ಹುಲಿಕಲ್‌ ಏರಲು ಬೇಕು ಹುಲಿ ಗುಂಡಿಗೆ


Team Udayavani, Jul 31, 2018, 9:29 AM IST

balebare-gatti.jpg

ಸಿದ್ದಾಪುರ: ಬಿರುಸಿನ ಮಳೆ ಮತ್ತು ಘನ ವಾಹನಗಳ ಓಡಾಟದಿಂದಾಗಿ ಶಿವಮೊಗ್ಗ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಹುಲಿಕಲ್‌ (ಬಾಳೆಬರೆ) ಘಾಟಿ ರಸ್ತೆಯೂ ಕುಸಿಯುವ ಭೀತಿಯಲ್ಲಿದೆ. ಆದರೆ ದುರಸ್ತಿಗೊಳಿಸಬೇಕಾದ ಲೋಕೋಪಯೋಗಿ ಇಲಾಖೆಯು ನಿರ್ವಹಣೆ ಹೊಣೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಕೊಟ್ಟು ಕೈ ತೊಳೆದು ಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಇನ್ನೂ ಕಾರ್ಯ ಪ್ರವೃತ್ತ ರಾಗದಿರುವುದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದೆ.

ಶಿರಾಡಿ, ಚಾರ್ಮಾಡಿ ಸಹಿತ ಪ್ರಮುಖ ಘಾಟಿ ರಸ್ತೆಗಳು ವಿವಿಧ ಕಾರಣಗಳಿಂದ ಬಂದ್‌ ಆಗಿದ್ದ ಕಾರಣ ಘನ ವಾಹನಗಳು ಬಾಳೆಬರೆ ಘಾಟಿ ಯನ್ನು ಅವಲಂಬಿಸಿದ್ದವು. ರಾಜ್ಯ ಹೆದ್ದಾರಿಯಾಗಿದ್ದರೂ ರಸ್ತೆಯ ಗುಣಮಟ್ಟ ಬಹಳ ಚೆನ್ನಾಗಿರದ ಕಾರಣ ಘನ ವಾಹನಗಳ ಸಂಚಾರ ತುಸು ಕಷ್ಟ. ಮಿತಿಮೀರಿದ ಸರಕು ಹೇರಿದ ವಾಹನಗಳು ಸಾಗುವಾಗ ಕೆಲವೆಡೆ ಭೂಮಿ ಕಂಪಿಸುತ್ತಿದೆ. ಇದರ ಪರಿಣಾಮ ರಸ್ತೆ ಹಾಗೂ ರಸ್ತೆಯ ಬದಿ ಕುಸಿಯುತ್ತಿದೆ.


ಪ್ರಮುಖ ಘಾಟಿ
ಬಳ್ಳಾರಿ, ದಾವಣಗೆರೆ ಮತ್ತಿತರ ಜಿಲ್ಲೆಗಳಿಂದಲೂ ಮಂಗಳೂರಿಗೆ ಸಂಪರ್ಕ ಹೊಂದಿರುವ ಪ್ರಮುಖ ಘಾಟಿ ರಸ್ತೆ ಇದು. ನಿತ್ಯವೂ 1,500ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಕನಿಷ್ಠ ದುರಸ್ತಿಯನ್ನೂ ನಡೆಸಿಲ್ಲ. ರಸ್ತೆಯ ಒಂದು ಪಾರ್ಶ್ವದಲ್ಲಿ ಸುಮಾರು 6 ಕಿ.ಮೀ.ವರೆಗೆ ಒಂದು ಸಾವಿರಕ್ಕೂ ಅಧಿಕ ಅಡಿ ಆಳದ ಪ್ರಪಾತವಿದೆ. ಅಲ್ಲಲ್ಲಿ ನಿರ್ಮಿಸಿರುವ ತಡೆಗೋಡೆಗಳಿಗೆ ವಾಹನಗಳು ಢಿಕ್ಕಿಯಾಗಿ ನಾಶವಾಗಿವೆ. ಒಟ್ಟು 12 ಕಿ.ಮೀ. ವ್ಯಾಪ್ತಿಯಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ ಇದೆ ಎನ್ನುತ್ತಾರೆ ಬಸ್‌ ಚಾಲಕರು. ರಸ್ತೆಯನ್ನು ಕೆಲವೆಡೆ ಅಗಲ ಗೊಳಿಸ ಲಾಗಿದ್ದರೆ, ಇನ್ನು ಕೆಲವೆಡೆ ಕಾಂಕ್ರೀಟ್‌ ಹಾಕಲಾಗಿದೆ. ಒಂದೆಡೆ ಬಂಡೆ ಕಲ್ಲಿನಿಂದ ಆ ವೃತವಾದ ಗುಡ್ಡ, ಇನ್ನೊಂದು ಬದಿಯಲ್ಲಿ ಆಳವಾದ ಕಮರಿ ಇರುವುದರಿಂದ ಚರಂಡಿ ನಿರ್ಮಿಸಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತ ಬೃಹದಾಕಾರದ ಮರಗಳು, ಗಿಡಗಂಟಿಗಳಿಂದಾಗಿ ತಿರುವಿನಲ್ಲಿ ಎದುರಿನಿಂದ ಬರುವ ವಾಹನಗಳು ತೋರುತ್ತಿಲ್ಲ. ಎಚ್ಚರಿಕೆ ಫಲಕಗಳೂ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ದಿನೇ ದಿನೆ ವಾಹನಗಳ ಸಂಚಾರ ಹೆಚ್ಚುತ್ತಿದ್ದು, ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡಬೇಕೆಂಬುದು ಸಾರ್ವಜನಿಕರ ಆಗ್ರಹ.

ನಿರ್ವಹಣೆ ಹೊಣೆ ನಮ್ಮದಲ್ಲ
ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರಿಗೆ ಈ ಸಾಲಿನಲ್ಲಿ ಕಾಮಗಾರಿಗಾಗಿ ರಸ್ತೆಯನ್ನು ಹಸ್ತಾಂತರಿಸಲಾಗಿದೆ. ಕುಂದಾಪುರದ ವಡೇರಹೋಬಳಿಯಿಂದ ಉಡುಪಿ ಜಿಲ್ಲೆಯ ಗಡಿ ಭಾಗದವರೆಗೆ 45 ಕಿ.ಮೀ. ರಸ್ತೆ ಕಾಮಗಾರಿಗೆ ಸಿಆರ್‌ಎಫ್‌ ನಿಧಿಯಿಂದ 10 ಕೋ.ರೂ. ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾಮಗಾರಿ ಮುಗಿಸಿ, ಎರಡು ವರ್ಷ ನಿರ್ವಹಿಸಿದ ಮೇಲೆ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುತ್ತದೆ. ಕಾಮಗಾರಿ ಪೂರ್ಣ ಆಗದಿರುವುದರಿಂದ ರಸ್ತೆಯ ಹೊಣೆ ಅವರದ್ದು. ಓವರ್‌ ಲೋಡ್‌ ಘನ ವಾಹನಗಳ ಸಂಚಾರದ ಬಗ್ಗೆ ಆರ್‌ಟಿಒ ಮೂಲಕ ಸರಕಾರಕ್ಕೆ ಬರೆದಿದ್ದೇವೆ.
– ಚಂದ್ರಶೇಖರ್‌, ಎಇ, ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆ ಉಪ ವಿಭಾಗ

ಸರಕಾರದ ಒಪ್ಪಿಗೆ ಅಗತ್ಯ
ಘಾಟಿ ರಸ್ತೆಗೆ ಡಾಮರು ಹಾಗೂ ತಡೆಗೋಡೆ ನಿರ್ಮಾಣದ ಬಗ್ಗೆ ಸರಕಾರಕ್ಕೆ ಬರೆದಿದ್ದು, ಒಪ್ಪಿಗೆ ಸಿಕ್ಕಿದ ಕೂಡಲೇ ಕಾಮಗಾರಿ ಆರಂಭಿಸುತ್ತೇವೆ.
– ಸುರೇಶ್‌, ಸೆಕ್ಷನ್‌ ಆಫೀಸರ್‌, ಲೋಕೋಪಯೋಗಿ ಇಲಾಖೆ ಹೊಸನಗರ ಉಪ ವಿಭಾಗ

*ಸತೀಶ್‌ ಆಚಾರ್‌ ಉಳ್ಳೂರ್‌

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.