ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಜಿಲ್ಲಾಧಿಕಾರಿಯಿಂದ ಪರಿಶೀಲನೆ
Team Udayavani, Sep 22, 2020, 10:47 AM IST
ಉಡುಪಿ: ಕುಸಿಯುವ ಭೀತಿ ಎದುರಿಸುತ್ತಿರುವ ಮಣಿಪಾಲದ ಕುಂಡೇಲು ಕಾಡು ಗುಡ್ಡದಲ್ಲಿರುವ ಬಹುಮಹಡಿ ಕಟ್ಟಡದ ಬಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಕಟ್ಟಡದ ಭದ್ರತೆ ಮತ್ತು ಕಾಗದ ಪತ್ರಗಳನ್ನು ಪರಿಶೀಲಿಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಎರಡು ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಸೋಮವಾರ ಮಣಿಪಾಲದ ಪ್ರೀಮಿಯರ್ ಎನ್ಕ್ಲೇವ್ ಕಟ್ಟಡದ ರಕ್ಷಣಾ ತಡೆಗೋಡೆ ಕುಸಿದಿದ್ದು, ಸುರಕ್ಷೆಯ ಹಿನ್ನೆಲೆಯಲ್ಲಿ ಕಟ್ಟಡ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಮಣಿಪಾಲ : ಕುಸಿಯುವ ಭೀತಿಯಲ್ಲಿದೆ ಎಂಟು ಅಂತಸ್ತಿನ ಕಟ್ಟಡ!
ಉಡುಪಿ- ಮಣಿಪಾಲದ ಮಾರ್ಗವಾಗಿ ಸಿಗುವ (ಹಿಂದಿನ ಕುಂಡೇಲುಕಾಡಿನ ಗುಡ್ಡ) ಸಿಂಡಿಕೇಟ್ ಸರ್ಕಲ್ನಲ್ಲಿ 2004-2005ರಲ್ಲಿ ನಿರ್ಮಾಣಗೊಂಡ ಬಹುಮಹಡಿ ಕಟ್ಟಡ ಇದಾಗಿದೆ. ಸೆ. 20ರಂದು ಸಂಜೆ 6 ಗಂಟೆಯ ಹೊತ್ತಿಗೆ ರಕ್ಷಣಾ ತಡೆಗೋಡೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿತ್ತು. ಸೆ. 21ರ ಸಂಜೆ 5 ಗಂಟೆಯ ವೇಳೆಗೆ ಭಾರೀ ಪ್ರಮಾಣದಲ್ಲಿ ಕಟ್ಟಡದ ರಕ್ಷಣಾ ತಡೆಗೋಡೆಯ ಮಣ್ಣು ಕುಸಿತವಾಗಿದೆ. ಜತೆಗೆ ಕೆಳಗಿನ ಗುಡ್ಡವು ಮೋರಿ ಸಹಿತ ಜರಿದಿದೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯಾಡಳಿತ ಹಾಗೂ ಪೊಲೀಸರು ಕಟ್ಟಡ ಮುಂಭಾಗದ ಉಡುಪಿ- ಮಣಿಪಾಲದ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ