ಹೆಬ್ರಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
Team Udayavani, Oct 20, 2019, 5:24 AM IST
ಹೆಬ್ರಿ: ಹೆಬ್ರಿ ತಾಲೂಕು ಕಚೇರಿಗೆ ಅ.18ರಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಭೇಟಿ ನೀಡಿ ಅಲ್ಲಿಯ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.
ಹೆಬ್ರಿ ತಾಲೂಕು ಘೋಷಣೆಗೊಂಡು ಸುಮಾರು ಎರಡು ವರ್ಷಗಳಾಗುತ್ತಾ ಬಂದರೂ ಇನ್ನೂ ಪೂರ್ಣ ಪ್ರಮಾಣದ ತಾಲೂಕು ಕಾರ್ಯಾರಂಭವಾಗದ ಕುರಿತು, ಜನರ ಪ್ರಮುಖ ಬೇಡಿಕೆಯಾದ ಆಧಾರ್, ಅಟಲ್ ಜೀ ಸೇವಾ ಕೇಂದ್ರ ಮೊದಲಾದ ತುರ್ತು ಕಚೇರಿಗಳ ಕೆಲಸ ಆರಂಭವಾಗದ ಬಗ್ಗೆ ಹೆಬ್ರಿ ತಹಶೀಲ್ದಾರ್ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.
ಶೀಘ್ರ ಸಮಸ್ಯೆ ಪರಿಹಾರ
ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ ತುರ್ತು ಸೇವೆಗಳ ಕಚೇರಿಯನ್ನು ಶೀಘ್ರ ಆರಂಭಿಸಲಿದ್ದು ತಾಲೂಕಿನ ವಿವಿಧ ಇಲಾಖೆಗಳನ್ನು ಕೂಡಲೇ ತರುವಂತೆ ಪ್ರಯತ್ನಿಸಲಾಗುವುದು ಎಂದರು.
ತಹಶೀಲ್ದಾರ್ಗೆ ಮೆಚ್ಚುಗೆ
ಸಕಾಲ ಸೇವೆಗಳ ಆಧಿನಿಯಮದಡಿ ನಿಗದಿತ ಕಾಲಮಿತಿಯಲ್ಲಿ ರಾಜ್ಯದ ನಾಗರಿಕರಿಗೆ ಸೇವೆ ಒದಗಿಸಿ ತಮ್ಮ ಕರ್ತವ್ಯಪ್ರಜ್ಞೆಯಿಂದ ಕೆಲಸ ನಿರ್ವಹಿಸಿ ಪ್ರಮುಖ ಪಾತ್ರ ವಹಿಸಿದ್ದ ಹೆಬ್ರಿ ತಾಲೂಕು ತಹಶೀಲ್ದಾರ್ ಮಹೇಶ್ಚಂದ್ರ ಅವರ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್,ಹೆಬ್ರಿ ಗ್ರಾ.ಪಂ.ಅಧ್ಯಕ್ಷ ಎಚ್.ಕೆ. ಸುಧಾಕರ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ