ಕಾಮಗಾರಿ ಹಂತದ ಕಬ್ಬಿಣದ ಪೈಪ್ ಒಡೆದು ಚಲಿಸುತ್ತಿದ್ದ ಕಾರಿಗೆ ಹಾನಿ
Team Udayavani, Jul 11, 2019, 5:20 AM IST
ಕುಂದಾಪುರ: ಇಲ್ಲಿನ ಪುರಸಭೆಯ ನೀರು ಪೂರೈಕೆ ಸಲುವಾಗಿ ಅಳವಡಿಸಲಾಗುತ್ತಿದ್ದ ಕಾಮಗಾರಿ ಹಂತದ ಕಬ್ಬಿಣದ ಪೈಪ್ (ಕಬ್ಬಿಣ ಮಿಶ್ರಿತ) ಒತ್ತಡದಿಂದ ಒಡೆದು, ಚಲಿಸುತ್ತಿದ್ದ ಕಾರಿಗೆ ಬಡಿದ ಪರಿಣಾಮ ಕಾರು ಜಖಂಗೊಂಡ ಘಟನೆ ಬುಧವಾರ ಚಿಕ್ಕನ್ಸಾಲ್ ರಸ್ತೆಯ ಸಂಗಮ್ ಜಂಕ್ಷನ್ ಬಳಿ ಸಂಭವಿಸಿದೆ.
ಕುಂದಾಪುರದಿಂದ ಉಪ್ಪಿನಕುದ್ರುವಿಗೆ ಚಿಕ್ಕನ್ಸಾಲ್ ಮಾರ್ಗವಾಗಿ ತೆರಳುತ್ತಿದ್ದ ಕಾರಿಗೆ ರಸ್ತೆ ಬದಿ ಅಳವಡಿಸಲಾಗಿದ್ದ ನೀರಿನ ಕಬ್ಬಿಣದ ಪೈಪ್ ಏಕಾಏಕಿ ನೀರಿನ ಒತ್ತಡ ಹೆಚ್ಚಾಗಿ ಒಮ್ಮಿಂದೊಮ್ಮೆಲೆ ಒಡೆದು, ಬಡಿದಿದೆ. ಪರಿಣಾಮ ಭಾರೀ ಶಬ್ದ ಕೇಳಿ ಬಂದಿದ್ದು, ಕಾರು ನಜ್ಜು ಗುಜ್ಜಾಗಿದ್ದಲ್ಲದೆ, ಗ್ಲಾಸ್ ಒಡೆದು ಹೋಗಿದೆ.
ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಇದಲ್ಲದೆ ಇದರ ಹಿಂದೆ ಬೈಕ್ವೊಂದು ಬರುತ್ತಿದ್ದು, ಸವಾರ ಬ್ರೇಕ್ ಹಾಕಿ ನಿಲ್ಲಿಸಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಗುತ್ತಿಗೆದಾರರ ವಿರುದ್ಧ ದೂರು
ಇನ್ನು ಘಟನಾ ಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಭೇಟಿ ನೀಡಿದ್ದು,’ ಉದಯವಾಣಿ’ ಜತೆ ಮಾತನಾಡಿದ ಅವರು, ಇದು ನಿತ್ಯದ ನೀರು ಪೂರೈಕೆ ಮಾಡುವ ಪೈಪ್ ಅಲ್ಲ. ಈಗ ಕಾಮಗಾರಿ ಹಂತದಲ್ಲಿದೆ. ಇನ್ನೂ ಪೂರ್ಣಗೊಂಡಿಲ್ಲ. ಆದರೂ ಸರಿಯಾದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಕಾಮಗಾರಿ ನಡೆಸಿ, ಕಾರಿಗೆ ಹಾನಿಯಾಗಿರುವುದರಿಂದ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರರ ವಿರುದ್ಧವೇ ದೂರು ದಾಖಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಘಟನಾ ಸ್ಥಳಕ್ಕೆ ಸಂಚಾರಿ ಎಸ್ಐ ಪುಷ್ಪಾ, ಎಎಸ್ಐ ಸುಧಾ ಪ್ರಭು, ಪೊಲೀಸ್ ಸಿಬಂದಿ ಭೇಟಿ ನೀಡಿ, ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ