ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ


Team Udayavani, Oct 17, 2021, 6:10 AM IST

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಉಡುಪಿ/ ಮಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಸೊರಗಿದ್ದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತೆ ಚೇತರಿಕೆ ಕಾಣುತ್ತಿದೆ. ದಸರಾ ಹಿನ್ನೆಲೆಯಲ್ಲಿ ಸಾಲು ರಜೆಗಳು ಇರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಿತ ರಾಜ್ಯದ ಪ್ರವಾಸಿ ತಾಣಗಳಲ್ಲಿ ಜನರು ದಂಡು ಕಾಣಿಸುತ್ತಿದೆ.

ಅ. 14ರ ದಸರಾ ದಿನದಿಂದ ರಜೆಗಳ ಸರಣಿ ಆರಂಭವಾಗಿದೆ. ಅ. 14 ಮತ್ತು 15 ದಸರಾ- ವಿಜಯದಶಮಿ ರಜೆ ಇತ್ತು. ಶನಿವಾರ ಮಾತ್ರ ಕಚೇರಿ, ರವಿವಾರ ವಾರದ ರಜೆ. ಸೋಮವಾರ ಒಂದು ದಿನ ಕಚೇರಿ. ಮತ್ತೆ ಮಂಗಳವಾರ, ಬುಧವಾರ ವಾಲ್ಮೀಕಿ ಜಯಂತಿ ಮತ್ತು ಈದ್‌ಮಿಲಾದ್‌ ರಜೆ ಇದೆ. ಹೀಗಾಗಿ ಬಹುತೇಕ ಜನರು ಶನಿವಾರ ಮತ್ತು ಸೋಮವಾರ ರಜೆ ಹಾಕಿ ದೀರ್ಘ‌ ಪ್ರವಾಸ ತೆರಳಿದ್ದಾರೆ. ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ.

ಪುಣ್ಯಕ್ಷೇತ್ರಗಳಲ್ಲಿ ಜನದಟ್ಟಣೆ
ಕರಾವಳಿಯ ಪುಣ್ಯಕ್ಷೇತ್ರಗಳಾದ ಕೊಲ್ಲೂರು, ಉಡುಪಿ, ಕಟೀಲು, ಧರ್ಮಸ್ಥಳ, ಸುಬ್ರಹ್ಮಣ್ಯಗಳಲ್ಲಿ ಕೆಲವು ದಿನಗಳಿಂದ ಭಕ್ತರ ಸಂಖ್ಯೆ ಹೆಚ್ಚಿದೆ. ಸರಣಿ ರಜೆ ಇರುವುದರಿಂದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ಪ್ರವಾಸಿಗರು ಕರಾವಳಿಯತ್ತ ಹರಿದು ಬರುತ್ತಿದ್ದಾರೆ. ಇನ್ನುಳಿದ ಪ್ರವಾಸಿ ತಾಣಗಳಾದ ಮಲ್ಪೆ, ಮರವಂತೆ, ಪಣಂಬೂರು ಮೊದಲಾದ ಕಡಲ ಕಿನಾರೆಗಳಲ್ಲಿ ಜನರು ತುಂಬಿ ತುಳು ಕಾಡುತ್ತಿದ್ದಾರೆ.

ಮಲ್ಪೆಯಲ್ಲಿ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ವಾಹನಗಳು ಬೀಚ್‌ ಕಡೆಗೆ ಆಗಮಿಸಿದ್ದು, ಜನ ಜಂಗುಳಿಯಾಗಿದೆ. ಕರಾವಳಿ ಬೈಪಾಸ್‌ನಿಂದಲೇ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮೈಸೂರಿನಲ್ಲಿ ದಸರೆ ಮುಗಿದ ಮೇಲೂ ಪ್ರವಾಸಿಗರ ದಂಡು ಇದೆ. ಶನಿವಾರ ಒಂದೇ ದಿನ ಮೈಸೂರಿಗೆ 50 ಸಾವಿರ ಮಂದಿ ಭೇಟಿ ನೀಡಿದ್ದಾರೆ.

ಜೋಗಕ್ಕೆ ಮುಗಿಬಿದ್ದ ಜನ
ಜೋಗ ಜಲಪಾತ ಮತ್ತು ಸಿಗಂದೂರು ಚೌಡೇಶ್ವರಿ ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರು ಕಂಡುಬಂದರು. ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಜೋಗದಲ್ಲಿ ಎಂದಿಗಿಂತ ಹೆಚ್ಚು ಜನ ಕಂಡು ಬಂದರು. ಮುಳ್ಳಯ್ಯನಗಿರಿ ಸೇರಿದಂತೆ ಬಹುತೇಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು ನೆರೆದಿತ್ತು.

ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ
ಕೊಲ್ಲೂರು, ಶ್ರೀಕೃಷ್ಣ ಮಠಕ್ಕೆ ಭಕ್ತರ ದಂಡು
ಮಂಗಳೂರು/ಉಡುಪಿ/ ಕೊಲ್ಲೂರು: ಸರಣಿ ರಜೆಗಳು ಮತ್ತು ವಾರಾಂತ್ಯದ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳು ಮತ್ತು ಪ್ರವಾಸಿ ತಾಣಗಳಲ್ಲಿ ಶನಿವಾರ ಜನದಟ್ಟಣೆ ಕಾಣಿಸಿಕೊಂಡಿತು.

ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ 10,000ಕ್ಕೂ ಮಿಕ್ಕಿದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ನವರಾತ್ರಿ ಕೊನೆಯ ವೇಳೆ, ವಾರಾಂತ್ಯದ ಕಾರಣ ಮತ್ತು ಹಿಂದಿನ ಎರಡು ದಿನ ಮತ್ತು ರವಿವಾರದ ರಜೆ ಹಿನ್ನೆಲೆಯಲ್ಲಿ ಶನಿವಾರ ಒಂದು ದಿನ ರಜೆ ಹಾಕಿ ಪ್ರವಾಸಕ್ಕೆ ಹೊರಟ ಕಾರಣ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಉಡುಪಿ ನಗರದಲ್ಲಿ ರವಿವಾರ ಟ್ರಾಫಿಕ್‌ ಜಾಮ್‌ ಕಂಡುಬಂತು.

ಕೊಲ್ಲೂರು ದೇವಸ್ಥಾನ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನವರಾತ್ರಿ ಉತ್ಸವ ಮುಗಿದರೂ ಭಕ್ತರ  ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಶನಿವಾರ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವಿಯ ದರ್ಶನ ಪಡೆದರು.  ನವರಾತ್ರಿ ವೇಳೆಯಲ್ಲೂ ಇಷ್ಟು ಸಂಖ್ಯೆಯ ಭಕ್ತರ ಆಗಮನ ಆಗಿರಲಿಲ್ಲ.ದೇಗುಲದ ಆಡಳಿತ ಮಂಡಳಿ ಹಾಗೂ ಸಿಬಂದಿ ಭಕ್ತರಿಗೆ ದೇವಿಯ ಅನಾಯಾಸ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದರು.

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಂಡುಬಂದರು. ರವಿವಾರ ಮತ್ತು ಸೋಮವಾರ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಮಲ್ಪೆ ಬೀಚ್‌ಗೆ ಪ್ರವಾಸಿಗರ ಲಗ್ಗೆ; ವಾಹನ ದಟ್ಟಣೆ
ಶನಿವಾರ ಮಲ್ಪೆ ಬೀಚ್‌, ಸೈಂಟ್‌ಮೇರಿ ದ್ವೀಪ, ಸೀವಾಕ್‌ಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸಿರುವುದು ಕಂಡು ಬಂದಿದೆ.

ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ವಾಹನಗಳು ಬೀಚ್‌ ಕಡೆಗೆ ಅಗಮಿಸುತ್ತಿದ್ದು, ಸಂಜೆಯಾಗುತ್ತಲೇ ಸ್ಥಳೀಯರೂ ಸೇರಿ ಜನ ಜಂಗಳಿಯಾಗಿದೆ. ಕರಾವಳಿ ಬೈಪಾಸ್‌ನಿಂದ ಮಲ್ಪೆ ರಸ್ತೆಯಲ್ಲಿ ಬೆಳಗ್ಗಿನಿಂದ ರಾತ್ರಿಯವರೆಗೂ ವಾಹನಗಳ ಸಾಲು ಕಂಡು ಬಂದಿದ್ದು, ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದಾಗಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು. ಬೀಚ್‌ನ ಪಾರ್ಕಿಂಗ್‌ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಎದುರಾಗಿ ಬಹುತೇಕ ಮಂದಿ ವಾಪಸಾಗಿದ್ದರು. ಪೊಲೀಸರು ಸುಗಮ ಸಂಚಾರ ವ್ಯವಸ್ಥೆಗೆ ಹರಸಾಹಸ ಪಡುತ್ತಿದ್ದರು. ಸುರತ್ಕಲ್‌, ಪಣಂಬೂರು ಬೀಚ್‌ಗಳಲ್ಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.