ಬಡಾಎರ್ಮಾಳು ಕಡಲ್ಕೊರೆತ ಪ್ರದೇಶಕ್ಕೆ ಡಿಸಿ ಭೇಟಿ
Team Udayavani, Aug 1, 2019, 6:33 AM IST
ಪಡುಬಿದ್ರಿ: ಉಚ್ಚಿಲ ಬಡಾ ಗ್ರಾಮದ ಎರ್ಮಾಳು ಬಡಾದಲ್ಲಿ ಸಮುದ್ರ ಕೊರೆತ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಅಧಿಕಾರಿಗಳ ತಂಡವು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ಭಾಗದಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು ಸುರಕ್ಷತೆಗಾಗಿ ಅಳವಡಿಸಲಾಗಿದ್ದ ದೊಡ್ಡ ಗಾತ್ರದ ಕಲ್ಲುಗಳು ಕಡಲ ಪಾಲಾಗಿವೆ.
ಸಮುದ್ರದ ಅಲೆಗಳ ಮತ್ತಷ್ಟು ಹೊಡೆತ, ಕೊರೆತದಿಂದಾಗಿ 7 ತೆಂಗಿನ ಮರಗಳು ಬುಡ ಸಮೇತವಾಗಿ ಸಮುದ್ರ ಸೆಳೆತಕ್ಕೊಳಗಾಗಿವೆ.
ಜಿ.ಪಂ. ಸದಸ್ಯೆ ಶಿಲ್ಪಾ ಜಿ.ಸುವರ್ಣ ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರರಲ್ಲಿ ಈ ಭಾಗದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ರಾತ್ರಿ 8 ಗಂಟೆಯ ಸುಮಾರಿಗೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಕೆಪಿಐಡಿಎಲ್ ಅಧಿಕಾರಿ ಕೃಷ್ಣ ಹೆಬ್ಟಾರ್, ಪ್ರಭಾರ ಪ್ರವಾಸೋದ್ಯಮ ಇಲಾಖಾಧಿಕಾರಿ ಚಂದ್ರಶೇಖರ್, ರೆವೆನ್ಯೂ ಇನ್ಸ್ಪೆಕ್ಟರ್ ರವಿಶಂಕರ್, ಗ್ರಾಮ ಲೆಕ್ಕಿಗರಾದ ಜಗದೀಶ್,
ಶ್ಯಾಮ ಸುಂದರ್, ಆರುಣ್, ಬಡಾ ಗ್ರಾ. ಪಂ.ಸದಸ್ಯ ಶಿವಕುಮಾರ್ ಮೆಂಡನ್, ಗ್ರಾ. ಪಂ.ಸಿಬಂದಿ ಶಶಿಕಾಂತ್ ಪೂಜಾರಿ, ಸ್ಥಳೀಯರಾದ ಉದಯ ಕುಮಾರ್, ಶಿವಾಜಿ ಅಮೀನ್, ರೋಹಿದಾಸ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ನಡಿಪಟ್ಣಕ್ಕೂ ಭೇಟಿ
ಪಡುಬಿದ್ರಿ ನಡಿಪಟ್ಣ ಶ್ರೀ ವಿಷ್ಣು ಭಜನ ಮಂದಿರ ಪರಿಸರದಲ್ಲಿಯೂ ಕಡಲ್ಕೊರೆತದ ಭೀತಿ ಇದ್ದುದರಿಂದ ಜಿಲ್ಲಾಧಿಕಾರಿ ಪರಿಶೀಲಿಸಿದ್ದಾರೆ ಎಂದು ಜಿ.ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ ಮಾಹಿತಿ ನೀಡಿದ್ದಾರೆ.
ಮುಕ್ಕದಲ್ಲೂ ಕಡಲ್ಕೊರೆತ
ಸುರತ್ಕಲ್: ಇಲ್ಲಿನ ಮುಕ್ಕ ಬಳಿಯ ಸಮುದ್ರ ಕಿನಾರೆಯಲ್ಲಿ ಕಡಲ್ಕೊರೆತ ಉಂಟಾಗಿದ್ದು ಬೃಹತ್ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ