ಕಾಪು ತಾಲೂಕಿನಲ್ಲಿ ಗಾಳಿ-ಮಳೆಗೆ ಭಾರೀ ನಷ್ಟ
ಮೂರು ದಿನ ಗಾಳಿ ಮಳೆಗೆ 28.67 ಲಕ್ಷ ರೂ. ಮೊತ್ತದ ಸೊತ್ತು ಹಾನಿ
Team Udayavani, Aug 8, 2019, 7:02 PM IST
ಕಾಪು: ಸೋಮವಾರದಿಂದ ಸುರಿಯುತ್ತಿರುವ ಭಾರೀ ಗಾಳಿ – ಮಳೆಯ ಕಾರಣದಿಂದಾಗಿ ಕಾಪು ತಾಲೂಕಿನ ವಿವಿಧೆಡೆ ಈವರೆಗೆ ಸುಮಾರು 28.67 ಲಕ್ಷ ರೂ. ಮೊತ್ತದ ಸೊತ್ತು ಹಾನಿ ಸಂಭವಿಸಿದೆ.
ಕಂದಾಯ ಇಲಾಖೆಗೆ ಸಂಬಂಧಪಟ್ಟು 19.17 ಲಕ್ಷ ರೂ. ಸೊತ್ತು ಹಾನಿಯಾಗಿದ್ದು, ಮೆಸ್ಕಾಂ ಇಲಾಖೆಗೆ 9.50 ಲಕ್ಷ ರೂ. ವರೆಗೆ ನಷ್ಟ ಉಂಟಾಗಿದೆ.
ಮಂಗಳವಾರ ಸಂಜೆಯವರೆಗೆ 28 ಪ್ರಕರಣಗಳಿಂದ 8.76 ಲಕ್ಷ ರೂ., ಬುಧವಾರ ಸಂಜೆಯವರೆಗೆ 34 ಪ್ರಕರಣಗಳಿಂದ 7.26 ಲಕ್ಷ ರೂ. ಮತ್ತು ಗುರುವಾರ ಸಂಜೆಯವರೆಗೆ 3.15 ಲಕ್ಷ ರೂ. ವರೆಗೆ ನಷ್ಟ ಸಂಭವಿಸಿರುವ ಬಗ್ಗೆ ಕಂದಾಯ ಇಲಾಖೆಗೆ ದೂರು ಬಂದಿದೆ.
ಮೆಸ್ಕಾಂಗೆ ಭಾರೀ ಹಾನಿ
ಗುರುವಾರ ಸಂಜೆಯವರೆಗೆ ಲಭಿಸಿದ ಮಾಹಿತಿಯಂತೆ ಮೆಸ್ಕಾಂ ಕಾಪು ಉಪ ವಿಭಾಗ ವ್ಯಾಪ್ತಿಯಲ್ಲಿ ಸುಮಾರು 70 ರಿಂದ 80 ಕಂಬಗಳು ಉರುಳಿ ಬಿದ್ದಿದ್ದು ಸುಮಾರು 8 ಲಕ್ಷ ರೂ. ವರೆಗೆ ನಷ್ಟ ಉಂಟಾಗಿದೆ. ಗುರುವಾರ ಬೆಳಗ್ಗೆ ಪಾಜಕ ಬಳಿ ಟವರ್ ತುಂಡಾಗಿ ಬಿದ್ದ ಪರಿಣಾಮ 1.50 ಲಕ್ಷ ರೂ. ವರೆಗೆ ನಷ್ಟ ಉಂಟಾಗಿದೆ. ಸೋಮವಾರ ರಾತ್ರಿಯಿಂದೀಚೆಗೆ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಉಂಟಾಗುತ್ತಿದ್ದು, ಎಲ್ಲೆಡೆಯ ಸಮಸ್ಯೆ ಪರಿಹಾರಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬಂದಿ 24*7 ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಳೆ ಹಾನಿ ಸಂಬಂಧಿತ ಪ್ರದೇಶಗಳಿಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಗುರುವಾರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ತಾತ್ಕಾಲಿಕ ಪರಿಹಾರ ಧನವನ್ನು ಒದಗಿಸಿಕೊಡಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ