ಮಹಿಳೆಯನ್ನು ಕೊಂದು ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಸುತ್ತಿ ಬಾವಿಗೆ ಎಸೆದರು!
ಕಾರ್ಕಳದ ಬೆಳ್ಮಣ್ ನ ಮಹಿಳೆಯ ಮೃತದೇಹ ಕಲ್ಯಾದಲ್ಲಿ ಪತ್ತೆ
Team Udayavani, Dec 23, 2019, 12:23 PM IST
ಪಳ್ಳಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳ್ಮಣ್ ಗ್ರಾಮದ ಮಹಿಳೆಯ ಮೃತದೇಹ ಕಲ್ಯಾ ಗ್ರಾಮದ ಮನೆಯೊಂದರ ಬಾವಿಯಲ್ಲಿ ಪತ್ತೆಯಾಗಿದೆ. ಲಾಭಕ್ಕಾಗಿ ಕೊಲೆಗೈದು ಇಲ್ಲಿ ತಂದು ಹಾಕಿರಬಹುದಾದ ಶಂಕೆ ವ್ಯಕ್ತವಾಗಿದೆ.
ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಬೃಂದಾವನ ಮನೆ ನಿವಾಸಿ ಭರತಲಕ್ಷ್ಮೀ ಉಡುಪ (68) ಕೊಲೆಯಾದ ಮಹಿಳೆ.
ಕಲ್ಯಾ ಗ್ರಾಮದ ಮೂಡುಮನೆ ಶಕುಂತಲಾ ಎಂಬವರ ಮನೆಯಲ್ಲಿ ರವಿವಾರ ಸಂಜೆ ಏಳು ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಪ್ಲಾಸ್ಟಿಕ್ ಟರ್ಪಾಲಿನಲ್ಲಿ ಕಟ್ಟಿ ಬಾವಿಗೆಸಿದಿದ್ದರು. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಶಕುಂತಲಾ ಅವರ ಮನೆಯಲ್ಲಿ ಸಾಮಾನ್ಯವಾಗಿ ಯಾರೂ ಇರುತ್ತಿರಲಿಲ್ಲ. ಶಕುಂತಲಾ ಅವರು ಗಂಡನ ಮನೆಯಲ್ಲಿ ವಾಸವಿದ್ದು, ಅಪರೂಪಕ್ಕೆ ಈ ಮನೆಗೆ ಬರುತ್ತಿದ್ದರು. ಈ ವಿಷಯವನ್ನು ತಿಳಿದವರೇ ಶಕುಂತಲಾ ಅವರ ಮನೆಯ ಬಾವಿಗೆ ತಂದು ಹಾಕಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು