ಶಂಕರನಾರಾಯಣ: ನದಿಯಲ್ಲಿ ನಾಪತ್ತೆಯಾದ ಯುವತಿ ಶವ ಪತ್ತೆ
Team Udayavani, Jul 5, 2019, 9:38 AM IST
ಸಿದ್ದಾಪುರ: ನದಿಗೆ ಬಟ್ಟೆ ತೊಳೆಯಲು ಹೋಗಿ ನಾಪತ್ತೆಯಾಗಿದ್ದ ಶಂಕರನಾರಾಯಣ ಗ್ರಾಮದ ಕುಳ್ಳುಂಜೆ ಗುಂಡುಕೊಡ್ಲು ಲಕ್ಷ್ಮಣ ನಾಯ್ಕ ಅವರ ಪುತ್ರಿ ಅಮಿತಾ (21) ಅವರ ಮೃತದೇಹವು ಗುರುವಾರದಂದು ಮನೆಯಿಂದ ಅರ್ಧ ಕಿ.ಮೀ. ದೂರದ ವಾರಾಹಿ ಹೊಳೆಯಲ್ಲಿ ಪತ್ತೆಯಾಗಿದೆ.
ಅವರು ಬುಧವಾರ ಬೆಳಗ್ಗೆ 9.30ರ ಹೊತ್ತಿಗೆ ಬಟ್ಟೆ ತೊಳೆಯಲು ಹೋಗಿದ್ದಾಗ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಅರ್ಧ ಕಿ. ಮೀ. ದೂರದ ಹೊಳೆಯಲ್ಲಿ ಬೆಳೆದ ಮರದ ಬೇರಿಗೆ ಶವದ ಬಟ್ಟೆ ಸಿಕ್ಕಿಹಾಕಿಕೊಂಡಿತ್ತು. ಸ್ಥಳೀಯರಾದ ದಿನಕರ ಶೆಟ್ಟಿ ಅವರು ತಮ್ಮ ತೆಪ್ಪದ ಮೂಲಕ ಪೊಟರೆಯಲ್ಲಿ ಸಿಕ್ಕಿ ಹಾಕಿಕೊಂಡ ಶವವನ್ನು ಮೇಲೆತ್ತಿ ಪೊಲೀಸರಿಗೆ ಹಸ್ತಾಂತರಿಸಿದರು.
ಶಾಸಕರ ಭೇಟಿ: ಸ್ಥಳಕ್ಕೆ ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ಸಂತಾಪ ಸೂಚಿಸಿದರು. ಶಂಕರನಾರಾಯಣ ಪೊಲೀಸರು ಶವ ಪರೀಕ್ಷೆ ನಡೆಸಿ, ಮನೆಯವರಿಗೆ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ