ಬೆಳೆ ಸಮೀಕ್ಷೆ ಆಕ್ಷೇಪಣೆಗೆ ದರ್ಶಕ್‌ ಮೊಬೈಲ್‌ ಆ್ಯಪ್‌

ಕೃಷಿಕ-ಕೃಷಿ ಇಲಾಖೆ ನಡುವೆ ಸಂಬಂಧ ವೃದ್ಧಿ; ರೈತರಿಗೆ ಅನುಕೂಲ

Team Udayavani, Jan 22, 2020, 4:16 AM IST

chi-21

ಸಾಂದರ್ಭಿಕ ಚಿತ್ರ

ಉಡುಪಿ: ಅಂತರ್ಜಾಲ ಸಹಾಯದಿಂದ ಈಗ ಕೃಷಿಕರು ಸಹ ಲಾಭ ಪಡೆಯುತ್ತಿದ್ದು ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಸಂಬಂಧ ವೃದ್ಧಿಸಲು ಕೃಷಿ ಇಲಾಖೆ ಪ್ರಯತ್ನಿಸುತ್ತಿದೆ. ಇದರ ಫ‌ಲವಾಗಿಯೇ ಬೆಳೆ ಸಮೀಕ್ಷೆಗೆ ಸಂಬಂಧಿಸಿ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಬೆಳೆ ದರ್ಶಕ್‌ ಮೊಬೈಲ್‌ ಆಪ್‌ ಈಗ ಲಭ್ಯವಿದೆ.

ಜಿಲ್ಲೆಯಲ್ಲಿ ಜಿ.ಪಿ.ಎಸ್‌ ಆಧಾರಿತ ಬೆಳೆ ಸಮೀಕ್ಷೆಯು ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಲ್ಲಿ ಜಾರಿಯಲ್ಲಿದೆ. ಈ ಮೊದಲು ಖಾಸಗಿ ವ್ಯಕ್ತಿಗಳ ಮೂಲಕ ಪ್ರತಿ ಹಳ್ಳಿಯಲ್ಲಿ ಸಮೀಕ್ಷೆ ನಡೆದಿತ್ತು. ಜಿಲ್ಲೆಯಲ್ಲಿ 9,32,662 ಮಂದಿ ರೈತರ ಸರ್ವೆ ನಡೆದಿತ್ತು. ಈ ಮುಂಗಾರಿನಲ್ಲಿ ಮುಕ್ತಾಯವಾದ ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್‌ ಎಂಬ ಆ್ಯಪ್‌ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಇಲಾಖೆ ಕ್ರಮವಹಿಸಿತ್ತು. ಸಾಕಷ್ಟು ಪ್ರಚಾರ ಕೈಗೊಂಡಿತ್ತು. ರೈತರು ಇದರ ಪ್ರಯೋಜನ ಪಡಕೊಂಡಿದ್ದರು. ರೈತರು ಈಗಾಗಲೆ ಆಕ್ಷೇಪಣೆ ಸಲ್ಲಿಸುತ್ತಿದ್ದು ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿಕೊಳ್ಳುತ್ತಿದ್ದಾರೆ.

ಹೇಗೆ ಬಳಕೆ
Bele Darshak Karnataka -2019, App Google play store ನಲ್ಲಿ ಆ್ಯಪ್‌ ಲಭ್ಯವಿದ್ದು, ಇದನ್ನು ಉಚಿತವಾಗಿ ಪ್ಲೇ-ಸ್ಟೋರ್‌ನಲ್ಲಿ ಡೌನ್ಲೋಡ್ ಮಾಡಿಕೊಂಡು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ಅದೇ ರೀತಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ (www.cropsurvey.karnataka.gov.in www.cropsurvey.karnataka.gov.in ಮೂಲಕ ನೇರವಾಗಿ ತಮ್ಮ ದೂರು ಸಲ್ಲಿಸಲು ಇದರಲ್ಲಿ ರೈತರಿಗೆ ಅವಕಾಶ ಕಲ್ಪಿಸಲಾಗಿದೆ.

ಜ. 30ರ ವರೆಗೆ ಅವಕಾಶ
ಎಲ್ಲ ವರ್ಗದ ರೈತರಿಗೆ ಆ್ಯಪ್‌ ಬಳಕೆ ಕಷ್ಟ. ಬಳಸಲು ಸಾಧ್ಯವಿಲ್ಲದನ್ನು ಮನ ಗಂಡ ಇಲಾಖೆ‌ ಲಿಖೀತ ರೂಪದಲ್ಲಿ ದೂರು ಸಲ್ಲಿಸಲು ಅವಕಾಶ ನೀಡಿದೆ.

ಪೂರಕವಾಗಿ ಗ್ರಾ.ಪಂ.ನಲ್ಲಿ ಸರ್ವೆ ನಂಬರ್‌ ಆಧಾರದಲ್ಲಿ ದಾಖಲಾದ ಬೆಳೆಗಳ ಪಟ್ಟಿಯನ್ನು ಲಗತ್ತಿಸಲಾಗುತ್ತಿದೆ. ಆ ಪಟ್ಟಿಯಲ್ಲಿ ತಮ್ಮ ಹೆಸರಿನ ಮುಂದೆ ಇರುವ ಬೆಳೆಯನ್ನು ಪರಿಶೀಲಿಸಿಕೊಂಡು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಏನಾದರೂ ವ್ಯತ್ಯಾಸಗಳು ಕಂಡುಬಂದಲ್ಲಿ ತಮ್ಮ ಆಕ್ಷೇಪಣೆಯನ್ನು ಸಂಬಂ ಧಿಸಿದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿಗಳಿಗೆ ದೂರು ಸಲ್ಲಿಸಲು ಜ. 30ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ಅನಂತರದಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡಿ ಮತ್ತೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜಂಟಿ ಕೃಷಿ ನಿರ್ದೇಶಕರು ಕ್ರಮವಹಿಸುವರು.

ರೈತರಿಗೆ ಅನುಕೂಲ
ಬೆಳೆ ಸಮೀಕ್ಷೆ ಪ್ರಕ್ರಿಯೆ ವೇಳೆ ತಂತ್ರಾಂಶದಲ್ಲಿ ದಾಖಲುಗೊಂಡ ಅಂಶಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತದೆ. ಇದಕ್ಕೂ ಮೊದಲು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಕೆಗೆ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ.
-ಕೆಂಪೇಗೌಡ, ಜಂಟಿ ನಿರ್ದೇಶಕರು , ಕೃಷಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.