ದ.ಕ., ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳವರೆಗೆ ರೈತರಿಂದ ಹಾಲು ಖರೀದಿ ಸ್ಥಗಿತ

ಮಾರ್ಚ್ 29, 30 ಹಾಲು ಖರೀದಿ ಇಲ್ಲ ; ಮಾರ್ಚ್ 31ರ ಬೆಳಿಗ್ಗೆಯಿಂದ ಹಾಲು ಖರೀದಿ ಪುನರಾರಂಭ

Team Udayavani, Mar 28, 2020, 5:20 PM IST

ದ.ಕ., ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳವರೆಗೆ ರೈತರಿಂದ ಹಾಲು ಖರೀದಿ ಸ್ಥಗಿತ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ಮಾರ್ಚ್ 22ರಿಂದ ಭಾರತ ಲಾಕ್ ಡೌನ್ ಸ್ಥಿತಿ ಘೋಷಣೆಯಾದ ಬಳಿಕದಿಂದ ಅವಿಭಜಿತ ಜಿಲ್ಲೆಯಲ್ಲೂ ಕರ್ಫ್ಯೂ ಸ್ಥಿತಿ ಇರುವ ಹಿನ್ನಲೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಪ್ರತೀದಿನ ಒಂದು ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ. ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಾರ್ಚ್ 28ರಿಂದ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಬಂದ್ ಪರಿಸ್ಥಿತಿ ಘೋಷಿಸಿದೆ.

ಈ ಹಿನ್ನಲೆಯಲ್ಲಿ ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಂದಿನಿ ಹಾಲಿನ ಬೂತ್ ಗಳು ಗ್ರಾಹಕರಿಗೆ ಸೇವೆ ನೀಡಲು ಸಾಧ್ಯವಾಗದೇ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತದೆ.

ಈ ಕಾರಣದಿಂದ ಪ್ರಸ್ತುತ ಪರಿಸ್ಥಿತಿಯನ್ನು ಸರಿದೂಗಿಸುವ ಅನಿವಾರ್ಯತೆಯಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಾರ್ಚ್ 29 ಮತ್ತು ಮಾರ್ಚ್ 30 ರಂದು ಬೆಳಿಗ್ಗೆ ಹಾಗೂ ಸಾಯಂಕಾಲದ ಎರಡೂ ಸರದಿಗಳಲ್ಲಿ ಉಭಯ ಜಿಲ್ಲೆಗಳ ಹಾಲು ಉತ್ಪಾದಕರಿಂದ ಹಾಲು ಖರೀದಿಸುವುದನ್ನು ಸ‍್ಥಗಿತಗೊಳಿಸಿದೆ. ಆದರೆ ಈ ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.

ಮಾರ್ಚ್ 31ರ ಬೆಳಗ್ಗಿನ ಸರದಿಯಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನರಾರಂಭಗೊಳ್ಳಲಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಹೈನು ಬಾಂಧವರು ಒಕ್ಕೂಟದ ಈ ನಿರ್ಧಾರವನ್ನು ಬೆಂಬಲಿಸುವ ಮೂಲಕ ಸಹಕರಿಸಬೇಕು ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ರವಿರಾಜ ಹೆಗ್ಡೆ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಆಗಿದ್ದರೂ ಮಾರ್ಚ್ 29ರಿಂದ ನಿಗದಿತ ವೇಳೆಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿರುತ್ತದೆ.

ಹೆಚ್ಚುವರಿ ಹಾಲನ್ನು ಪರಿವರ್ತನಾ ಘಟಕಗಳಿಗೆ ಕಳುಹಿಸಲಾಗಿದೆ ಆದರೆ ಅಲ್ಲೂ ಹಾಲಿನ ಶೇಖರಣಾ ಪ್ರಮಾಣ ಅಧಿಕವಾಗಿರುವುದರಿಂದ ತಕ್ಷಣಕ್ಕೆ ಪರಿವರ್ತನೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಎಲ್ಲಾ ಕಾರಣಗಳಿಂದ ಉಭಯ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಹಾಲು ಉತ್ಪಾದಕರಿಂದ ಹಾಲನ್ನು ಖರೀದಿಸುವುದನ್ನು ನಿಲ್ಲಸಲೇಬೇಕಾಗಿರುವ ಅನಿವಾರ್ಯ ಪರಿಸ್ಥಿತಿ ಒದಗಿಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.