D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

ರಿಕ್ಷಾ ಚಾಲಕರ ನಿತ್ಯದ ಗೋಳು ಕೇಳುವವರ್ಯಾರು? ಬೆಳಗ್ಗೆ 4ರಿಂದ ಗಂಟೆಗಟ್ಟಲೆ ಬಂಕ್‌ಗಳಲ್ಲಿ ಕಾಯುವ ಸ್ಥಿತಿ

Team Udayavani, Apr 29, 2024, 6:05 AM IST

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

ಕುಂದಾಪುರ/ಉಡುಪಿ: ಸಿಎನ್‌ಜಿ ಇಂಧನ ಆಧಾರಿತ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದರೂ, ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಬಂಕ್‌ಗಳ ಸಂಖ್ಯೆ ಹೆಚ್ಚುತ್ತಿಲ್ಲ. ಇರುವ ಬಂಕ್‌ಗಳಲ್ಲಿ ಬೇಡಿಕೆಯಷ್ಟು ಪೂರೈಕೆಯಾಗು ತ್ತಿಲ್ಲ. ಇದರಿಂದ ವಾಹನ ಸವಾರರು ಅದರಲ್ಲೂ ಮುಖ್ಯವಾಗಿ ರಿಕ್ಷಾ ಚಾಲಕರು ಗಂಟೆಗಟ್ಟಲೆ ಕಾಯಬೇಕಾಗಿದೆ.

ಸಿಎನ್‌ಜಿ ರಿಕ್ಷಾ ಹಾಗೂ ಇತರ ವಾಹನಗಳ ಸವಾರರ ಈ ನಿತ್ಯದ ಗೋಳನ್ನು ಯಾರೂ ಕೇಳದಂತಾಗಿದೆ. ಇರುವ ಬಂಕ್‌ಗಳಿಗೆ ಬೇಡಿಕೆಯಷ್ಟು ಸಿಎನ್‌ಜಿ ಇಂಧನ ಪೂರೈಕೆಯಾಗುತ್ತಿಲ್ಲ. ಬಂದಷ್ಟೇ ವೇಗವಾಗಿ ಖಾಲಿಯಾಗುತ್ತಿದೆ. ಹೆಚ್ಚುವರಿ ಬಂಕ್‌ಗಳನ್ನು ಆರಂಭಿಸಲು ಯಾರೂ ಮುಂದಾಗುತ್ತಿಲ್ಲ.

ಇರುವುದು ಒಂದೇ ಬಂಕ್‌
ಉಡುಪಿಯಲ್ಲಿ 3 ಸಹಿತ ಕುಂದಾ ಪುರ ತಾಲೂಕಿನಲ್ಲಿ ಇರುವುದು ಕೇವಲ ಒಂದೇ ಒಂದು ಸಿಎನ್‌ಜಿ ಬಂಕ್‌. ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಸಿಎನ್‌ಜಿ ಆಧಾರಿತ ವಾಹನಗಳಿವೆ. ಅದರಲ್ಲೂ ಕೋಟೇಶ್ವರದಲ್ಲಿರುವ ಸಿಎನ್‌ಜಿ ಬಂಕ್‌ನಲ್ಲಿ ನಿತ್ಯವೂ ಬೆಳಗ್ಗೆ 4 ಗಂಟೆಯಿಂದ ಬಂದು ಸಿಎನ್‌ಜಿ ಇಂಧನ ಹಾಕಿಸಲು ನೂರಾರು ರಿಕ್ಷಾಗಳು, ಇತರ ವಾಹನಗಳು ಕಾಯುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. 4ರಿಂಧ ಕೆಲವೊಮ್ಮೆ 8-9 ಗಂಟೆಯವರೆಗೂ ಕಾಯಬೇಕಾದ ಸ್ಥಿತಿಯಿದೆ. ಕಾದರೂ ಎಲ್ಲರಿಗೂ ಸಿಗುತ್ತದೆ ಅನ್ನುವ ಗ್ಯಾರಂಟಿಯೂ ಇಲ್ಲ.

ಕೆಲವೇ ಕೆಲವು ಮಾತ್ರ
ಉಡುಪಿ ಜಿಲ್ಲೆಯಲ್ಲಿ ಕೋಟೇಶ್ವರ, ಉಡುಪಿ, ಬ್ರಹ್ಮಾವರ ಸೇರಿದಂತೆ ಕೆಲವೇ ಕೆಲವು ಕಡೆಗಳಲ್ಲಿ ಸಿಎನ್‌ಜಿ ಇಂಧನದ ಬಂಕ್‌ಗಳಿವೆ. ಇನ್ನು ಕಾರ್ಕಳದಲ್ಲಿ ಈಗಷ್ಟೆ ಆರಂಭವಾಗುತ್ತಿದೆ. ಆದರೆ ಇರುವಂತಹ ಬಹುತೇಕ ಎಲ್ಲ ಸಿಎನ್‌ಜಿ ಬಂಕ್‌ಗಳಲ್ಲಿ ಬೇಡಿಕೆಯಷ್ಟು ಪೂರೈಕೆಯಾಗದೇ ಇರುವುದು ಸಮಸ್ಯೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಬಂಕ್‌ಗಳ ಸಂಖ್ಯೆ ಹೆಚ್ಚಾಗಬೇಕು ಹಾಗೂ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎನ್‌ಜಿ ಇಂಧನ ಪೂರೈಕೆ ಪ್ರಮಾಣವನ್ನು ಹೆಚ್ಚಿಸಿಬೇಕಿದೆ. ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ, ಹೆಚ್ಚುವರಿ ಬಂಕ್‌ಗಳ ಆರಂಭಕ್ಕೆ ಮುಂದಾಗಬೇಕು ಎನ್ನುವುದಾಗಿ ರಿಕ್ಷಾ ಚಾಲಕರು ಒತ್ತಾಯಿಸಿದ್ದಾರೆ.

ಬಾಡಿಗೆಗಿಂತ ಕಾಯುವುದೇ ಕೆಲಸ
ಉಡುಪಿ ಜಿಲ್ಲೆಯಲ್ಲಿ ರಿಕ್ಷಾ, ಕಾರು, ಬಸ್‌, ಟ್ರಕ್‌ ಸಹಿತ ಸಿಎನ್‌ಜಿ ಇಂಧನ ಆಧಾರಿತ ವಾಹನಗಳು ಅಂದಾಜು 5 ಸಾವಿರಕ್ಕೂ ಮಿಕ್ಕಿ ಇವೆ. ಈ ಪೈಕಿ ಬಹುಪಾಲು ರಿಕ್ಷಾಗಳೇ ಆಗಿವೆ. ಸಿಎನ್‌ಜಿ ಬಂಕ್‌ಗಳಿಗೆ ಪ್ರತಿ ದಿನ 2-3 ಲೋಡ್‌ಗಳು ಪೂರೈಕೆಯಾಗುತ್ತಿವೆಯಾದರೂ ಬಂದಷ್ಟೇ ಬೇಗ ಖಾಲಿಯಾಗುತ್ತಿದೆ. ಇದರಿಂದ ಬಂಕ್‌ಗಳಲ್ಲಿ ರಿಕ್ಷಾ ಚಾಲಕರು ಸಿಎನ್‌ಜಿ ಗ್ಯಾಸ್‌ ಲೋಡುಗಳು ಬರುವುದನ್ನೇ ಕಾಯುವಂತಾಗಿದೆ. ಬಂಕ್‌ಗಳ ಬಳಿ ರಿಕ್ಷಾಗಳ ಉದ್ದುದ್ದ ಸಾಲುಗಳು ಈಗ ಮಾಮೂಲಿಯಾಗಿವೆ. ಜೀವನಾಧಾರಕ್ಕಾಗಿ ರಿಕ್ಷಾವನ್ನೇ ನಂಬಿಕೊಂಡಿರುವ ಚಾಲಕರು ಬಹು ಸಮಯವನ್ನು ಬಂಕ್‌ಗಳಲ್ಲಿ ಕಳೆಯುವಂತಾಗಿದ್ದು, ಬಾಡಿಗೆ ಮಾಡುವುದಕ್ಕಿಂತ ಹೀಗೆ ಕಾಯುವುದರಲ್ಲಿ ಹೆಚ್ಚು ಕಾಲ ಕಳೆಯಬೇಕಾದ ಅನಿವಾರ್ಯ ಇವರದ್ದಾಗಿದೆ.

ದ.ಕ: ಬೇಡಿಕೆ ಅಧಿಕ ಲಭ್ಯತೆ ಸಮಸ್ಯೆ
ದ.ಕನ್ನಡದ ವಿವಿಧ ಕಡೆಗಳಲ್ಲಿ ಸಿಎನ್‌ಜಿ ಸ್ಟೇಷನ್‌ ಇದೆ. ಇದರಲ್ಲಿ ಕೆಲವು ಕಡೆಗಳಲ್ಲಿ ಸಿಎನ್‌ ಜಿ ಸರಬರಾಜು ಸರಿಯಾಗಿ ಇಲ್ಲದೆ ಕೆಲವೊಮ್ಮೆ ಸಮಸ್ಯೆ ಆಗುತ್ತಿದೆ. ಬೇಡಿಕೆಯೂ ಅಧಿಕವಿದೆ. ಗೈಲ್‌ ಗ್ಯಾಸ್‌ ಕಂಪೆನಿ ಸಿಎನ್‌ಜಿ ಸರಬರಾಜು ಮಾಡುತ್ತಿದೆ.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

ಪರಿಷತ್‌ ಚುನಾವಣೆ ಮೇಲೆ “ಪೆನ್‌ಡ್ರೈವ್‌’ ಪ್ರಭಾವ ಬೀರದು: ಭೋಜೇಗೌಡ

MLC elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

MLC Elections; ನೈಋತ್ಯ ಪದವೀಧರರ ಕ್ಷೇತ್ರ; ಕಾರ್ಮಿಕರ, ಪದವೀಧರರ ಧ್ವನಿಯಾಗುವೆ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ನೈಜ ಸಿನೆಮಾ: ಡಾ| ಧನಂಜಯ ಸರ್ಜಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Border-Gavaskar series: Special seat for Indians

Border-Gavaskar series: ಭಾರತೀಯರಿಗೆ ವಿಶೇಷ ಆಸನ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.