ಬಿಲ್ಲವ-ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಬೆಂಬಲ : ಡಿಸಿಎಂ ಡಾ| ಅಶ್ವಥ ನಾರಾಯಣ


Team Udayavani, Nov 28, 2020, 11:32 AM IST

ಬಿಲ್ಲವ-ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಬೆಂಬಲ : ಡಿಸಿಎಂ ಡಾ| ಅಶ್ವಥ ನಾರಾಯಣ

ಕಾಪು: ಬಿಲ್ಲವ – ಈಡಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಯ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆ ಸ್ವಾಗತಾರ್ಹವೇ ಆಗಿದ್ದು, ವಿವಿಧ ಜಾತಿ, ಪಂಗಡ ಮತ್ತು ಸಮುದಾಯಗಳ ಜನರ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಸಮುದಾಯದ ಜನರು ತಮ್ಮ ಸಮುದಾಯದ ಬೇಡಿಕೆಗಳನ್ನು ಸರಕಾರದ ಮುಂದಿಡುವುದು ಜನರ ಕರ್ತವ್ಯವಾಗಿದೆ. ಬಿಲ್ಲವ – ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಬಗೆಗಿನ ಪ್ರಸ್ತಾಪ ಸ್ವಾಗತಾರ್ಹವಾಗಿದೆ ಎಂದ ಉಪಮುಖ್ಯಮಂತ್ರಿ ಡಾ| ಅಶ್ವಥ ನಾರಾಯಣ ಹೇಳಿದರು.

ಶುಕ್ರವಾರ ಸಂಜೆ ಬೆಳಪು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿವಿ ಸಂಯೋಜಿತ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಬೆಳಪುವಿನಲ್ಲಿ ರಾಜ್ಯಕ್ಕೇ ಮಾದರಿಯಾಗುವಂತೆ ವಿಜ್ಞಾನ ಸಂಶೋಧನಾ ಕೇಂದ್ರ, ಸರಕಾರಿ ಪಾಲೆಟ್ನಿಕ್ ಕಾಲೇಜು ಮತ್ತು ಸಣ್ಣ ಕೈಗಾರಿಕಾ ಪಾರ್ಕ್ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಇದಕ್ಕೆ ಪೂರಕವಾಗಿ ವಿವಿಧ ಮೂಲಗಳಿಂದ ಸಂಪನ್ಮೂಲಗಳನ್ನು ಕ್ರೋಡಿಸಿಕರಿಸಿಕೊಂಡು ವೇಗವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲು ಪ್ರಯತ್ನಿಸಲಾಗುವುದು. ವಿಜ್ಞಾನ ಸಂಶೋಧನಾ ಕೇಂದ್ರ ಸಹಿತವಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜೋಡಿಸುವ ಮೂಲಕ ಬೆಳಪು ಮಾದರಿ ಗ್ರಾಮವಾಗಿ ಮೂಡಿ ಬರುತ್ತಿದೆ. ಮಾದರಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಗ್ರಾಮಾಭಿವೃದ್ಧಿಗೆ ಪೂರಕವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಲಾಲಾಜಿ ಆರ್. ಮೆಂಡನ್, ಗ್ರಾ. ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಸಮರ್ಪಣಾ ಮನೋಭಾವದ ಸೇವೆ ಶ್ಲಾಘನೀಯವಾಗಿದೆ ಎಂದರು.

ಇದನ್ನೂ ಓದಿ:ಮದುವೆ ಮಾಡಿಕೊಳ್ಳುವುದಾಗಿ ಹೇಳಿದಾತ ಲಕ್ಷಾಂತರ ರೂ. ಲೂಟಿ ಮಾಡಿ ಪರಾರಿ ಆದ.!

ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಈಗಾಗಲೇ ಬಲಿಷ್ಟವಾಗಿ ಬೆಳೆದಿದ್ದು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ಮತ್ತಷ್ಟು ಬಲಯುತವಾಗಿದೆ. ಪ್ರತೀ ವ್ಯಕ್ತಿಯ ರಾಜಕೀಯ ಬುನಾದಿಗೆ ಗ್ರಾಮ ಪಂಚಾಯತ್ ಚುನಾವಣೆಯೇ ಪೂರಕವಾಗಿದ್ದು, ರಾಜ್ಯಾದ್ಯಂತ ಈ ಬಾರಿ ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರ ಆಡಳಿತದ ನಿರೀಕ್ಷೆಯಲ್ಲಿದ್ದೇವೆ. ಅದಕ್ಕೆ ಪೂರ್ವಭಾವಿಯಾಗಿ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಕೇಂದ್ರ-ರಾಜ್ಯಗಳು ನಡೆಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ನಡೆಸುತ್ತಿದ್ದು, ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಸಚಿವ ಸ್ಥಾನ ನಿರೀಕ್ಷೆಯ ಬಗ್ಗೆ ಮಾತನಾಡಿದ ಅವರು ರಾಜಕೀಯದಲ್ಲಿ ಎಲ್ಲರಿಗೂ ನಿರೀಕ್ಷೆ, ಆಕಾಂಕ್ಷೆಗಳು ಸಹಜ. ಇದ್ದ ಒಂದು ಸ್ಥಾನದಿಂದ ಮೇಲಿನ ಸ್ಥಾನಕ್ಕೆ ಹೋಗಬೇಕು. ಬೇರೆ ಬೇರೆ ಅವಕಾಶಗಳನ್ನು ಪಡೆದುಕೊಳ್ಳಬೇಕೆಂಬ ಜನಪ್ರತಿನಿಧಿಗಳ ಆಸೆ ಸಹಜವೇ ಆಗಿದೆ. ಶಾಸಕ ಲಾಲಾಜಿ ಅವರದ್ದು ಸರಳ ವ್ಯಕ್ತಿತ್ವವಾಗಿದ್ದು, ಪಕ್ಷ ಮತ್ತು ಸರಕಾರದಲ್ಲಿ ಅವರಿಗೆ ಒಳ್ಳೆಯ ಗೌರವವಿದೆ. ಸರಕಾರದಲ್ಲಿಯೂ ಒಳ್ಳೆಯ ಅವಕಾಶಗಳು ಸಿಗುವ ನಿರೀಕ್ಷೆಯಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧರಿಸುತ್ತಾರೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ವಿವಿಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.