹನಗಳಲ್ಲಿ ಕೆಲಸಕ್ಕೆ ಹೋಗುವವರು ಇದರಿಂದ ಸಂಕಷ್ಟ ಅನುಭವಿಸುವಂತಾಯಿತು.

ಹಿಂದೊಮ್ಮೆ

ಎರಡು ವರ್ಷಗಳ ಹಿಂದೆ ಸರ್ವಿಸ್‌ ರಸ್ತೆಯೇ ಹೆದ್ದಾರಿಯಾಗಿತ್ತು. ಫ್ಲೈಓವರ್‌ ಕಾಮಗಾರಿ ಕುಂಟುತ್ತಾ ಸಾಗಿತ್ತು. 2020 ಆ. 8ರಂದು ಇದೇ ರೀತಿ ಅವ್ಯವಸ್ಥೆಯಾಗಿದ್ದಾಗ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಡ್ಡಗಟ್ಟಿ ಅವರು ಜಿಲ್ಲಾಧಿಕಾರಿಗೆ ದುರಸ್ತಿಗೆ ಸೂಚಿಸಿದ ಪ್ರಸಂಗ ನಡೆದಿತ್ತು.

ಅದಾದ ಬಳಿಕ ಆ.11ರಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಖುದ್ದು ನಾಲ್ಕು ಗಂಟೆಗಳ ಕಾಲ ರಸ್ತೆಬದಿಯಲ್ಲೇ ನಿಂತು ಕೆಲಸ ಮಾಡಿಸಿ ಸಮಸ್ಯೆಗಳನ್ನು ಸರಿಪಡಿಸಿದ್ದರು. ರಸ್ತೆಯಿಂದ ನೀರು ಹರಿದುಹೋಗಲು ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಗಿತ್ತು.

ಮತ್ತೆ ಸಮಸ್ಯೆ

ಹೆದ್ದಾರಿ ಕಾಮಗಾರಿ ಪೂರ್ಣಗೊಂಡು ಸರ್ವಿಸ್‌ ರಸ್ತೆಯಾಗಿ ಪೂರ್ಣಪ್ರಮಾಣದಲ್ಲಿ ಕಳೆದ ವರ್ಷದಿಂದ ಬಳಕೆಯಾಗುತ್ತಿದ್ದು ಈಗ ಮತ್ತೆ ಸಮಸ್ಯೆ ಉದ್ಭವವಾಗಿದೆ. ಸಹಾಯಕ ಕಮಿಷನರ್‌ ಕೆ. ರಾಜು ಅವರು ಅನೇಕ ಬಾರಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌, ಗುತ್ತಿಗೆದಾರರ ಬಳಿ ಸರ್ವಿಸ್‌ ರಸ್ತೆಯ ಚರಂಡಿ ಸಮಸ್ಯೆ ಸರಿಪಡಿಸುವಂತೆ ಮೀಟಿಂಗ್‌ನಲ್ಲೇ ಸೂಚಿಸಿದ್ದಾರೆ. ಈವರೆಗೂ ಸರಿಪಡಿಸಿಲ್ಲ. ಪುರಸಭೆಯಲ್ಲೂ ಅನೇಕ ಬಾರಿ ಈ ಬಗ್ಗೆ ಚರ್ಚೆಯಾಗಿದೆ. ಯಾವುದೇ ಪರಿಹಾರ ದೊರೆಯಲಿಲ್ಲ. ಇನ್ನೇನು ಚಂಡಮಾರುತದ ಎಲ್ಲ ಲಕ್ಷಣಗಳೂ ಮುಗಿದು ಪೂರ್ಣಾವಧಿ ಮಳೆಗಾಲ ಆಗಮಿಸಲು ಹೆಚ್ಚು ದಿನಗಳಿಲ್ಲ. ಸರ್ವಿಸ್‌ ರಸ್ತೆಯ ಚರಂಡಿ ಸಮಸ್ಯೆ ಹಾಗೆಯೇ ಮುಂದುವರಿದರೆ ಮಳೆಗಾಲದ ಅಷ್ಟೂ ದಿನ ತೊಂದರೆ ತಪ್ಪಿದ್ದಲ್ಲ. ಇದೊಂದು ಎಚ್ಚರಿಕೆಯಂತೆ ಈ ದಿನ ರಸ್ತೆ ಹೊಳೆಯಾಗುವ ಮೂಲಕ ಸೂಚನೆ ನೀಡಿದಂತಾಗಿದೆ.

ಕಡಲಬ್ಬರವೂ ಬಿರುಸು

‘ಅಸಾನಿ’ ಚಂಡಮಾರುತದಿಂದಾಗಿ ಎಲ್ಲ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಡಲ ಅಲೆಗಳ ಅಬ್ಬರವೂ ಜೋರಾಗಿತ್ತು. ಕಡಲಬ್ಬರ ಜೋರಿರುವುದರಿಂದ ಕೋಡಿ, ಬೀಜಾಡಿ, ಗಂಗೊಳ್ಳಿ, ಮರವಂತೆ, ಸೋಮೇಶ್ವರ ಸಹಿತ ಎಲ್ಲ ಕಡೆಗಳ ಬೀಚ್‌ಗಳಲ್ಲಿಯೂ ಪ್ರವಾಸಿಗರು ನೀರಿಗೆ ಇಳಿಯದಂತೆ ಎಚ್ಚರ ವಹಿಸಲಾಗಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.