ಹುಲಿಕಲ್ ಏರಲು ಬೇಕು ಹುಲಿ ಗುಂಡಿಗೆ
Team Udayavani, Jul 31, 2018, 9:29 AM IST
ಸಿದ್ದಾಪುರ: ಬಿರುಸಿನ ಮಳೆ ಮತ್ತು ಘನ ವಾಹನಗಳ ಓಡಾಟದಿಂದಾಗಿ ಶಿವಮೊಗ್ಗ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಹುಲಿಕಲ್ (ಬಾಳೆಬರೆ) ಘಾಟಿ ರಸ್ತೆಯೂ ಕುಸಿಯುವ ಭೀತಿಯಲ್ಲಿದೆ. ಆದರೆ ದುರಸ್ತಿಗೊಳಿಸಬೇಕಾದ ಲೋಕೋಪಯೋಗಿ ಇಲಾಖೆಯು ನಿರ್ವಹಣೆ ಹೊಣೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಕೊಟ್ಟು ಕೈ ತೊಳೆದು ಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಇನ್ನೂ ಕಾರ್ಯ ಪ್ರವೃತ್ತ ರಾಗದಿರುವುದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದೆ.
ಶಿರಾಡಿ, ಚಾರ್ಮಾಡಿ ಸಹಿತ ಪ್ರಮುಖ ಘಾಟಿ ರಸ್ತೆಗಳು ವಿವಿಧ ಕಾರಣಗಳಿಂದ ಬಂದ್ ಆಗಿದ್ದ ಕಾರಣ ಘನ ವಾಹನಗಳು ಬಾಳೆಬರೆ ಘಾಟಿ ಯನ್ನು ಅವಲಂಬಿಸಿದ್ದವು. ರಾಜ್ಯ ಹೆದ್ದಾರಿಯಾಗಿದ್ದರೂ ರಸ್ತೆಯ ಗುಣಮಟ್ಟ ಬಹಳ ಚೆನ್ನಾಗಿರದ ಕಾರಣ ಘನ ವಾಹನಗಳ ಸಂಚಾರ ತುಸು ಕಷ್ಟ. ಮಿತಿಮೀರಿದ ಸರಕು ಹೇರಿದ ವಾಹನಗಳು ಸಾಗುವಾಗ ಕೆಲವೆಡೆ ಭೂಮಿ ಕಂಪಿಸುತ್ತಿದೆ. ಇದರ ಪರಿಣಾಮ ರಸ್ತೆ ಹಾಗೂ ರಸ್ತೆಯ ಬದಿ ಕುಸಿಯುತ್ತಿದೆ.
ಪ್ರಮುಖ ಘಾಟಿ
ಬಳ್ಳಾರಿ, ದಾವಣಗೆರೆ ಮತ್ತಿತರ ಜಿಲ್ಲೆಗಳಿಂದಲೂ ಮಂಗಳೂರಿಗೆ ಸಂಪರ್ಕ ಹೊಂದಿರುವ ಪ್ರಮುಖ ಘಾಟಿ ರಸ್ತೆ ಇದು. ನಿತ್ಯವೂ 1,500ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಕನಿಷ್ಠ ದುರಸ್ತಿಯನ್ನೂ ನಡೆಸಿಲ್ಲ. ರಸ್ತೆಯ ಒಂದು ಪಾರ್ಶ್ವದಲ್ಲಿ ಸುಮಾರು 6 ಕಿ.ಮೀ.ವರೆಗೆ ಒಂದು ಸಾವಿರಕ್ಕೂ ಅಧಿಕ ಅಡಿ ಆಳದ ಪ್ರಪಾತವಿದೆ. ಅಲ್ಲಲ್ಲಿ ನಿರ್ಮಿಸಿರುವ ತಡೆಗೋಡೆಗಳಿಗೆ ವಾಹನಗಳು ಢಿಕ್ಕಿಯಾಗಿ ನಾಶವಾಗಿವೆ. ಒಟ್ಟು 12 ಕಿ.ಮೀ. ವ್ಯಾಪ್ತಿಯಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ ಇದೆ ಎನ್ನುತ್ತಾರೆ ಬಸ್ ಚಾಲಕರು. ರಸ್ತೆಯನ್ನು ಕೆಲವೆಡೆ ಅಗಲ ಗೊಳಿಸ ಲಾಗಿದ್ದರೆ, ಇನ್ನು ಕೆಲವೆಡೆ ಕಾಂಕ್ರೀಟ್ ಹಾಕಲಾಗಿದೆ. ಒಂದೆಡೆ ಬಂಡೆ ಕಲ್ಲಿನಿಂದ ಆ ವೃತವಾದ ಗುಡ್ಡ, ಇನ್ನೊಂದು ಬದಿಯಲ್ಲಿ ಆಳವಾದ ಕಮರಿ ಇರುವುದರಿಂದ ಚರಂಡಿ ನಿರ್ಮಿಸಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತ ಬೃಹದಾಕಾರದ ಮರಗಳು, ಗಿಡಗಂಟಿಗಳಿಂದಾಗಿ ತಿರುವಿನಲ್ಲಿ ಎದುರಿನಿಂದ ಬರುವ ವಾಹನಗಳು ತೋರುತ್ತಿಲ್ಲ. ಎಚ್ಚರಿಕೆ ಫಲಕಗಳೂ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ದಿನೇ ದಿನೆ ವಾಹನಗಳ ಸಂಚಾರ ಹೆಚ್ಚುತ್ತಿದ್ದು, ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡಬೇಕೆಂಬುದು ಸಾರ್ವಜನಿಕರ ಆಗ್ರಹ.
ನಿರ್ವಹಣೆ ಹೊಣೆ ನಮ್ಮದಲ್ಲ
ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರಿಗೆ ಈ ಸಾಲಿನಲ್ಲಿ ಕಾಮಗಾರಿಗಾಗಿ ರಸ್ತೆಯನ್ನು ಹಸ್ತಾಂತರಿಸಲಾಗಿದೆ. ಕುಂದಾಪುರದ ವಡೇರಹೋಬಳಿಯಿಂದ ಉಡುಪಿ ಜಿಲ್ಲೆಯ ಗಡಿ ಭಾಗದವರೆಗೆ 45 ಕಿ.ಮೀ. ರಸ್ತೆ ಕಾಮಗಾರಿಗೆ ಸಿಆರ್ಎಫ್ ನಿಧಿಯಿಂದ 10 ಕೋ.ರೂ. ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾಮಗಾರಿ ಮುಗಿಸಿ, ಎರಡು ವರ್ಷ ನಿರ್ವಹಿಸಿದ ಮೇಲೆ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುತ್ತದೆ. ಕಾಮಗಾರಿ ಪೂರ್ಣ ಆಗದಿರುವುದರಿಂದ ರಸ್ತೆಯ ಹೊಣೆ ಅವರದ್ದು. ಓವರ್ ಲೋಡ್ ಘನ ವಾಹನಗಳ ಸಂಚಾರದ ಬಗ್ಗೆ ಆರ್ಟಿಒ ಮೂಲಕ ಸರಕಾರಕ್ಕೆ ಬರೆದಿದ್ದೇವೆ.
– ಚಂದ್ರಶೇಖರ್, ಎಇ, ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆ ಉಪ ವಿಭಾಗ
ಸರಕಾರದ ಒಪ್ಪಿಗೆ ಅಗತ್ಯ
ಘಾಟಿ ರಸ್ತೆಗೆ ಡಾಮರು ಹಾಗೂ ತಡೆಗೋಡೆ ನಿರ್ಮಾಣದ ಬಗ್ಗೆ ಸರಕಾರಕ್ಕೆ ಬರೆದಿದ್ದು, ಒಪ್ಪಿಗೆ ಸಿಕ್ಕಿದ ಕೂಡಲೇ ಕಾಮಗಾರಿ ಆರಂಭಿಸುತ್ತೇವೆ.
– ಸುರೇಶ್, ಸೆಕ್ಷನ್ ಆಫೀಸರ್, ಲೋಕೋಪಯೋಗಿ ಇಲಾಖೆ ಹೊಸನಗರ ಉಪ ವಿಭಾಗ
*ಸತೀಶ್ ಆಚಾರ್ ಉಳ್ಳೂರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ