ಹೈನುಗಾರಿಕೆ ದೇಶದ ಆರ್ಥಿಕತೆಯ ಬೆನ್ನೆಲುಬು: ಜಗದೀಶ್‌

ಉಡುಪಿಯಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆ ಉದ್ಘಾಟನೆ

Team Udayavani, Nov 27, 2019, 4:55 AM IST

as-31

ಉಡುಪಿ: ಭಾರತದಲ್ಲಿ 1970ನೇ ಇಸವಿಯ ಮೊದಲು ಹಾಲನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಪ್ರಸ್ತುತ ಹಾಲು, ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದೇವೆ. ಪ್ರಸ್ತುತ ಭಾರತದ ಆರ್ಥಿಕತೆಗೆ ಹೈನುಗಾರಿಕೆ ಬೆನ್ನೆಲುಬಾಗಿ ನಿಂತಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಅಭಿಪ್ರಾಯಪಟ್ಟರು.

ಕ್ಷೀರಕ್ರಾಂತಿಯ ಪಿತಾಮಹ ಖ್ಯಾತಿಯ ಡಾ| ವರ್ಗೀಸ್‌ ಕುರಿಯನ್‌ ಜನ್ಮ ದಿನಾಚರಣೆ ಪ್ರಯುಕ್ತ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ಮಂಗಳವಾರ ನಡೆದ ಶುದ್ಧ ಹಾಲು ಉತ್ಪಾದನೆಯ ಮಹತ್ವ, ಮೇಘ ತಂತ್ರಜ್ಞಾನ ಸಾಫ್ಟ್ ವೇರ್‌ ಬಿಡುಗಡೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಒಕ್ಕೂಟ ಪ್ರಥಮ
ಹಾಲು ಉತ್ಪಾದಕರಿಗೆ ನ್ಯಾಯವಾಗಿ ಸಿಗುವ ಲಾಭಾಂಶ ವರ್ಗಾವಣೆಯಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಹಾಲಿನ ಕೊರತೆಯಿದ್ದ ದೇಶದಲ್ಲಿ ಹಾಲಿನ ಪ್ರವಾಹ ಹರಿಸುವ ಸಾಧನೆಯ ಹಾದಿ ತೋರಿದ ಡಾ| ವರ್ಗೀಸ್‌ ಕುರಿಯನ್‌ ಅವರ ಸ್ಮರಣೆ ಅತ್ಯಗತ್ಯ ಎಂದು ಹೇಳಿದರು.

ಮಿಲ್ಕೊ ಸಾಫ್ಟ್ವೇರನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ, ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಬಿಡುಗಡೆಗೊಳಿಸಿ, ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನ ಬಳಕೆ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಅಭಿವೃದ್ಧಿ’ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು. ಶುದ್ಧ ಹಾಲು ಉತ್ಪಾದನೆಯ ಮಹತ್ವದ ಬಗ್ಗೆ ಬೆಂಗಳೂರು ಪ್ರಾದೇಶಿಕ ಡೈರಿ ಸೈನ್ಸ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ರಾಮಚಂದ್ರ ಬಿ. ಅವರು ಉಪನ್ಯಾಸ ನೀಡಿದರು.

ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ| ಜಿ.ವಿ. ಹೆಗಡೆ ಪ್ರಸ್ತಾವನೆಗೈದು, ಒಕ್ಕೂಟದ 725 ಸಹಕಾರ ಸಂಘ ಗಳಲ್ಲಿ 648 ಸ್ವಯಂಚಾಲಿತ ಹಾಲು ಸಂಗ್ರ ಹಣಾ ಘಟಕಗಳಿವೆ. ಒಕ್ಕೂಟವು ತನ್ನದೇ ಆದ ಮೇಘ ತಂತ್ರಜ್ಞಾನ ಆಧಾರಿತ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದ್ದು, ಮುಂದಿನ ದಿನಗಳಲ್ಲಿ ಮಾಹಿತಿಗಳನ್ನು ಹೈನುಗಾರರ ಮೊಬೈಲ್‌ಗೆ ತಲುಪಿಸ ಲಾಗುವುದು ಎಂದರು.

ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಎ. ಜಗದೀಶ ಕಾರಂತ, ಹದ್ದೂರು ರಾಜೀವ ಶೆಟ್ಟಿ, ಸುಧಾಕರ ಶೆಟ್ಟಿ, ಸಾಣೂರು ನರಸಿಂಹ ಕಾಮತ್‌, ಸುಭದ್ರ ರಾವ್‌, ಸವಿತಾ ಎನ್‌. ಶೆಟ್ಟಿ, ಸ್ಮಿತಾ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

ಸಮ್ಮಾನ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಂಕರನಾರಾಯಣ ಹಾ.ಉ.ಸ.ಸಂಘದ ಕಾರ್ಯದರ್ಶಿ ಎಸ್‌. ದಯಾನಂದ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದ ಹರಿವರ್ಮ ಅವರನ್ನು ಅಭಿನಂದಿಸಲಾಯಿತು. ನಂದಿನಿ ಡೀಲರ್‌ಗಳ ಪ್ರತಿಭಾವಂತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಉಭಯ ಜಿಲ್ಲೆಗಳ ನಂದಿನಿ ಡೀಲರ್‌ಗಳನ್ನು ಗುರುತಿಸಿ ಗೌರವಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಸಹಾಯಕ ವ್ಯವಸ್ಥಾಪಕರಾದ ಸುಧಾಕರ್‌, ಜಾನೆಟ್‌ ರೋಸಾರಿಯೋ ನಿರೂಪಿಸಿದರು. ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಅವರು ವಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್‌ ಹೆಗ್ಡೆ ಮಾತನಾಡಿ, ರೈತ ಮಹಿಳೆಯರ ಸ್ವಾಲಂಬಿ ಬದುಕಿಗೆ ಹೈನುಗಾರಿಕೆ ಪೂರಕವಾಗಿದೆ. ರಾಜ್ಯದ 14 ಒಕ್ಕೂಟಗಳಲ್ಲಿ ದ.ಕ.ಹಾ.ಉ. ಒಕ್ಕೂಟ ಹಾಲು ಉತ್ಪಾದನೆ ಮತ್ತು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. 1.20 ಲಕ್ಷದ ಸದಸ್ಯರಿರುವ 725 ಸಂಘಗಳಿಗೆ ಅನುಕೂಲವಾಗುವಂತೆ ಸಾಫ್ಟ್ ವೇರ್‌ ಅಭಿವೃದ್ಧಿಪಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.