ಹದಗೆಟ್ಟ ಗಾವಳಿ-ಶಿರಿಯಾರ ಜಿಲ್ಲಾ ಮುಖ್ಯ ರಸ್ತೆ

ಉಡುಪಿಯಿಂದ ತೀರ್ಥಹಳ್ಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ; 3 ಕಿ.ಮೀ. ವ್ಯಾಪ್ತಿಯಲ್ಲಿ ಹಲವೆಡೆ ಹೊಂಡ - ಗುಂಡಿ

Team Udayavani, Oct 18, 2019, 5:19 AM IST

1710KDPP1

ವಿಶೇಷ ವರದಿ-ಬಿದ್ಕಲ್‌ಕಟ್ಟೆ: ಉಡುಪಿಯಿಂದ ಬಾರಕೂರು ಮೂಲಕವಾಗಿ ತೀರ್ಥಹಳ್ಳಿಗೆ ಸಂಪರ್ಕ ಕಲ್ಪಿಸುವ ಗಾವಳಿಯಿಂದ ಶಿರಿಯಾರದವರೆಗಿನ ಜಿಲ್ಲಾ ಮುಖ್ಯ ರಸ್ತೆಯ ಹಲವೆಡೆಗಳಲ್ಲಿ ಹೊಂಡ – ಗುಂಡಿ ಗಳಿಂದಾಗಿ ಸಂಚಾರ ದುಸ್ತರವೆನಿಸಿದೆ. ಗಾವಳಿ ಬಳಿ ಕೆಲವು ತಿಂಗಳ ಹಿಂದೆ ಮಾಡಿದ ಡಾಮರೀಕರಣವೂ ಅಲ್ಲಲ್ಲಿ ಎದ್ದು ಹೋಗಿದ್ದು, ಕಳಪೆ ಕಾಮಗಾರಿ ಆರೋಪ ಕೇಳಿ ಬಂದಿದೆ.

ಬಿದ್ಕಲ್‌ಕಟ್ಟೆ – ಶಿರಿಯಾರ – ಬಾರಕೂರು – ಬ್ರಹ್ಮಾವರ ಮಾರ್ಗವಾಗಿ ಉಡುಪಿಯಿಂದ ತೀರ್ಥಹಳ್ಳಿಗೆ ಸಂಪರ್ಕ ಕಲ್ಪಿಸುವ ಗಾವಳಿಯಿಂದ ಶಿರಿಯಾರದವರೆಗಿನ ಹಲವೆಡೆ ರಸ್ತೆ ಹದಗೆಟ್ಟು ಹೋಗಿದೆ.

ಕಳಪೆ ಕಾಮಗಾರಿ ಆರೋಪ
ಇನ್ನು ಈ ರಸ್ತೆಯ ಗಾವಳಿಯಲ್ಲಿರುವ ತಿರುವು ಅಪಾಯಕಾರಿ ಎನ್ನುವ ನಿಟ್ಟಿನಲ್ಲಿ ತಿರುವು ವಿಸ್ತರಣೆ ಹಾಗೂ ಗಾವಳಿಯಿಂದ ಹಳ್ಳಾಡಿಯವರೆಗಿನ ರಸ್ತೆ ಮರು ಡಾಮರೀಕರಣಕ್ಕೆ 1 ಕೋ.ರೂ. ಪ್ಯಾಕೇಜ್‌ನಡಿ ಕಾಮಗಾರಿ ಕೆಲವು ತಿಂಗಳ ಹಿಂದಷ್ಟೇ ನಡೆದಿತ್ತು. ಆದರೆ ಅದು ಈಗಲೇ ಅಲ್ಲಲ್ಲಿ ಡಾಮರು ಎದ್ದು ಹೋಗಿದೆ. ಕೆಲವೆಡೆಗಳಲ್ಲಿ ರಸ್ತೆ ಹೊಂಡ ಬಿದ್ದಿದೆ. ಇದು ಕೆಲವೇ ತಿಂಗಳ ಹಿಂದೆ ನಡೆದ ಡಾಮರೀಕರಣ ಹೀಗೆ ಎದ್ದು ಹೋಗಲು ಕಳಪೆ ಕಾಮಗಾರಿಯೇ ಕಾರಣ ಎಂದು ವಾಹನ ಸವಾರರು ಆರೋಪಿಸಿದ್ದಾರೆ.

ಪ್ರಮುಖ ಸಂಪರ್ಕ ರಸ್ತೆ
ಇದೇ ಮಾರ್ಗವಾಗಿ ಮಂಗಳೂರು – ಉಡುಪಿ – ತೀರ್ಥಹಳ್ಳಿ ಬಸ್‌ಗಳು, ಉಡುಪಿಯಿಂದ – ಹಾಲಾಡಿ – ಸಿದ್ದಾಪುರ ಕಡೆಗೆ ನಿತ್ಯ ಹತ್ತಾರು ಬಸ್‌ಗಳು ಸಂಚರಿಸುತ್ತವೆ. ಇದಲ್ಲದೆ ಉಡುಪಿಯಿಂದ ನೂರಾರು ವಾಹನಗಳು ಇದೇ ಮಾರ್ಗವಾಗಿ ತೆರಳುತ್ತವೆ. ಅದರಲ್ಲೂ ಪ್ರಮುಖವಾಗಿ ಬಿದ್ಕಲ್‌ಕಟ್ಟೆ, ಗಾವಳಿ, ಹಳ್ಳಾಡಿಯಿಂದ ಬಾಕೂìರು, ಬ್ರಹ್ಮಾವರಕ್ಕೆ ತೆರಳುವವರು ಸಂಕಷ್ಟ ಅನುಭವಿಸುತ್ತಾರೆ.

ಇದು ಕರಾವಳಿ ಜಿಲ್ಲೆಗಳನ್ನು ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದರೂ, ಇನ್ನೂ ಕೂಡ ಜಿಲ್ಲಾ ಮುಖ್ಯ ರಸ್ತೆಯಾಗಿಯೇ ಇದೆ. ಮಂಗಳೂರು, ಉಡುಪಿಯಿಂದ ತೀರ್ಥಹಳ್ಳಿಗೆ ಹಾಗೂ ತೀರ್ಥಹಳ್ಳಿಯಿಂದ ಉಡುಪಿ, ಮಂಗಳೂರು, ಸಾಗರಕ್ಕೆ ನಿತ್ಯ ಬಸ್‌ಗಳು ಸಂಚರಿಸುತ್ತವೆ. ಆದ್ದರಿಂದ ಈ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ, ಅಭಿವೃದ್ಧಿಪಡಿಸಬೇಕು ಎಂದು ಈ ಭಾಗದ ಜನರು ಆಗ್ರಹಿಸಿದ್ದಾರೆ.

ಶೀಘ್ರ ಕಾಮಗಾರಿ ಆರಂಭ
ಗಾವಳಿಯಿಂದ ಹಳ್ಳಾಡಿಯವರೆಗಿನ ರಸ್ತೆ ಅಗಲೀಕರಣ, ತಿರುವು ವಿಸ್ತರಣೆ ಕಾಮಗಾರಿಗೆ 1 ಕೋ.ರೂ. ಪ್ಯಾಕೇಜ್‌ ಮಂಜೂರಾಗಿ ಕಾಮಗಾರಿಯೂ ಆರಂಭಗೊಂಡಿದೆ. ಆದರೆ ಮಳೆ ಬಂದಿದ್ದರಿಂದ ಆಗ ನಿಲ್ಲಿಸಲಾಗಿದ್ದು, ಮಳೆ ಕಡಿಮೆಯಾದ ಅನಂತರ ಶೀಘ್ರ ಕಾಮಗಾರಿ ನಡೆಯಲಿದೆ. ನವೆಂಬರ್‌ನಲ್ಲಿ ಡಾಮರೀಕರಣ ಹಾಗೂ ಅಗಲೀಕರಣ ಕಾಮಗಾರಿ ಆರಂಭಿಸಲಾಗುವುದು.
-ದುರ್ಗಾದಾಸ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌,
ಲೋಕೋಪಯೋಗಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.