ಡಿಸಿ ಕಚೇರಿ ಅನಗತ್ಯ ಪ್ರವೇಶಕ್ಕೆ ಕಡಿವಾಣ
Team Udayavani, Apr 12, 2020, 3:13 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದ್ದರೂ, ಮುಂಜಾಗ್ರತೆ ಕ್ರಮವಾಗಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ.
ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಶನಿವಾರದಿಂದ ಉಡುಪಿ ಜಿಲ್ಲೆಯ ಸಂಪರ್ಕ ಗಡಿಗಳನ್ನು ಸಂಪೂರ್ಣ ಬಂದ್ಗೆ ಸೂಚನೆ ನೀಡಿದ್ದಾರೆ. ಜಿಲ್ಲೆಗೆ ಅನ್ಯ ಜಿಲ್ಲೆಗಳಿಂದ ಬರುವುದನ್ನು ತಪ್ಪಿಸಲು ಮತ್ತು ಜಿಲ್ಲೆಯಿಂದ ಹೊರಗಡೆ ಹೋಗುವುದಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇನ್ನು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾರ್ವಜನಿಕರು ಅನಗತ್ಯವಾಗಿ ಆಗಮಿಸುವುದಕ್ಕೆ ಪೂರ್ಣ ಪ್ರಮಾಣದಲ್ಲಿ ನಿರ್ಬಂಧ ವಿಧಿಸಲಾಗಿದೆ.
ಕಡಿವಾಣ
ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೆಲವರು ಸಣ್ಣಪುಟ್ಟ ಕಾರಣಕ್ಕೆ ಕಚೇರಿಗೆ ಬರುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು ವೈದ್ಯಕೀಯ ದೃಢಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿಯನ್ನು ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ.
-ಜಿ. ಜಗದೀಶ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ