ಅನಾಹುತಕ್ಕೂ ಮುನ್ನವೇ ಇಲಾಖೆ ಸುರಕ್ಷತೆ ಕಲ್ಪಿಸಲಿ


Team Udayavani, Dec 23, 2018, 3:30 AM IST

danger-22-12.jpg

ಕಟಪಾಡಿ: ಪ್ರಾಣಾತಂಕದ ಭೀತಿಯನ್ನು ಸೃಷ್ಟಿಸುವ ಅಧಿಕ ಭಾರದ ಕಲ್ಲುಗಳನ್ನು ಹೇರಿಕೊಂಡು ಅಪಾಯಕಾರಿಯಾಗಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಇಲಾಖೆಯು ಎಚ್ಚೆತ್ತು ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೂಗೊಂದು ಕೇಳಿ ಬರುತ್ತಿದೆ. ಕಟಪಾಡಿ- ಶಿರ್ವ ಸಂಪರ್ಕದ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಕಲ್ಲುಗಳನ್ನು ಹೇರಿಕೊಂಡು ದಿನವೊಂದರ ಕನಿಷ್ಟ  150-200 ಟ್ರಿಪ್‌ ವಾಹನ ಸಂಚರಿಸುತ್ತಿದ್ದು, ಇದರಿಂದ ಕೆಳಕ್ಕೆ ಬಿದ್ದ ಕಲ್ಲು ಆತಂಕವನ್ನು ಸೃಷ್ಟಿಸಿದೆ. ಸುಭಾಸ್‌ ನಗರ-ಅಚ್ಚಡ ರೈಲ್ವೇ ಮೇಲ್ಸೇತುವೆಯ ಕಣ್ಣಳತೆಯ ದೂರದಲ್ಲಿ ತಿರುವೊಂದರ ಬಳಿ ಮಂಗಳವಾರದಂದು  ದೊಡ್ಡ ಗಾತ್ರದ ಕಲ್ಲು ಬಿದ್ದಿದ್ದು, ಯಾರೋ ರಾಜ್ಯ ಹೆದ್ದಾರಿಯಿಂದ ಪಕ್ಕಕ್ಕೆ ಸರಿಸಿ ಇರಿಸಲಾಗಿದ್ದು ಇನ್ನೂ ಸ್ಥಳದಿಂದ ತೆರವುಗೊಳಿಸಿಲ್ಲ.

ಕಟಪಾಡಿಯತ್ತ ಲೋಡ್‌ ಹೊತ್ತೂಯ್ಯುವ ಈ ಟಿಪ್ಪರ್‌ನಿಂದ ಕೆಳಕ್ಕೆ ಬಿದ್ದ ಈ ಕಲ್ಲು ರಸ್ತೆಯ ಮಗುದೊಂದು ಭಾಗಕ್ಕೆ ಎಸೆಯಲ್ಪಟ್ಟಿದೆ. ಒಂದು ವೇಳೆ ಈ ಸಂದರ್ಭದಲ್ಲಿ ಹಿಂಭಾಗದಲ್ಲಿ ವಾಹನ ಬರುತ್ತಿದ್ದರೆ ಅಥವಾ ವಿರುದ್ಧ ದಿಕ್ಕಿನಿಂದಲೂ ವಾಹನ ಬರುತ್ತಿದ್ದರೆ, ಜನರು ಸಂಚರಿಸುತ್ತಿದ್ದರೆ ಪ್ರಾಣಾತಂಕ ಸಂಭವಿಸುವ  ಭೀತಿಯನ್ನು ಸಾರ್ವಜನಿಕರು ಮತ್ತು ಸ್ಥಳೀಯರು ವ್ಯಕ್ತ ಪಡಿಸುತ್ತಿದ್ದಾರೆ. ಅತಿಯಾದ ವೇಗ, ಸುಸ್ಥಿತಿಯಲ್ಲಿ ಇರದ ವಾಹನಗಳು ಆತಂಕವನ್ನು ಸೃಷ್ಟಿಸುತ್ತಾ ಸಾಗುತ್ತಿವೆೆ. ಇದೆಲ್ಲದರ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸೂಕ್ತ ರೀತಿಯ ಕ್ರಮ ಕೈಗೊಂಡು ರಾಜ್ಯ ಹೆದ್ದಾರಿಯ ಸಂಚಾರಿಗಳಿಗೆ ಸುರಕ್ಷತೆಯನ್ನು ಕಲ್ಪಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

ಕಡಿವಾಣ ಅಗತ್ಯ
ಕಲ್ಲು ಹೇರಿಕೊಂಡು ಓಡಾಡುವ ವಾಹನಗಳ ನಾಗಾಲೋಟಕ್ಕೆ ಕಡಿವಾಣ ಹಾಕಬೇಕಿದೆ. ಕಲ್ಲು ಟಿಪ್ಪರೊಂದರಿಂದ ಜಾರಿ ರಸ್ತೆಗೆ ಬಿದ್ದಿದ್ದು, ಅಜಾಗರೂಕತೆಯನ್ನು ತೋರಿಸುತ್ತಿದೆ. ಇವರ ಅಜಾಗ್ರತೆಯಿಂದ ಯಾರೋ ಪ್ರಾಣ ಕಳಕೊಳ್ಳುವ ಮುನ್ನ ಇಲಾಖೆಯ ಅಧಿಕಾರಿಗಳು ಸುರಕ್ಷತೆ ಒದಗಿಸಲಿ.
-ಮ್ಯಾಕ್ಸಿಂ ಆಲ್ವ, ಸಮಾಜ ಸೇವಕ, ಸುಭಾಸ್‌ ನಗರ

ಸುರಕ್ಷೆ: ನಿಗಾ ವಹಿಸಿ
ಕಲ್ಲು ಹೇರಿಕೊಂಡು ತೆರಳುವ ವಾಹನಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸಬೇಕಾದ ಆವಶ್ಯಕತೆ ಇದೆ. ಧಾರ್ಮಿಕ ಕ್ಷೇತ್ರಗಳು, ಶೈಕ್ಷಣಿಕ ಕೇಂದ್ರಗಳು ಹೆಚ್ಚಿರುವುದರಿಂದ ಹಾಗೂ ಹಬ್ಬ ಹರಿದಿನಗಳು ಬರಲಿರುವುದರಿಂದ ಈ ಭಾಗದಲ್ಲಿ ವಾಹನ ದಟ್ಟಣೆ, ಜನ ಸಂಚಾರ ಅಧಿಕ ಇದೆ. ಹಾಗಾಗಿ ಈ ರಾಜ್ಯ ಹೆದ್ದಾರಿಯಲ್ಲಿ  ಸಂಚಾರದ ಸುರಕ್ಷೆಯ ಬಗ್ಗೆ ನಿಗಾ ವಹಿಸಬೇಕಿದೆ.
– ಚಂದ್ರ ಪೂಜಾರಿ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ, ಕುರ್ಕಾಲು ಸುಭಾಸ್‌ ನಗರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.