ಹೈನುಗಾರಿಕೆ, ಕೃಷಿ  ಮುಂಡ್ಕೂರು ಲಕ್ಷ್ಮೀನಾರಾಯಣ ಕಿಣಿ ಸಾಧನೆ 


Team Udayavani, Jun 7, 2017, 4:03 PM IST

2belmane5.jpg

ಬೆಳ್ಮಣ್‌: ಹೈನುಗಾರಿಕೆಯನ್ನು ತನ್ನ ಜೀವಾಳವನ್ನಾಗಿಸಿ ಜತೆಯಲ್ಲಿ  ವಿವಿಧ ತರಕಾರಿ ಬೆಳೆ, 35 ಎಕರೆ ಜಾಗದಲ್ಲಿ ರಬ್ಬರ್‌ ಕೃಷಿ ಹೀಗೆ ಹಲವು ವಿಧದ ಮಿಶ್ರ ಕೃಷಿಗಳನ್ನು ಮಾಡುವುದರ ಮೂಲಕ ಗ್ರಾಮೀಣ ಭಾಗದ ಕೃಷಿಕರಾದ ಲಕ್ಷ್ಮೀನಾರಾಯಣ ಕಿಣಿಯರು  ಜೀವನದಲ್ಲಿ ಭಾರೀ ಯಶಸ್ಸು ಕಂಡಿದ್ದಾರೆ.

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ದಡ್ಡುವಿನ ಪ್ರಗತಿಪರ  ಕೃಷಿಕ ಲಕ್ಷ್ಮೀನಾರಾಯಣ ಕಿಣಿಯವರ ಕೃಷಿ ಬದುಕಿನ ಯಶೋಗಾಥೆ ಇತರರಿಗೆ ಮಾದರಿಯಾಗಿದೆ. ಮುಂಡ್ಕೂರು ದಡ್ಡು ಪ್ರದೇಶದಲ್ಲಿ ಸುಮಾರು 35 ಎಕರೆ ಪ್ರದೇಶ  ಹಚ್ಚ ಹಸಿರಾಗಿದ್ದು ಪರಿಸರ ಪ್ರೇಮಿಗಳನ್ನು ಕೈ ಬೀಸಿ ಕರೆಯುತ್ತಿದೆ. ಅಲ್ಲದೆ ಸ್ವಾವಲಂಬಿ ಬದುಕು ಕಟ್ಟಲು ಹೊರಟಿರುವ ಮಂದಿಗೆ ಪ್ರೇರಣೆ ನೀಡ ಹೊರಟಿದೆ. ಇವೆಲ್ಲಕ್ಕೆ  ಕಾರಣಕರ್ತರು ಲಕ್ಷ್ಮೀನಾರಾಯಣ ಕಿಣಿ  ತನ್ನ 30 ಎಕರೆ ಜಾಗದಲ್ಲಿ ಕಳೆದ ಹಲವು ವರ್ಷಗಳಿಂದ ರಬ್ಬರ್‌ ಬೆಳೆಯನ್ನು ಬೆಳೆದು ಉತ್ತಮ ಲಾಭವನ್ನು ಗಳಿಸುತ್ತಿದ್ದಾರೆ. ಅಲ್ಲದೆ ಇನ್ನುಳಿದ ಸುಮಾರು 5 ಎಕರೆ ಜಾಗದಲ್ಲಿ ವಿವಿಧ ರೀತಿಯ ಮಿಶ್ರ ಕೃಷಿಯನ್ನು ಬೆಳೆಯುವುದರ ಮೂಲಕ ಯಶಸ್ಸು ಕಂಡಿದ್ದಾರೆ.

ಕಳೆದ 3 ವರ್ಷಗಳಿಂದ ಸುಮಾರು 35 ದನಗಳನ್ನು ಸಾಕುವುದರೊಂದಿಗೆ ಹೈನು ಗಾರಿಕೆಯಲ್ಲಿಯೂ ಯಶಸ್ಸು ಕಂಡಿದ್ದಾರೆ. ತನ್ನ ಮನೆಯ ಪಕ್ಕದಲ್ಲೇ ಹೈನುಗಾರಿಕೆಯನ್ನು ಮಾಡುತ್ತಿದ್ದು ವಿವಿಧ ತಳಿಯ ದನಗಳನ್ನು ಸಾಕುತ್ತಿದ್ದು ಪ್ರತೀ ನಿತ್ಯ ಬೆಳಗ್ಗೆ 100 ಲೀಟರ್‌ ಹಾಗೂ ಸಂಜೆ 50ರಿಂದ 60 ಲೀಟರ್‌ ಹಾಲು ಪಡೆದು ಮಾರಾಟ ಮಾಡಿ ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ಸಾಧಕ ಕೃಷಿಕ
ಮುಂಡ್ಕೂರಿನ ಲಕ್ಷ್ಮೀನಾರಾಯಣ ಕಿಣಿ ಇದೀಗ ಸಾಧಕ ಕೃಷಿಕರ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಆದರೆ ಇಲಾಖೆಯ ಕೆಲವೊಂದು ಯೋಜನೆ ಗಳು ರೈತರಿಗೆ ಸರಿಯಾದ ವೇಳೆಯಲ್ಲಿ ಸಿಗುವುದಿಲ್ಲವೆಂಬ ಕಾರಣದಿಂದ ಕಿಣಿ ಅವರು ಬೇಸರ ವ್ಯಕ್ತಪಡಿಸುತ್ತಾರೆ. ಹೈನುಗಾರಿಕೆಯಲ್ಲಿ ಕಿಣಿ ಅವರು 35 ದನಗಳಿಂದ ಸಾಕಷ್ಟು  ಲಾಭವನ್ನು ಪಡೆಯುತ್ತಿದ್ದಾರೆ. ಜತೆಗೆ ಮನೆಯ ಸುತ್ತ ತೊಂಡೆ, ಬೆಂಡೆ, ಬದನೆಯಂತಹ ಗಿಡಗಳನ್ನು ಬೆಳೆದಿದ್ದು ತರಕಾರಿಯಲ್ಲೂ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ಮೂಲಕ  ಕಿಣಿ ಅವರು ಇತರ ರೈತರಿಗೆ ಮಾದರಿಯಾಗಿದ್ದಾರೆ. ತನ್ನ  ಕೃಷಿ ಚಟುವಟಿಕೆಗೆ ಬೇಕಾದ ನೀರಿ ಗಾಗಿ ಸುಮಾರು ರೂ. 5 ಲಕ್ಷ ವ್ಯಯಿಸಿ ಅಂತರ್ಜಲ ವೃದ್ಧಿಗೂ ಕೈ ಹಾಕಿದ್ದಾರೆ.

ಹಲವಾರು ಕಾರಣಗಳಿಂದ ಕೃಷಿ  ಕ್ಷೇತ್ರದಿಂದ ಹಿಂದೆ ಸರಿಯುತ್ತಿರುವ ಅದೆಷ್ಟೋ ಕೃಷಿಕರ ಮಧ್ಯೆ ಗ್ರಾಮೀಣ ಭಾಗದಲ್ಲಿದ್ದೂ ಕೃಷಿಯ ಜತೆ ಬದುಕು ಕಟ್ಟುತ್ತಿದ್ದು ಹೆ„ನುಗಾರಿಕೆಯ ಜೊತೆಯಲ್ಲಿ ಇತರ ಮಿಶ್ರ ಕೃಷಿಯಲ್ಲೂ ಯಶಸ್ಸು ಕಂಡಿದ್ದು , ಇವರ ಸಾಧನೆ ಎಲ್ಲಾ ಕೃಷಿಕರಿಗೂ ಮಾದರಿಯಾಗಿದೆ.

ಹೈನುಗಾರಿಕೆ ಹಾಗೂ ಮಿಶ್ರ ಕೃಷಿಯನ್ನು ಬೆಳೆಯುವುದರಿಂದ ಹೆಚ್ಚಿನ ಲಾಭವನ್ನು ಪಡೆಯಲು ಸಾಧ್ಯ, ವಿವಿಧ‌ ತರಕಾರಿ ಹಾಗೂ 30 ಎಕರೆ ಜಾಗದಲ್ಲಿ ರಬ್ಬರ್‌ ಕೃಷಿಯನ್ನು ಮಾಡಿದ ಪರಿಣಾಮ ಲಾಭವನ್ನು ಪಡೆಯುತ್ತಿದ್ದೇನೆ, ಸರಕಾರ, ಇಲಾಖೆ ಗುರುತಿಸಿಲ್ಲ ಬೇಸರವಿದೆ, ಖಾಲಿ ಜಮೀನು  ಬಿಡಬೇಡಿ ಎಲ್ಲರೂ ಕೃಷಿ ಮಾಡಿ.
– ಮುಂಡ್ಕೂರು ಲಕ್ಷ್ಮೀನಾರಾಯಣ ಕಿಣಿ, ಪ್ರಗತಿಪರ ಕೃಷಿಕ

– ಶರತ್‌ ಶೆಟ್ಟಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.