ದಲಿತನ ಮುಖಂಡನ ಬರ್ಬರ ಹತ್ಯೆ: ಬಿಜೆಪಿ ಪ್ರತಿಭಟನೆ
Team Udayavani, Mar 17, 2017, 3:48 PM IST
ಉಡುಪಿ: ಬೊಮ್ಮಸಂದ್ರ ನಗರಸಭೆಯ ಸದಸ್ಯ ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಮಾ. 16ರಂದು ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿತು.
ಹಿಂದುಳಿದ ವರ್ಗದವರ ಮೇಲೆ ಅಪಾರ ಅಭಿಮಾನ ಉಳ್ಳ ರಾಜ್ಯದ ಮುಖ್ಯಮಂತ್ರಿಗಳು ದಲಿತ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರ ಬರ್ಬರ ಹತ್ಯೆಯ ಬಗ್ಗೆ ಮೌನವಾಗಿರುವುದು ಸರ್ವಥಾ ಸರಿಯಲ್ಲವೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ದಲಿತ ಮುಖಂಡರೋರ್ವರು ಬಿಜೆಪಿಗೆ ಬೆಂಬಲವಾಗಿದ್ದೇ ಅವರಿಗೆ ಮುಳುವಾಯಿತೇ ಎಂದು ಪ್ರಶ್ನಿಸಿದ ಅವರು ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖರಾದ ಲಾಲಾಜಿ ಮೆಂಡನ್, ರಘುಪತಿ ಭಟ್, ಯಶಪಾಲ ಸುವರ್ಣ, ಉದಯಕುಮಾರ ಶೆಟ್ಟಿ, ನವೀನ್ ಶೆಟ್ಟಿ ಕುತ್ಯಾರು, ಸುಪ್ರಸಾದ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಮಿಥುನ್ ಹೆಗ್ಡೆ, ಪ್ರಭಾಕರ ಪೂಜಾರಿ, ಶೀಲಾ ಕೆ ಶೆಟ್ಟಿ, ಶ್ಯಾಮಲಾ ಕುಂದರ್, ನಯನಾ ಗಣೇಶ್, ಸಂಧ್ಯಾ ರಮೇಶ್, ಪೂರ್ಣಿಮಾ ಸುರೇಶ್, ಪ್ರಕಾಶ್ ಶೆಟ್ಟಿ, ಶಿವಪ್ರಸಾದ್, ಶಿವಕುಮಾರ್, ರಾಜು ಖಾರ್ವಿ, ಹೇಮಂತ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್