ಕೊಡಗು ನೆರೆ: ದಸರಾ ಕ್ರೀಡಾಕೂಟಕ್ಕೆ ಬರೆ!


Team Udayavani, Sep 24, 2018, 10:48 AM IST

dasa.jpg

ಉಡುಪಿ: ಕೊಡಗು ಜಿಲ್ಲೆಯಲ್ಲಿ ಉಂಟಾದ ನೆರೆ, ಭೂಕುಸಿತ ಹಿನ್ನೆಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ಸರಕಾರ ನಿರ್ಧರಿಸಿರುವುದರಿಂದ ದಸರಾ ಕ್ರೀಡಾಕೂಟವೂ ನಡೆದಿಲ್ಲ. ವಿಶೇಷವೆಂದರೆ ಕ್ರೀಡಾಕೂಟಗಳಿಗಾಗಿ ಅನುದಾನ ಸಿದ್ಧವಿದ್ದು, ಕ್ರಿಯಾ ಯೋಜನೆಗೆ ಅನುಮೋದನೆಯೂ ದೊರೆತಿದೆ. ಆದರೆ ನಡೆಸಲು ಸರಕಾರದ ಆದೇಶ ಮಾತ್ರ ಬಂದಿಲ್ಲ.

ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಸಾರ್ವ ಜನಿಕರು ಪಾಲ್ಗೊಳ್ಳಲು ಅವಕಾಶವಿತ್ತು. ತಾಲೂಕು, ಜಿಲ್ಲೆ ಮತ್ತು ವಲಯ ಮಟ್ಟದಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದವು. ಪಾಲ್ಗೊಳ್ಳುವವರಿಗೆ ಪ್ರಯಾಣ ಭತ್ತೆ, ಸಮವಸ್ತ್ರ ನೀಡಲಾಗುತ್ತಿತ್ತು. ಉಡುಪಿ ಜಿ.ಪಂ.ನಲ್ಲಿ ಹಲವು ತಿಂಗಳ ಹಿಂದೆಯೇ ಕ್ರಿಯಾಯೋಜನೆಗೆ ಅನುಮೋದನೆ ಪಡೆಯಲಾಗಿದೆ. ತಾಲೂಕು ಮಟ್ಟಕ್ಕೆ ಪ್ರತೀ ತಾಲೂಕಿಗೆ ತಲಾ 50,000 ರೂ. ಹಾಗೂ ಜಿಲ್ಲಾ ಮಟ್ಟಕ್ಕೆ 1.5 ಲ. ರೂ. ತೆಗೆದಿರಿಸಲಾಗಿದೆ. ಸರಕಾರದ ಆದೇಶ ಬಾರದೆ ಜಿಲ್ಲೆಯ ಆಡಳಿತ ವರ್ಗ ಮುಂದುವರೆದಿಲ್ಲ. ಹಣ ಇದೆಯಾದರೂ ಖರ್ಚು ಮಾಡಿದರೆ ವಾಪಸು ನೀಡಬೇಕು ಎಂದು ಸರಕಾರ ಆದೇಶಿಸಿದರೆ  ಎಂಬ ಆತಂಕ ಅಧಿಕಾರಿಗಳಲ್ಲಿದೆ. ಜಿ.ಪಂ. ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿತ್ತು. ಕ್ರೀಡಾಕೂಟ ನಡೆಸಬಹುದಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿದೆ. 

ದಸರಾ ಕ್ರೀಡಾಕೂಟ ಮಾತ್ರ 
ಹಿಂದೆ ಪೈಕಾ (ಪಂಚಾಯತ್‌ ಯುವ ಕ್ರೀಡಾ ಔರ್‌ ಖೇಲ್‌ ಅಭಿಯಾನ್‌) ಕ್ರೀಡಾಕೂಟವಿತ್ತು. ಅನಂತರ ರಾಜೀವ್‌ಗಾಂಧಿ ಖೇಲ್‌ ಅಭಿಯಾನವಿತ್ತು. ಬಳಿಕ ಇವೆರಡನ್ನೂ ರದ್ದು ಮಾಡಿ ಖೇಲೋ ಇಂಡಿಯಾ ಕ್ರೀಡಾಕೂಟಗಳನ್ನು ನಡೆಸಲಾಯಿತು. ಕಳೆದ ವರ್ಷದಿಂದ ಇದೂ ಸ್ಥಗಿತವಾಗಿದೆ. ಹೀಗಾಗಿ ಕ್ರೀಡಾಕೂಟಗಳೇ ಅಪರೂಪ ಎನ್ನುವಂತಾಗಿದೆ. ಸದ್ಯ ಶಾಲೆ ಕಾಲೇಜುಗಳಲ್ಲಿ ಆಯೋಜಿಸುವಂಥವು ಮಾತ್ರವೇ ಕ್ರೀಡಾ ಸಾಧನೆ ಪ್ರದರ್ಶನಕ್ಕೆ ಅವಕಾಶ. ಹೀಗಾಗಿ ವಿದ್ಯಾರ್ಥಿಗಳು ಮಾತ್ರವಲ್ಲ, ಇತರ ಕ್ರೀಡಾಳುಗಳು, ವಿಶೇಷವಾಗಿ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕೈತಪ್ಪಿದಂತಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. 

ದಸರಾ ಕ್ರೀಡಾಕೂಟಕ್ಕೆ ಜಿಲ್ಲೆಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿತ್ತು. ಉಡುಪಿ ಜಿಲ್ಲೆಯಿಂದ ವಿಭಾಗ ಮಟ್ಟಕ್ಕೆ 190 ರಷ್ಟು ಮಂದಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಆದೇಶ ಬಾರದೆ ಕ್ರೀಡಾಳುಗಳಲ್ಲಿ ನಿರುತ್ಸಾಹ ಕಂಡುಬಂದಿದೆ. ಇಷ್ಟರಲ್ಲಿ ಕ್ರೀಡಾಕೂಟ ನಡೆಯಬೇಕಿತ್ತು. 

ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ನಮ್ಮ ಜಿ.ಪಂ.ನಲ್ಲಿ ಅನುದಾನ ನಿಗದಿಪಡಿಸಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ರಿಯಾ ಯೋಜನೆ  ಮಾಡಿದ್ದೇವೆ. ಆದರೆ ಸರಕಾರದ ಆದೇಶ ಬಂದಿಲ್ಲ. ಹಿಂದೆ ನಾಲ್ಕೈದು ಕ್ರೀಡಾಕೂಟಗಳಿಂದಾಗಿ ಕ್ರೀಡಾಳುಗಳಿಗೆ ಅನುಕೂಲವಾಗುತ್ತಿತ್ತು. ಈಗ ಒಂದೊಂದೇ ರದ್ದಾಗುತ್ತಿದೆ. ದಸರಾ ಕ್ರೀಡಾಕೂಟವೂ ರದ್ದಾಗುತ್ತಿರುವುದು ಬೇಸರ ಉಂಟು ಮಾಡಿದೆ. ಸರಳ ದಸರಾ ಎಂದು ಬೇರೆ ಎಲ್ಲ ಚಟುವಟಿಕೆಗಳನ್ನು ನಡೆಸಿ ಕ್ರೀಡಾಕೂಟ ಮಾತ್ರ ರದ್ದು ಮಾಡುವುದಾದರೆ ಅದು ಸರಿಯಲ್ಲ. ಅನುದಾನ ಇರುವುದರಿಂದ ಕ್ರೀಡಾಕೂಟಕ್ಕೆ ತೊಂದರೆಯಾಗುತ್ತಿರಲಿಲ್ಲ. 
ದಿನಕರ ಬಾಬು,  ಅಧ್ಯಕ್ಷರು, ಉಡುಪಿ ಜಿ.ಪಂ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.