ಮರುಭೂಮಿಯಲ್ಲಷ್ಟೇ ಅಲ್ಲ; ಕರಾವಳಿಯಲ್ಲೂ ಖರ್ಜೂರ ಬೆಳೆ

ಖರ್ಜೂರ ಬೆಳೆಸಿ ಅಚ್ಚರಿ ಮೂಡಿಸಿದ ಉದ್ಯಮಿ ಮಹಮ್ಮದ್‌ ಸಾದಿಕ್‌

Team Udayavani, Jul 5, 2019, 9:48 AM IST

karjura

ಕಾಪು: ಖಂಡಿತ, ಕಾಪು ಮರುಭೂಮಿಯಲ್ಲ; ಆದರೆ ಖರ್ಜೂರ ಬೆಳೆಯಬಹುದು ! ಮರುಭೂಮಿಯಲ್ಲಷ್ಟೇ ಹೆಚ್ಚಾಗಿ ಬೆಳೆಯುವ ಖರ್ಜೂರಗಳನ್ನು ಇಲ್ಲಿನ ಪ್ರಯೋಗಶೀಲ ಕೃಷಿಕರೊಬ್ಬರು ಬೆಳೆಸುತ್ತಿದ್ದಾರೆ. ಸಮಶೀತೋಷ್ಣ ವಲಯದ ಮರಳುಗಾಡಿನಲ್ಲಿ ಮಾತ್ರವೇ ಬೆಳೆಯ ಬಹುದಾದ ಖರ್ಜೂರವನ್ನು ಬೆಳೆಯು ತ್ತಿರುವುದು ಮಲ್ಲಾರು ಗ್ರಾ.ಪಂ. ಮಾಜಿ ಅಧ್ಯಕ್ಷ / ಕಾಪುವಿನ ಉದ್ಯಮಿ ಮಹಮ್ಮದ್‌ ಸಾದಿಕ್‌ ದೀನಾರ್‌.

ಮಲ್ಲಾರು ಗ್ರಾಮದ ಕೊಂಬ ಗುಡ್ಡೆಯ ಸಾದಿಕ್‌ ತಮ್ಮ ಮನೆಯ ವರಾಂಡದಲ್ಲಿ ಮೂರು ಖರ್ಜೂರದ ಗಿಡಗಳನ್ನು ಬೆಳೆಸಿದ್ದಾರೆ. ಎರಡು ಗಿಡಗಳು ಈಗಾಗಲೇ ಫ‌ಲ ನೀಡು ತ್ತಿವೆ. ಈಗ ಇದೇ ಗ್ರಾಮದ ಇನ್ನೆರಡು ಕುಟುಂಬಗಳು ಖರ್ಜೂರ ಬೆಳೆಗೆ ಆಸಕ್ತಿ ತೋರಿವೆ. ಕಾಪುವಿನ ಉದ್ಯಮಿಗಳಾದ ನಜೀರ್‌ ಅಹಮದ್‌ 3 ಗಿಡಗಳನ್ನು ನೆಟ್ಟಿದ್ದರೆ, ಮತ್ತೋರ್ವ ಉದ್ಯಮಿ ಮಹಮ್ಮದ್‌ ಅಸ್ಲಂ ಖಾಝಿ ಅವರು 8 ಗಿಡಗಳನ್ನು ನೆಟ್ಟಿದ್ದಾರೆ.

ಗಿಡಕ್ಕೆ ಹತ್ತು ಸಾವಿರ ರೂ.
ಅರಬ್‌ ರಾಷ್ಟ್ರಕ್ಕೆ ತೆರಳಿದ್ದ ಸಂದರ್ಭ ಸಂಬಂಧಿಕರು ತಿಳಿಸಿದ ಮೇರೆಗೆ ಮಹಮ್ಮದ್‌ ಸಾದಿಕ್‌ ಖರ್ಜೂರ ಗಿಡವನ್ನು ನೆಡಲು ಚಿಂತನೆ ನಡೆಸಿ, ಆಂಧ್ರಪ್ರದೇಶದ ಧರ್ಮಪುರಿಯಿಂದ 10 ವರ್ಷದ ಗಿಡವನ್ನು 10 ಸಾವಿರ ರೂ. ಕೊಟ್ಟು ತರಿಸಿದರು. ಈ ಗಿಡಗಳು ನೆಟ್ಟ ವರ್ಷದೊಳಗೆ ಫಲ ನೀಡಿರುವುದು ವಿಶೇಷ. ಸುಮಾರು 15ರಿಂದ 20 ಕೆಜಿ ಇಳುವರಿ ಪ್ರಥಮ ವರ್ಷದಲ್ಲೇ ದೊರೆತಿದೆ. ಆದ ಕಾರಣ ಸಾದಿಕ್‌ ತಮ್ಮ ಪರಿಸರದ ಮನೆಗಳಿಗೆ ಅವುಗಳನ್ನು ಹಂಚುತ್ತಿದ್ದಾರೆ.

ಹೂ ಬಿಟ್ಟ ಬಳಿಕ ವಿಶೇಷ ಆರೈಕೆ
ಗಿಡಗಳಲ್ಲಿ ಹೂವು ಬಿಟ್ಟಾಗ ದುಬಾೖ ಯಲ್ಲಿರುವ ಸಂಬಂಧಿಕರನ್ನು ಮತ್ತು ಪರಿಚಯದ ನರ್ಸರಿಯವರನ್ನು ಸಂಪರ್ಕಿಸಿ ಅವರಿಗೆ ಈ ಬಗ್ಗೆ ಮಾಹಿತಿ ಪಡೆಯಲಾಗಿದ್ದು ಅವರ ಸಲಹೆಯಂತೆ ಆರೈಕೆ ಮಾಡಿದ್ದೇನೆ. ಎರಡು ವಾರಗಳ ಬಳಿಕ ಫಸಲು ಬರಲು ಆರಂಭವಾಗಿದ್ದು, ಈಗ ಹೇರಳ ಹಣ್ಣುಗಳನ್ನು ನೋಡಿ ಖುಷಿ ಮತ್ತು ಅಚ್ಚರಿ ಉಂಟಾಗಿದೆ ಎನ್ನುತ್ತಾರೆ ಕರಾವಳಿ ಮಣ್ಣಿನಲ್ಲಿ ಖರ್ಜೂರ ಬೆಳೆದ ಮಹಮ್ಮದ್‌ ಸಾದಿಕ್‌.

ನೀರು ಅತ್ಯಗತ್ಯ
ಖರ್ಜೂರ ಉಷ್ಣ ವಲಯದ ಬೆಳೆ. ಹೂ ಬಿಡುವಾಗ, ಕಾಯಿ ಕಚ್ಚುವಾಗ ಹೆಚ್ಚು ಉಷ್ಣ ಪರಿಸ್ಥಿತಿ ಇರಬೇಕು. ಹಲವು ಬಗೆಯ ಮಣ್ಣುಗಳಲ್ಲಿ ಬೆಳೆಯ ಬಲ್ಲವಾದರೂ ನೀರು ಮತ್ತು ಗಾಳಿ ಸರಾಗವಾಗಿ ಚಲಿಸಬಲ್ಲಂಥ ಪ್ರದೇಶ ಬೇಕು. ಬೇರುಗಳು ನೆಲದಲ್ಲಿ 6 ಅಡಿ – 9 ಅಡಿಯಷ್ಟು ಆಳಕ್ಕೆ ಇಳಿಯುವುದರಿಂದ ಅಷ್ಟು ಆಳದವರೆಗೆ ತೇವವಿರುವಂತೆ ನೋಡಿಕೊಳ್ಳಬೇಕು ಎನ್ನುತ್ತಾರೆ ಸಾದಿಕ್‌.

ಪ್ರವಾದಿ ಪ್ರಸಾದ ರೂಪದಲ್ಲಿ ಸ್ವೀಕಾರ
ಖರ್ಜೂರ ಹಣ್ಣು ಪ್ರವಾದಿಯವರ ಇಷ್ಟದ ಹಣ್ಣಾಗಿದ್ದು ಹಿಂದೂಗಳ ತುಳಸಿ ಗಿಡದಂತೆಯೇ ಮುಸ್ಲಿಮರ ಪವಿತ್ರ ಗಿಡ. ಇದನ್ನು ಮನೆಯ ವರಾಂಡದಲ್ಲಿ ನೆಟ್ಟು, ಪ್ರತೀ ದಿನ ಅದರ ದರ್ಶನ ಮಾಡಬೇಕೆಂಬ ಚಿಂತನೆಯೊಂದಿಗೆ ಖರ್ಜೂರ ಗಿಡವನ್ನು ನೆಡಲಾಗಿತ್ತು. ಆದರೆ ಗಿಡ ಬೆಳೆದು ಹೂ ಬಿಟ್ಟು ಫಲ ನೀಡಿರುವುದು ತುಂಬಾ ಸಂತೋಷವಾಗಿದೆ.
– ಮಹಮ್ಮದ್‌ ಸಾದಿಕ್‌

ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.