ಕಾರ್ಕಳದಲ್ಲಿ ಡೇ ಟು ಡೇ ಡಿಜಿಟಲ್ ಮಳಿಗೆ ಆರಂಭ
Team Udayavani, Dec 8, 2017, 1:43 PM IST
ಕಾರ್ಕಳ: ಮೊಬೈಲ್ ಮಾರಾಟದಲ್ಲಿ ಹೆಸರಾಗಿರುವ ಡೇ ಟು ಡೇ ಡಿಜಿಟಲ್ನ ನೂತನ ಮಳಿಗೆ ಕಾರ್ಕಳ ಬಸ್ ನಿಲ್ದಾಣದ ಬಳಿಯ ಸೊವೆರಿನ್ ಕಾಂಪ್ಲೆಕ್ಸ್ನಲ್ಲಿ ಗುರುವಾರ ಆರಂಭಗೊಂಡಿತು.
ಕಾರ್ಕಳ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಅವರು ನೂತನ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ಪುರಸಭಾ ಉಪಾಧ್ಯಕ್ಷ ಗಿರಿಧರ್ ನಾಯಕ್, ಬಿ.ಆರ್.ಕೆ. ಕ್ಯಾಶ್ಯೂ ಇಂಡಸ್ಟ್ರೀಸ್ನ ಬೋಳ ರಮಾನಾಥ ಕಾಮತ್, ಕಾರ್ಕಳ ನರ್ಸಿಂಗ್ ಹೋಂನ ಡಾ| ಮಂಜುನಾಥ ಕಿಣಿ, ಶ್ರೀ ದೇವಿ ಕ್ಯಾಶ್ಯೂನ ಗಣೇಶ್ ಕಾಮತ್, ಸೊವೆರಿನ್ ಎಲೆಕ್ಟ್ರಾನಿಕ್ಸ್ನ ಪಾಂಡುರಂಗ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
ಉದ್ಘಾಟನಾ ಕೊಡುಗೆ ಮಳಿಗೆ ಆರಂಭಗೊಂಡ ಪ್ರಯುಕ್ತ ಸಂಸ್ಥೆಯು ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಎಲ್ಲ ಫೋನ್ಗಳ ಖರೀದಿಯ ಮೇಲೆ ಗಿಫ್ಟ್ ಹ್ಯಾಂಪರ್, ಗ್ಯಾರಂಟಿ, ಇನ್ಶೂರೆನ್ಸ್, ಒಂದು ತಿಂಗಳ ಉತ್ಪನ್ನ ಭದ್ರತೆ, ಉಚಿತ ಹೋಂ ಡೆಲಿವರಿ, ಮೊದಲಾದ ಕೊಡುಗೆಗಳನ್ನು ನೀಡಲಾಗುತ್ತಿದೆ. ಡಿ. 31ರ ವರೆಗೆ ಈ ವಿಶೇಷ ಕೊಡುಗೆಗಳು ಲಭ್ಯವಿವೆ. ಸಂಸ್ಥೆಯಲ್ಲಿ ಎಲ್ಲ ಕಂಪೆನಿಗಳ ಮೊಬೈಲ್ ಫೋನ್ಗಳು, ಬಿಡಿಭಾಗಗಳು ಆಕರ್ಷಕ ದರದಲ್ಲಿ ಲಭ್ಯವಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ