ರಸ್ತೆ ಬದಿಯಲ್ಲಿ ಅಪಾಯಕಾರಿ ನಾಮಫಲಕ
Team Udayavani, May 17, 2018, 6:35 AM IST
ಶಿರ್ವ: ಇಲ್ಲಿನ ಮುಖ್ಯ ರಸ್ತೆಯಲ್ಲಿ ಆತ್ರಾಡಿ-ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಡಾಮರು ಕಾಮಗಾರಿ ಮುಗಿದಿದ್ದು ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುವ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ನಾಮಫಲಕಗಳಿಂದಾಗಿ ವಾಹನ ಸವಾರರು ,ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದೆ.
ಅಪಾಯದ ಕರೆಗಂಟೆ
ಶಿರ್ವ ಮಂಚಕಲ್ ಪೇಟೆಯ ಮುಖ್ಯ ರಸ್ತೆಯಲ್ಲಿ ದಿನವೊಂದಕ್ಕೆ ಶಾಲಾ ವಾಹನಗಳ ಸಹಿತ ಸಾವಿರಾರು ವಾಹನಗಳು ಚಲಿಸುತ್ತಿದ್ದು ಕೂಡುರಸ್ತೆಯ ಬದಿಯಲ್ಲಿ ನಾಮಫಲಕ ಅಳವಡಿಸಲಾಗಿದೆ. ಶಿರ್ವ ಪೊಲೀಸ್ ಸ್ಟೇಷನ್ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿರುವ ಸ್ಟೇಷನ್ನ ಬೋರ್ಡ್ ಮತ್ತು ಎಂಎಸ್ಆರ್ಎಸ್ ಕಾಲೇಜು ಕ್ರಾಸ್ನಲ್ಲಿ ಹಾಕಲಾಗಿರುವ ಖಾಸಗಿ ಸಂಸ್ಥೆಯ ಹೋರ್ಡಿಂಗ್ನಿಂದಾಗಿ ಮುಖ್ಯ ರಸ್ತೆಗೆ ಪ್ರವೇಶಿಸುವಾಗ ಬೆಳ್ಮಣ್ ಕಡೆಯಿಂದ ಬರುವ ವಾಹನಗಳು ಕಾಣುವುದಿಲ್ಲ. ಇದಕ್ಕೆ ಪೂರಕವೆಂಬಂತೆ ಆಗಾಗ ಸಣ್ಣಪುಟ್ಟ ವಾಹನ ಅಪಘಾತ ಕೂಡ ಸಂಭವಿಸುತ್ತವೆ.
ಮುಖ್ಯ ರಸ್ತೆ ವಿಸ್ತರಣೆಯಿಂದಾಗಿ ರಸ್ತೆ ನೇರವಾಗಿದ್ದು ವಾಹನಗಳು ಮಿತಿ ಮೀರಿದ ವೇಗದಲ್ಲಿ ಸಾಗುತ್ತಿವೆ. ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವವರೆಗೆ ಎರಡೂ ಕಡೆ ಚಲಿಸುವ ವಾಹನಗಳು ಕಾಣದೆ ನಾಮಫಲಕಗಳು ಅಪಾಯಕಾರಿಯಾಗಿ ಪರಿಣಮಿಸಿದೆ. ಇಲ್ಲಿ ಹಿಂದೆ ಅಳವಡಿಸಲಾಗಿದ್ದ ಬ್ಯಾರಿಕೇಡ್ಗಳನ್ನು ಕೂಡಾ ತೆಗೆಯಲಾಗಿದೆ. ಸ್ಥಳೀಯಾಡಳಿತ ಎಚ್ಚೆತ್ತುಕೊಂಡು ಅಪಾಯಕಾರಿ ನಾಮಫಲಕಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ