ನಕ್ರೆ-ಕುಕ್ಕುಂದೂರು: ಡಾಮರು ರಸ್ತೆಯ ಮೇಲೆ ಮರು ಡಾಮರು

ಸಾರ್ವಜನಿಕರಿಂದ ಸಂಶಯ, ಗುಣಮಟ್ಟ ಬಗ್ಗೆ ಪ್ರಶ್ನೆ, ತನಿಖೆಗೆ ಆಗ್ರಹ

Team Udayavani, Apr 14, 2022, 10:29 AM IST

damar

ಕಾರ್ಕಳ: ನಕ್ರೆ-ಕುಕ್ಕುಂದೂರು ಭಾಗದ ರಸ್ತೆ ಸಂಚಾರಕ್ಕೆ ಯೋಗ್ಯವಾಗಿದ್ದರೂ ಮರು ಡಾಮರು ಕಾಮಗಾರಿ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಸಂಶಯ ಹಾಗೂ ಕುತೂಹಲ ಎಡೆ ಮಾಡಿಕೊಟ್ಟಿದೆ.

ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಕ್ಕುಂದೂರು ನಕ್ರೆ ಭಾಗಕ್ಕೆ ಸಂಪರ್ಕಿಸುವ 2 ಕಿ. ಮೀ. ದೂರದ ಡಾಮರು ರಸ್ತೆಯನ್ನು 75 ಲಕ್ಷ ರೂ. ವೆಚ್ಚದಲ್ಲಿ ಮರು ಡಾಮರು ಕಾಮಗಾರಿ ಮಾಡಲಾಗುತ್ತಿದೆ. ಕಳೆದೆರಡು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಒಂದು ಗುಂಡಿಯೂ ಇಲ್ಲದ ರಸ್ತೆಯಲ್ಲಿ ನಡೆಯುವ ಈ ಕಾಮಗಾರಿ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿಸಿದೆ.

ಚೆನ್ನಾಗಿದ್ದ ರಸ್ತೆಗೆ ಮರು ಡಾಮರು ಯಾಕೆ?

ಲೊಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆ ಲೊಕೋಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲೆ ಹಾದು ಹೋಗಿದೆ. ಉತ್ತಮವಾಗಿದ್ದ ಈ ರಸ್ತೆಯನ್ನು ದುರಸ್ತಿ ನೆಪದಲ್ಲಿ ಮರು ಡಾಮರು ಕಾಮಗಾರಿ ಮಾಡಲಾಗುತ್ತಿದೆ. ಸುಮಾರು 75 ಲಕ್ಷ ರೂ. ಹಣ ವ್ಯಯಿಸಲಾಗುತ್ತಿದೆ. ಚೆನ್ನಾಗಿದ್ದ ರಸ್ತೆಗೆ ಮರು ಡಾಮರು ಯಾಕೆ, ಎಸ್ಟಿಮೇಟ್‌ ಮಾಡಿದ ಎಂಜಿನಿಯರ್‌ ಯಾರು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ನಕ್ರೆ, ಕುಕ್ಕುಂದೂರು ಭಾಗಕ್ಕೆ ಸಂಪರ್ಕಿಸುವ ಇದೇ ರಸ್ತೆಯ ಪರಪ್ಪು ಎಂಬಲ್ಲಿನ ಅಗಲ ಕಿರಿದಾದ ಕಿರು ಸೇತುವೆಯನ್ನು ಮೇಲ್ದರ್ಜೆಗೇರಿಸುವುದು ಈಗಿನ ಅಗತ್ಯ. ಅದನ್ನು ಬಿಟ್ಟು ಅನಗತ್ಯ ಕಾಮಗಾರಿಗೆ ಮುಂದಾಗಿರುವ ಬಗ್ಗೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಎಇಇಯಿಂದ ಪರಿಶೀಲನೆ, ಸೂಚನೆ

ಎ.13ರಂದು ಕಾಮಗಾರಿ ನಡೆಸುವ ವೇಳೆ ಹಳೆಯ ರಸ್ತೆಯನ್ನು ಸ್ವತ್ಛಗೊಳಿಸದೆ ಇದ್ದ ಹಾಗೆ ಅದರ ಮೇಲೆಯೇ ಡಾಮರು ಹಾಕಲಾಗುತ್ತಿತ್ತು. ಈ ವಿಚಾರ ಪ್ರಭಾರ ಎಇಇ ಸೋಮಶೇಖರ್‌ ಅವರ ಗಮನಕ್ಕೆ ಬಂದ ತತ್‌ಕ್ಷಣ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಲೋಪವಾಗದಂತೆ ಸೂಚನೆ ನೀಡಿದ್ದಾರೆ. ಕಾಮಗಾರಿ ಗುಣಮಟ್ಟದ ಬಗ್ಗೆ ಜನರಲ್ಲಿ ಆರಂಭದಲ್ಲೇ ಸಂಶಯವಿದೆ. ‌

ಗುಣಮಟ್ಟಕ್ಕೆ ನಾನೇ ಖಾತರಿ ಎಂದ ಎಂಜಿನಿಯರ್‌!

ಈ ಮಾರ್ಗದ ತಿರುವಿನಲ್ಲಿ ರಸ್ತೆ ಹಾಳಾಗುತ್ತ ಬಂದಿತ್ತು. ಇನ್ನು ಒಂದು ವರ್ಷ ಹೋದರೆ ಪೂರ್ಣ ಹಾಳಾಗುತ್ತಿತ್ತು. 2013ರಲ್ಲಿ ರಿನೀವಲ್‌ ಆಗಿದ್ದು. ಈಗ ನಡೆಯುತ್ತಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಎಂಜಿನಿಯರ್‌ ಆಗಿ ನಾನು ಖಾತರಿ ಕೊಡುತ್ತಿದ್ದೇನೆ. ಮುಂದಿನ 3 ವರ್ಷದ ವರೆಗೆ ರಸ್ತೆ ಏನೂ ಹಾಳಾಗಲ್ಲ. ನಾನಿದ್ದೇನಲ್ಲ ಎಂದು ಲೋಕೋಪಯೋಗಿ ಇಲಾಖೆ ಜೂ. ಎಂಜಿನಿಯರ್‌ ಸಂದೀಪ್‌ ಲೋಯಿಡ್‌ ಡಿ’ಸಿಲ್ವ ಪ್ರತಿಕ್ರಿಯಿಸಿದ್ದಾರೆ.

ಯಾವುದು ಸತ್ಯ, ಮಿತ್ಯ ಪ್ರಶ್ನೆ

ಇಲಾಖೆಗೆ ಯೋಜನಾ ವೆಚ್ಚದ ಬಗ್ಗೆ ಸ್ಪಷ್ಟ ಮಾಹಿತಿ ಯಿಲ್ಲ. ಎಇಇ 50 ಲಕ್ಷ ರೂ. ಹೇಳಿದರೆ, ಇಲಾಖಾ ಎಂಜಿನಿಯರ್‌ 75 ಲಕ್ಷ ರೂ. ಎಂದು ಹೇಳುತ್ತಾರೆ. ಗುತ್ತಿಗೆದಾರರು 2 ಕೋ.ರೂ. ಕಾಮಗಾರಿ ಎಂದು ಹೇಳುತ್ತಿದ್ದಾರೆ. ಯಾವುದು ಸತ್ಯ ಯಾವುದು ಮಿಥ್ಯ. ಗೋಪಾಲ ಭಂಡಾರಿ ಶಾಸಕತ್ವದ ಅವಧಿಯಲ್ಲಿ ಸ್ಥಳೀಯ ಭೂಮಾಲಕರ ಮನವೊಲಿಸಿ ಸೇತುವೆಯ ಸಂಪರ್ಕ ರಸ್ತೆಯನ್ನು ವಿಸ್ತರಣೆ ಮಾಡಲಾಗಿತ್ತು. ದಟ್ಟ ವಾಹನ ಸಂಚಾರದ ಈ ರಸ್ತೆಗೆ ಮರುಡಾಮರು ಕಾಮಗಾರಿಗಿಂತ ಮುಖ್ಯವಾಗಿ ಸೇತುವೆ ವಿಸ್ತರಣೆ‌ ಅಗತ್ಯವಿತ್ತು. -ಬಿಪಿನ್‌ಚಂದ್ರಪಾಲ್‌ ನಕ್ರೆ, ಸ್ಥಳೀಯರು

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.