ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕೋಡಿ ಸೇತುವೆ ಕಾಮಗಾರಿ ಸ್ಥಗಿತ ; ಒಂದು ಸೇತುವೆ ಬಹುತೇಕ ಪೂರ್ಣ

Team Udayavani, Sep 27, 2021, 5:47 AM IST

ಸ್ಥಳೀಯರಿಂದ ಪ್ರತಿಭಟನೆಗೆ ನಿರ್ಧಾರ

ಕುಂದಾಪುರ: ವಿನಾಯಕ ಥಿಯೇಟರ್‌ ಬಳಿಯಿಂದ ಕೋಡಿ ಪ್ರದೇಶಕ್ಕೆ ತೆರಳುವ ರಸ್ತೆಯಲ್ಲಿ ಎರಡು ಸೇತುವೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈಗ ಮಳೆಗಾಲದ ನೆಪದಲ್ಲಿ ಕಾಮಗಾರಿ ಸ್ಥಗಿತವಾಗಿದ್ದು ಇನ್ನೂಪುನರಾರಂಭಿಸದ ಕಾರಣ ಸ್ಥಳೀಯರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಒಂದು ಸೇತುವೆ ಬಹುತೇಕ ಪೂರ್ಣವಾಗಿದ್ದರೂ ಓಡಾಟಕ್ಕೆ ಇನ್ನೂ ಬಿಟ್ಟುಕೊಟ್ಟಿಲ್ಲ. ಇನ್ನೊಂದು ಕಾಮಗಾರಿ ಆರಂಭದ ಹಂತದಲ್ಲಿದೆ.ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಯತ್ನದಿಂದ ಕೋಡಿಯ ಎರಡು ಸೇತುವೆಗಾಗಿ 2 ಕೋ.ರೂ. ವೆಚ್ಚದಲ್ಲಿ ಮಂಜೂರಾಗಿತ್ತು. ಕಾಮಗಾರಿ ಆರಂಭವಾಗಿ ಮಾರ್ಚ್‌, ಎಪ್ರಿಲ್‌ ವೇಳೆಗೆ ಪೂರ್ಣ ಆಗಬೇಕಿತ್ತು. ಲಾಕ್‌ಡೌನ್‌ ಆರಂಭವಾದ ಕಾರಣ ಕಾಮಗಾರಿ ನನೆಗುದಿಗೆ ಬಿತ್ತು.ಜತೆಗೆ ಕಾಮಗಾರಿಯಲ್ಲಿ ಒಂದಷ್ಟು ಮಾರ್ಪಾಡು ಮಾಡಲ್ಪಟ್ಟಿತ್ತು. ಸ್ಥಳೀಯ ಮನೆಗಳು ಬಿರುಕು ಬಿಡತೊಡಗಿದಾಗ ಮೂಲ ನಕ್ಷೆಯಲ್ಲಿ ಒಂದಷ್ಟು ಮಾರ್ಪಾಟು ಮಾಡಲಾಯಿತು.

ತಾತ್ಕಾಲಿಕ ಒಡ್ಡು ತೆರವು
ಈ ಮಧ್ಯೆ ಕಾಮಗಾರಿ ಆರಂಭಿಸಿ ಬಾಕಿಯಾದ ಬಳಿಕ ಮಳೆಗಾಲ ಆರಂಭ ವಾಯಿತು. ಆಗ ತಾತ್ಕಾಲಿಕವಾಗಿ ಮಾಡಿದ್ದ ಒಡ್ಡನ್ನು ತೆರವು ಮಾಡಬೇಕಾಗಿ ಬಂತು. ಇಲ್ಲದಿದ್ದರೆ ಬೀಜಾಡಿ, ಕೋಟೇಶ್ವರ ಮೊದಲಾದೆಡೆಯ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗುವ ಆತಂಕ ಇತ್ತು. ಇದರ ಬಳಿಕ ತಾತ್ಕಾಲಿಕವಾಗಿ ಕೋಡಿ ರಸ್ತೆಯೇ ಓಡಾಟಕ್ಕೆ ನಿರ್ಬಂಧಕ್ಕೊಳಗಾಯಿತು. ಅದಕ್ಕೂ ಮುನ್ನ ಘನವಾಹನಗಳು ಕೋಟೇಶ್ವರ, ಹಳೆ ಅಳಿವೆ ಮೂಲಕ ಓಡಾಟ ಆರಂಭಸಿದ್ದವು. ಫೆಬ್ರವರಿಯಿಂದ ಈಗಿನವರೆಗೂ ಅಲ್ಲಿಯೇ ಓಡಾಡುತ್ತಿವೆ.

ಇದನ್ನೂ ಓದಿ:6 ತಿಂಗಳ ಜೀವಿತಾವಧಿಯಿದ್ದರೂ, 7 ವರ್ಷ ಪೂರೈಸಿದ ಮಾಮ್‌!

ಈಗ ಶಾಲಾ ಕಾಲೇಜುಗಳು ಪ್ರಾರಂಭ
ವಾಗಿವೆ. ಕೋಡಿ ಸಮುದ್ರತೀರ, ಲೈಟ್‌ಹೌಸ್‌, ಸೀವಾಕ್‌ ಮೊದಲಾದೆಡೆಗೆ ಪ್ರವಾಸಿಗರು ಬರುತ್ತಿದ್ದಾರೆ. ಇವರಿಗೆಲ್ಲ ವಿನಾಯಕ ಬಳಿಯಿಂದ ಕೋಡಿಗೆ ಹೋಗಲು ಅಸಾಧ್ಯವಾಗಿರುವುದು ಸಮಸ್ಯೆಯಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗಂತೂ ತೀರಾ ಸಮಸ್ಯೆಯಾಗಿದೆ. ರಿಕ್ಷಾ ದವರೂ ಕೊಂಕಣ ಸುತ್ತಿ ಮೈಲಾರಕ್ಕೆ ಹೋದಂತೆ ಸುತ್ತು ಬಳಸಿ ಹೋಗ ಬೇಕಾದ ಕಾರಣ ಬಾಡಿಗೆ ದರವನ್ನು ಪ್ರಯಾಣಿಕರ ಮೇಲೆಯೇ ಹೇರಬೇಕಿದೆ. ಇಲಾಖೆಯಂತೂ ಕೂಡಲೇ ಕಾಮಗಾರಿ ಆರಂಭ ಎನ್ನುತ್ತಿದೆ. ಆದರೆ ಇದರ‌ ಲಕ್ಷಣ ಕಾಣುತ್ತಿಲ್ಲ. ಇದರಿಂದ ಜನತೆ ಇನ್ನು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಶೀಘ್ರ ಆರಂಭ
ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಫೆಬ್ರವರಿಯಲ್ಲಿ ಕೆಲಸದ ಆದೇಶವಾಗಿದ್ದು ಅದರ ಪ್ರಕಾರ ಅವರು ನವಂಬರ್‌ ಒಳಗೆ ಬಿಟ್ಟುಕೊಡಲೇಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಮಗಾರಿ ತತ್‌ಕ್ಷಣ ಆರಂಭಿಸಲಾಗುವುದು.
-ಹರ್ಷವರ್ಧನ್‌,
ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.